ಸಾಲ ಮನ್ನಾಕ್ಕಾಗಿ ಸಾಮಾಜಿಕ ಮಾಧ್ಯಮ ಬಿಜೆಪಿ ವಶಕ್ಕೆ ನೀಡಿದ ಆರೋಪ: ಪ್ರೀತಿ ಝಿಂಟಾ, ಕಾಂಗ್ರೆಸ್ ನಡುವೆ ವಾಕ್ಸಮರ

Date:

ಖ್ಯಾತ ನಟಿ ಪ್ರೀತಿ ಝಿಂಟಾ ಸುಮಾರು 18 ಕೋಟಿ ರೂಪಾಯಿ ಸಾಲ ಮನ್ನಾಕ್ಕೆ ಬದಲಾಗಿ ತನ್ನ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಬಿಜೆಪಿ ವಶಕ್ಕೆ ನೀಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ವರದಿಯನ್ನು ಕೇರಳ ಕಾಂಗ್ರೆಸ್ ಘಟಕ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಇದೊಂದು ನೀಚ ಗಾಸಿಪ್” ಎಂದು ನಟಿ ಪ್ರೀತಿ ಝಿಂಟಾ ಹೇಳಿದ್ದಾರೆ. ಆರೋಪವನ್ನು ತಳ್ಳಿ ಹಾಕಿದ್ದಾರೆ. ಸದ್ಯ ಈ ವಿಚಾರದಲ್ಲಿ ಕೇರಳ ಕಾಂಗ್ರೆಸ್ ಮತ್ತು ನಟಿ ನಡುವೆ ವಾಕ್ಸಮರ ಏರ್ಪಟ್ಟಿದೆ.

- Advertisement -

ಕೇರಳ ಕಾಂಗ್ರೆಸ್ ಟ್ವೀಟ್‌ಗೆ ಪ್ರೀತಿ ಝಿಂಟಾ ನೀಡಿರುವ ಪ್ರತಿಕ್ರಿಯೆಗೆ ಕಾಂಗ್ರೆಸ್ ಮರು ಪ್ರತಿಕ್ರಿಯೆ ನೀಡಿದೆ. “ನಾವು ಮಾಧ್ಯಮದ ವರದಿಗಳನ್ನು ಮಾತ್ರ ಹಂಚಿಕೊಂಡಿದ್ದೇವೆ. ಆದರೆ ಈ ವರದಿ ತಪ್ಪು ಎಂದು ಸಾಬೀತಾದರೆ ನಾವು ನಮ್ಮ ತಪ್ಪನ್ನು ಒಪ್ಪಿಕೊಳ್ಳಲು ಸಿದ್ಧವಾಗಿದ್ದೇವೆ” ಎಂದು ಕಾಂಗ್ರೆಸ್ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದನ್ನು ಓದಿದ್ದೀರಾ? ತ್ರಿಭಾಷಾ ನೀತಿ ಹೇರಿಕೆಗೆ ವಿರೋಧ: ಬಿಜೆಪಿ ತೊರೆದ ತಮಿಳು ನಟಿ ರಂಜನಾ ನಾಚಿಯಾರ್

ಹಣಕಾಸು ಅಕ್ರಮಗಳ ವರದಿಗಳ ಹಿನ್ನೆಲೆಯಲ್ಲಿ ಫೆಬ್ರವರಿ 15 ರಂದು ನ್ಯೂ ಇಂಡಿಯಾ ಕೋ-ಆಪರೇಟಿವ್ ಬ್ಯಾಂಕಿನ ಮಂಡಳಿಯನ್ನು ವಿಸರ್ಜಿಸಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ ತೆಗೆದುಕೊಂಡಿದೆ. ಇದಾದ ಬಳಿಕ ಕೆಲವು ಸುದ್ದಿಗಳು, ಊಹಾಪೋಹಗಳು ಹರಿದಾಡುತ್ತಿದೆ.

