ಪುರೋಹಿತ ಕೂಡಾ ಸಿಎಎ ಅರ್ಹತಾ ಪ್ರಮಾಣಪತ್ರ ನೀಡಬಹುದೆಂದ ಸರ್ಕಾರಿ ಸಹಾಯವಾಣಿ!

Date:

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿ ಭಾರತದ ಪೌರತ್ವ ಪಡೆಯುವವರಿಗೆ ಸ್ಥಳೀಯ ಪುರೋಹಿತರೂ ಕೂಡಾ ‘ಅರ್ಹತಾ ಪ್ರಮಾಣಪತ್ರ’ವನ್ನು ನೀಡಬಹುದು ಎಂದು ಕೇಂದ್ರ ಗೃಹ ಸಚಿವಾಲಯದ ಸಹಾಯವಾಣಿ ಹೇಳಿದೆ ಎಂದು ‘ದಿ ಹಿಂದೂ ವರದಿ’ ಮಾಡಿದೆ. ಗೃಹ ಇಲಾಖೆ ಸಹಾಯವಾಣಿಗೆ ಕರೆ ಮಾಡಿದಾಗ ಪುರೋಹಿತರಿಂದ ಅರ್ಹತಾ ಪ್ರಮಾಣಪತ್ರ ಪಡೆಯುವಂತೆ ಸೂಚಿಸಲಾಗಿದೆ.

2019ರಲ್ಲಿ ಅನುಮೋದನೆಗೊಂಡ ‘ಸಿಎಎ’ಯನ್ನು 2024ರ ಲೋಕಸಭೆ ಚುನಾವಣೆಗೆ ಒಂದು ತಿಂಗಳು ಇರುವಾಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜಾರಿ ಮಾಡಿದೆ. ಸಿಎಎ ಅಡಿ ಪೌರತ್ವ ಪಡೆಯುವವರು ಅರ್ಹತಾ ಪ್ರಮಾಣಪತ್ರ ಸಲ್ಲಿಸುವುದು ಕಡ್ಡಾಯವಾಗಿದೆ. ಹಾಗೆಯೇ, ಭಾರತದ ಪೌರತ್ವವನ್ನು ಪಡೆಯಲು ಕಾರಣವನ್ನು ಕೂಡಾ ತಿಳಿಸಬೇಕಾಗುತ್ತದೆ.

ಇದನ್ನು ಓದಿದ್ದೀರಾ?  ‘ಸಿಎಎ ಅಸಂವಿಧಾನಿಕ’ ಎಂದ ನ್ಯಾಯಮೂರ್ತಿ ಚಂದ್ರಚೂಡ್‌ರ ಪುತ್ರ; ವೀಡಿಯೋ ವೈರಲ್

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಕಾಯ್ದೆಯಡಿಯಲ್ಲಿ 2019ರ ಡಿಸೆಂಬರ್ 31ಕ್ಕೂ ಮುನ್ನ ಭಾರತಕ್ಕೆ ಬಂದ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಶೋಷಣೆಗೆ ಒಳಗಾದ ಹಿಂದೂ, ಕ್ರೈಸ್ತ, ಸಿಖ್, ಪಾರ್ಸಿ, ಜೈನ, ಬೌದ್ಧ ಧರ್ಮದವರು ಭಾರತದ ಪೌರತ್ವವನ್ನು ಪಡೆದುಕೊಳ್ಳಬಹುದಾಗಿದೆ. ಆದರೆ ಚುನಾವಣೆಗೂ ಮುನ್ನ ಈ ಕಾಯ್ದೆಯನ್ನು ಜಾರಿ ಮಾಡಿರುವುದಕ್ಕೆ ವಿಪಕ್ಷಗಳು ಕೇಂದ್ರ ಸರ್ಕಾರವನ್ನು ಟೀಕಿಸಿದೆ.

ಸಿಎಎ ಅರ್ಜಿ ಸಲ್ಲಿಸುವ ಬಗ್ಗೆ ಮಾಹಿತಿ ಪಡೆಯಲು ಮಾರ್ಚ್ 21ರಂದು ಸಚಿವಾಲಯವು 1032 ಸಹಾಯವಾಣಿಯನ್ನು ಜಾರಿ ಮಾಡಿದೆ. ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಈ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ.

