ಯಾರು ಹೆಚ್ಚು ಹಣ ಕೊಡುತ್ತಾರೋ ಅವರಿಗೆ ಪೋಸ್ಟಿಂಗ್‌: ಸರ್ಕಾರದ ವಿರುದ್ಧ ಪ್ರಲ್ಹಾದ್‌ ಜೋಶಿ ಆರೋಪ

Date:

Advertisements
  • ‘ರಾಜ್ಯ ಸರ್ಕಾರ ಪ್ರತಿಯೊಂದು ಹುದ್ದೆಯನ್ನೂ ಹರಾಜು ಹಾಕುತ್ತಿದೆ’
  • ‘ಯಾವುದೇ ಅಧಿಕಾರಿಯನ್ನು ಕೇಳಿದರೂ ಇದೇ ಮಾತು ಹೇಳುತ್ತಿದ್ದಾರೆ’

ರಾಜ್ಯ ಸರ್ಕಾರ ಪ್ರತಿಯೊಂದು ಹುದ್ದೆಯನ್ನೂ ಹರಾಜು ಹಾಕುತ್ತಿದೆ. 10 ಲಕ್ಷ ರೂ. ಬದಲು ಯಾರಾದರೂ 12 ಲಕ್ಷ ರೂ. ಕೊಡಲು ಮುಂದೆ ಬಂದರೆ ಅವರಿಗೆ ಪೋಸ್ಟಿಂಗ್ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಯಾವುದೇ ಅಧಿಕಾರಿಯನ್ನು ಕೇಳಿದರೂ ಇದನ್ನೇ ಹೇಳುತ್ತಿದ್ದಾರೆ. ಯಾರು ಹೆಚ್ಚು ಹಣ ಕೊಡುತ್ತಾರೆಯೋ ಅವರಿಗೆ ಪೋಸ್ಟಿಂಗ್‌ ಮಾಡಲಾಗುತ್ತಿದೆ. ಈ ಸರ್ಕಾರದಲ್ಲಿ ಶಾಸಕರು‌ ಬಂಡಾಯ ಏಳಲು ಕಾರಣ ಏನೆಂದರೆ, ಈ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ ಆಗಿರುವುದು” ಎಂದು ವಾಗ್ದಾಳಿ ನಡೆಸಿದರು.

“ವರ್ಗಾವಣೆ ದಂಧೆ ವಿಚಾರದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಇದು ಜನವಿರೋಧಿ ಸರ್ಕಾರ, ಸುಳ್ಳು ಹೇಳುವ ಸರ್ಕಾರ. ರಾಜ್ಯದ ಅಭಿವೃದ್ಧಿ ಮರೀಚಿಕೆಯಾಗಿದೆ. ಜನರು ಇದಕ್ಕೆ ಸೂಕ್ತ ಉತ್ತರ ನೀಡಲಿದ್ದಾರೆ” ಎಂದು ಹೇಳಿದರು.

Advertisements

“ಬಸ್​ನಲ್ಲಿ ಉಚಿತ ಪ್ರಯಾಣ ನೀಡುತ್ತಿದ್ದೇವೆ ಎನ್ನುತ್ತಿದ್ದಾರೆ. ಬಸ್​ ಓಡಾಡಲು ಒಳ್ಳೆ ರಸ್ತೆ ಬೇಕು. ರಸ್ತೆ ಕಾಮಗಾರಿಗೆ ಶಾಸಕರು ಅನುದಾನ ಕೇಳಿದರೆ ನಿರಾಕರಿಸುತ್ತಾರೆ. ಮಳೆ ಬಂದು ರಸ್ತೆಗಳಿಗೆ ಹಾನಿಯಾಗಿವೆ, ನಯಾಪೈಸೆ ಅನುದಾನ ಕೊಟ್ಟಿಲ್ಲ. ಯಾವುದೇ ಅಭಿವೃದ್ಧಿ ಕಾರ್ಯಕ್ಕೆ ಶಾಸಕರಿಗೆ ಸರ್ಕಾರ ಹಣ ನೀಡುತ್ತಿಲ್ಲ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಕುಮಾರಣ್ಣನ ಕುರಿತು ನನಗೂ ಒಂದಿಷ್ಟು ಮಾಹಿತಿ ಗೊತ್ತಿದೆ: ‌ಡಿಸಿಎಂ ಡಿಕೆ ಶಿವಕುಮಾರ್

ಕೊಲೆಗಡುಕರಿಗೆ ಧೈರ್ಯ ಬಂದಿದೆ

“ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಬಂದಮೇಲೆ ಕೊಲೆಗಡುಕರಿಗೆ ಮತ್ತಷ್ಟು ಧೈರ್ಯ ಬಂದಿದೆ. ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಘಟನೆ ನಡೆದಿದೆ. ಕಾಂಗ್ರೆಸ್ ಸರ್ಕಾರ ಇದೆ ಎಂದು ಅವರಿಗೆ ಇಷ್ಟೆಲ್ಲಾ ಧೈರ್ಯ ಬರುತ್ತಿದೆ” ಎಂದು ಹರಿಹಾಯ್ದರು.

“ಕಾಂಗ್ರೆಸ್ ಸರ್ಕಾರ ನಮಗೆ ರಕ್ಷಣೆ ಕೊಡುತ್ತದೆ ಎಂಬ ಭರವಸೆ ಅವರಿಗಿದೆ. ಹೀಗಾಗಿ ಕೊಲೆ ಮಾಡುವುದು, ಫೋಟೋ ಎಡಿಟ್, ಚಿತ್ರೀಕರಣ ಮಾಡುತ್ತಿದ್ದಾರೆ. ಸಾಮಾನ್ಯ ಜನರಿಗೆ ಈ ಸರ್ಕಾರದ ಮೇಲೆ ಭರವಸೆ ಹೋಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X