ಸೋಮವಾರ, ಕಾಂಗ್ರೆಸ್ ಕೇರಳದ ಎಕ್ಸ್ ಖಾತೆಯು ₹18 ಕೋಟಿ ಸಾಲ ಮನ್ನಾಕ್ಕೆ ಪ್ರತಿಯಾಗಿ ಝಿಂಟಾ ತನ್ನ ಸಾಮಾಜಿಕ ಮಾಧ್ಯಮ ಖಾತೆಗಳ ನಿಯಂತ್ರಣವನ್ನು ಬಿಜೆಪಿಗೆ ವರ್ಗಾಯಿಸಿದ್ದಾರೆ. ಬ್ಯಾಂಕ್ ಕುಸಿತದ ನಂತರ ಠೇವಣಿದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿದ ಸುದ್ದಿ ಲೇಖನವನ್ನು ಪೋಸ್ಟ್ ಮಾಡಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಝಿಂಟಾ ರಾಜಕೀಯ ಪಕ್ಷ ಸುಳ್ಳು ಸುದ್ದಿಯನ್ನು ಹರಡಿದೆ ಎಂದು ಟೀಕಿಸಿದ್ದಾರೆ. “ಇಲ್ಲ, ನಾನು ನನ್ನ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಾನೇ ನಿರ್ವಹಿಸುತ್ತೇನೆ. ನಕಲಿ ಸುದ್ದಿಗಳನ್ನು ಪ್ರಚಾರ ಮಾಡಿದ್ದಕ್ಕಾಗಿ ನಿಮಗೆ ನಾಚಿಕೆಯಾಗಬೇಕು. ಯಾರೂ ನನ್ನ ಯಾವುದೇ ಸಾಲವನ್ನು ಮನ್ನಾ ಮಾಡಿಲ್ಲ” ಎಂದು ಹೇಳಿದ್ದಾರೆ.

“ರಾಜಕೀಯ ಪಕ್ಷ ಅಥವಾ ಅದರ ಪ್ರತಿನಿಧಿಗಳು ಸುಳ್ಳು ಸುದ್ದಿಯನ್ನು, ನೀಚ ಗಾಸಿಪ್ ಅನ್ನು ನನ್ನ ಹೆಸರು, ನನ್ನ ಚಿತ್ರ ಬಳಸಿ ಹಂಚುತ್ತಿರುವುದು ನೋಡಿ ನನಗೆ ಆಶ್ಚರ್ಯವಾಗಿದೆ. ಸಾಲ ಪಡೆಯಲಾಗಿತ್ತು ಮತ್ತು ಅದನ್ನು ಹತ್ತು ವರ್ಷಕ್ಕೂ ಮುನ್ನವೇ ಸಂಪೂರ್ಣವಾಗಿ ಮರುಪಾವತಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಲು ನಾನು ಬಯಸುತ್ತೇನೆ. ಭವಿಷ್ಯದಲ್ಲಿ ಯಾವುದೇ ತಪ್ಪು ತಿಳಿವಳಿಕೆ ಬರುವುದನ್ನು ಈ ಮಾಹಿತಿ ತಡೆಯುತ್ತದೆ ಎಂದು ಭಾವಿಸುತ್ತೇನೆ” ಎಂದು ಪ್ರೀತಿ ಝಿಂಟಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಝಿಂಟಾ ಎಕ್ಸ್ ಪೋಸ್ಟ್‌ಗೆ ಕೇರಳ ಕಾಂಗ್ರೆಸ್ ಸ್ಪಷ್ಟೀಕರಣ ನೀಡಿ ಪೋಸ್ಟ್ ಒಂದನ್ನು ಮಾಡಿದೆ. “ಇತರೆ ಸೆಲೆಬ್ರಿಟಿಗಳಿಗಿಂತ ಭಿನ್ನವಾಗಿ ಝಿಂಟಾ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ತಾವೇ ನಿರ್ವಹಿಸುತ್ತಿದ್ದಾರೆ ಎಂದು ತಿಳಿದುಕೊಳ್ಳುವುದು ಉತ್ತಮವಾಗಿದೆ. ತಮ್ಮ ಸಾಲದ ಬಗ್ಗೆ ಝಿಂಟಾ ಅವರೇ ಸ್ಪಷ್ಟೀಕರಣ ನೀಡಿದ್ದಾರೆ” ಎಂದು ಹೇಳಿದ್ದಾರೆ.

“ಸ್ಪಷ್ಟೀಕರಣಕ್ಕಾಗಿ ಧನ್ಯವಾದಗಳು. ನಾವು ಏನಾದರೂ ತಪ್ಪುಗಳನ್ನು ಮಾಡಿದ್ದರೆ ಅದನ್ನು ಒಪ್ಪಿಕೊಳ್ಳಲು ನಾವು ಸಂತೋಷಪಡುತ್ತೇವೆ. ಮಾಧ್ಯಮಗಳು ವರದಿ ಮಾಡಿದಂತೆ ನಾವು ಸುದ್ದಿಯನ್ನು ಹಂಚಿಕೊಂಡಿದ್ದೇವೆ” ಎಂದು ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

TMC ಬಂಡಾಯ ಸಂಸದರು ಬಿಜೆಪಿ ಸೇರಲಿದ್ದಾರೆ ಎಂದ ಬಸುನಿಯಾ; ಇಲ್ಲ ಎಂದ BJP

ತೃಣಮೂಲ ಕಾಂಗ್ರೆಸ್‌ (TMC) ತೊರೆದು ನ್ಯಾಷನಲಿಸ್ಟ್‌ ಸಿಟಿಜನ್ಸ್‌ ಪಾರ್ಟಿ ಆಫ್‌ ಇಂಡಿಯಾ...

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...