ಸಿಎಎ ನಿಯಮದ ಪ್ರಕಾರ ‘ಪ್ರತಿಷ್ಠಿತ ಸಮುದಾಯ ಸಂಸ್ಥೆ’ ಅರ್ಹತಾ ಪ್ರಮಾಣ ಪತ್ರ ನೀಡಬಹುದಾಗಿದೆ. ಆದರೆ ಇಲ್ಲಿ ‘ಪ್ರತಿಷ್ಠಿತ ಸಮುದಾಯ ಸಂಸ್ಥೆ’ ಯಾವುದು ಎಂಬುವುದನ್ನು ಸ್ಪಷ್ಟಪಡಿಸಲಾಗಿಲ್ಲ. ಈ ನಿಟ್ಟಿನಲ್ಲಿ ದಿ ಹಿಂದೂ ಗೃಹ ಇಲಾಖೆಯ ಸಹಾಯವಾಣಿಗೆ ಕರೆ ಮಾಡಿದ್ದು, ಈ ವೇಳೆ ಕರೆಯಲ್ಲಿ ಮಾತನಾಡಿದ ವ್ಯಕ್ತಿ ಅರ್ಹತಾ ಪ್ರಮಾಣ ಪತ್ರವನ್ನು ಖಾಲಿ ಹಾಳೆ ಅಥವಾ 10 ರೂಪಾಯಿಯ ಸ್ಟ್ಯಾಂಪ್ ಪೇಪರ್‌ನಲ್ಲಿ ನೀಡಬಹುದು ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?   ಸಿಎಎ ಜಾರಿ ರಾಜ್ಯಕ್ಕೆ ಸಂಬಂಧಿಸಿದ್ದಲ್ಲ, ಯಾವುದೇ ಕಾರಣಕ್ಕೂ ಹಿಂಪಡೆಯಲ್ಲ ಎಂದ ಅಮಿತ್ ಶಾ

ಇನ್ನು ಯಾರಿಂದ ಈ ಪ್ರಮಾಣಪತ್ರ ಪಡೆಯಬೇಕು ಎಂದು ಈ ಸಹಾಯವಾಣಿಯಲ್ಲಿ ದಿ ಹಿಂದೂ ಪ್ರಶ್ನಿಸಿದಾಗ, “ಸ್ಥಳೀಯ ಪೂಜಾರಿ ನೀಡಬಹುದು” ಎಂದು ಹೇಳಿದ್ದಾರೆ. ಪೌರತ್ವಕ್ಕೆ ಅರ್ಜಿ ಸಲ್ಲಿಸಿದ ವ್ಯಕ್ತಿ ವಾಸವಿರುವ ಪ್ರದೇಶದ ದೇವಸ್ಥಾನದ ಪುರೋಹಿತ, ಚರ್ಚಿನ ಪಾದ್ರಿ ಅಥವಾ ಇತರ ಧರ್ಮಗಳ ಧರ್ಮ ಗುರುಗಳು “ಈ ವ್ಯಕ್ತಿ ನನಗೆ ತಿಳಿದಿರುವವರು. ಇವರು ಈ ಧರ್ಮದವರು. ಮುಂದೆಯೂ ಅದೇ ಧರ್ಮದಲ್ಲಿ ಇರಲಿದ್ದಾರೆ” ಎಂದು ಖಚಿತಪಡಿಸಬೇಕು ಎಂದು ಹಿಂದೂ ವರದಿ ಮಾಡಿದೆ.

ಇನ್ನು ಪೂಜಾರಿ ಅಥವಾ ಪಾದ್ರಿ ಪ್ರಮಾಣ ಪತ್ರ ನೀಡಲು ಮಾತ್ರ ಅರ್ಹರು. ಆದರೆ ಅರ್ಜಿ ಸಲ್ಲಿಸಿದ ವ್ಯಕ್ತಿಗೆ ಪೌರತ್ವ ನೀಡಬಹುದೇ, ಇಲ್ಲವೇ ಎಂದು ಅದಕ್ಕಾಗಿ ನೇಮಿಸಲಾದ ತಂಡ ನಿರ್ಧರಿಸಲಿದೆ ಎಂದು ವರದಿ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತೆಲಂಗಾಣ | 4,568 ಕೋಟಿ ರೂ. ಒಡೆಯ ಕೆ.ವಿಶ್ವೇಶ್ವರ ರೆಡ್ಡಿ ರಾಜ್ಯದ ಅತ್ಯಂತ ಶ್ರೀಮಂತ ಬಿಜೆಪಿ ಅಭ್ಯರ್ಥಿ

ತೆಲಂಗಾಣದ ಲೋಕಸಭಾ ಚುನಾವಣೆ ಕಣದಲ್ಲಿರುವ ಅಭ್ಯರ್ಥಿಗಳಲ್ಲಿ ಚೆವೆಳ್ಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

ಮಣಿಪುರ ಹಿಂಸಾಚಾರ | ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮ

ಮಣಿಪುರದ ನರಂಸೇನಾ ಪ್ರದೇಶದಲ್ಲಿ ಶುಕ್ರವಾರ ಮಧ್ಯರಾತ್ರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಕೇಂದ್ರೀಯ...

ಪಶ್ಚಿಮ ಬಂಗಾಳ | ಪ್ರಧಾನಿ ಚುನಾವಣಾ ರ್‍ಯಾಲಿ ಬಳಿಕ ಟಿಎಂಸಿಯಿಂದ ಮೋದಿ ಹೇಳಿಕೆಗಳ ಫ್ಯಾಕ್ಟ್‌ಚೆಕ್!

ಪಶ್ಚಿಮ ಬಂಗಾಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭರ್ಜರಿಯಾಗಿ ರ್‍ಯಾಲಿ ನಡೆಸಿ ಚುನಾವಣಾ...

ಬಿಜೆಪಿ ತನ್ನ ಭದ್ರಕೋಟೆಯಲ್ಲೂ ಗೆದ್ದೇ ಗೆಲ್ಲುತ್ತೇವೆ ಎನ್ನುವ ವಿಶ್ವಾಸದಲ್ಲಿಲ್ಲ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ...