ಫ್ರಾನ್ಸ್ | ಸರ್ಕಾರದ ಪಿಂಚಣಿ ನೀತಿ ವಿರುದ್ಧ ಕಾರ್ಮಿಕರ ಆಕ್ರೋಶ

Date:

  • ಏಪ್ರಿಲ್ ಮೊದಲ ವಾರದಲ್ಲಿ ಸಭೆ ನಡೆಸಲು ಪ್ರಧಾನಿ ಬೋರ್ನ್ ತೀರ್ಮಾನ
  • ಫ್ರಾನ್ಸ್ ರಸ್ತೆಗಳಲ್ಲಿ ಕಸದ ರಾಶಿಗೆ ಬೆಂಕಿ ಹಚ್ಚಿ ಕಾರ್ಮಿಕರು ಆಕ್ರೋಶ

ಫ್ರಾನ್ಸ್‌ನಲ್ಲಿ ಜಾರಿ ಮಾಡಲು ಹೊರಟಿರುವ ನೂತನ ಪಿಂಚಣಿ ವ್ಯವಸ್ಥೆ ಬಗ್ಗೆ ಭಾರೀ ಜನಾಕ್ರೋಶ ವ್ಯಕ್ತವಾಗಿದ್ದು, ಕಳೆದ ಅನೇಕ ದಿನಗಳಿಂದ ಫ್ರಾನ್ಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ.

- Advertisement -

ನೂತನ ಪಿಂಚಣಿ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದ ನಂತರ ಫ್ರಾನ್ಸ್‌ ಪ್ರಧಾನಿ ಎಲಿಜಬೆತ್‌ ಬೋರ್ನ್‌ ಅವರು ಪ್ರತಿಪಕ್ಷಗಳ ನಾಯಕರು ಮತ್ತು ವ್ಯಾಪಾರಿ ಸಂಘಗಳ ಜೊತೆ ಸಭೆ ನಡೆಸಲು ನಿರ್ಧರಿಸಿದ್ದಾರೆ ಎಂದು ಮಾಧ್ಯಮಗಳು ಸೋಮವಾರ (ಮಾರ್ಚ್‌ 27) ವರದಿ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಯಾವ ಮತದಾನವೂ ಇಲ್ಲದೆ ಪಿಂಚಣಿ ಮಸೂದೆಯನ್ನು ಅಂಗೀಕರಿಸಲಾಗಿದೆ ಎಂದು ಆರೋಪಿಸಿ ಸಾರ್ವಜನಿಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದೆ. ಈ ಹಿನ್ನೆಲೆಯಲ್ಲಿ ಯೋಜನೆ ಪರಿಶೀಲಿಸಲು ಸಭೆ ನಡೆಸುವುದಾಗಿ ಪ್ರಧಾನಿ ಬೋರ್ನ್‌ ಭಾನುವಾರ (ಮಾರ್ಚ್‌ 26) ಹೇಳಿದ್ದಾರೆ.

ಪಿಂಚಣಿ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಮುಂದಾಗಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರ ಕ್ರಮದ ವಿರುದ್ಧ ದೇಶಾದ್ಯಂತ ದೊಡ್ಡ ಮಟ್ಟದ ವಿರೋಧ ವ್ಯಕ್ತವಾಗುತ್ತಿದೆ. ಮತಕ್ಕೆ ಹಾಕದೆಯೇ ನೀತಿಯನ್ನು ಅಂಗೀಕರಿಸಿದ ಅಧ್ಯಕ್ಷ ಮ್ಯಾಕ್ರನ್ ಅವರ ಕ್ರಮವನ್ನು ಜನರು ಖಂಡಿಸುತ್ತಿದ್ದಾರೆ.

ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರು ನಿವೃತ್ತಿಯ ವಯಸ್ಸನ್ನು ಎರಡು ವರ್ಷಗಳವರೆಗೆ ಹೆಚ್ಚಿಸುವ ಶಾಸನವನ್ನು ರದ್ದುಗೊಳಿಸುವುದಿಲ್ಲ ಅಥವಾ ವಿಳಂಬ ಮಾಡುವುದಿಲ್ಲ ಎಂದಿದ್ದಾರೆ. ಸಂಸತ್ತಿನಲ್ಲಿ ಶಾಸನಕ್ಕೆ ಬೆಂಬಲ ಪಡೆಯುವ ಜವಾಬ್ದಾರಿಯನ್ನು ಪ್ರಧಾನಿ ಬೋರ್ನ್‌ ಅವರಿಗೆ ವಹಿಸಿದ್ದಾರೆ.ಪ್ರಧಾನಿ ಬೋರ್ನ್ ಅವರು ರಾಜಕೀಯ ಪಕ್ಷದ ನಾಯಕರನ್ನು ಭೇಟಿಯಾಗಲಿದ್ದಾರೆ. ಕಾರ್ಮಿಕ ಸಮಸ್ಯೆಗಳ ಕುರಿತು ಒಕ್ಕೂಟಗಳೊಂದಿಗೆ ಸಂವಾದವನ್ನು ಪುನರಾರಂಭಿಸುವ ಗುರಿ ಹೊಂದಿದ್ದಾರೆ ಎಂದು ಅವರ ಕಚೇರಿಯು ಪಿಂಚಣಿ ಮಸೂದೆಯನ್ನು ಉಲ್ಲೇಖಿಸದೆ ತಿಳಿಸಿದೆ.

ಪ್ರತಿಪಕ್ಷಗಳೊಂದಿಗೆ ಹಾಗೂ ಒಕ್ಕೂಟದ ನಾಯಕರೊಂದಿಗೆ ಏಪ್ರಿಲ್‌ 3ರ ನಂತರ ಸಭೆ ನಡೆಸುವುದಾಗಿ ಪ್ರಧಾನಿ ಬೋರ್ನ್‌ ಅವರು ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. “ನಾವು ಶಾಂತ ರೀತಿಯಲ್ಲಿ ಸೂಕ್ತ ಮಾರ್ಗ ಕಂಡುಕೊಳ್ಳಬೇಕಿದೆ” ಎಂದು ಬೋರ್ನ್‌ ಅವರು ಪ್ರತಿಭಟನೆ ಶಾಂತಗೊಳಿಸುವ ಕುರಿತು ಹೇಳಿದರು.

ನೂತನ ಪಿಂಚಣಿ ನೀತಿಯಲ್ಲಿ ನಿವೃತ್ತಿ ವಯಸ್ಸನ್ನು 62ರಿಂದ 64ಕ್ಕೆ ಏರಿಸಿರುವುದು ಜನರು ಆಕ್ರೋಶಕ್ಕೆ ಕಾರಣವಾಗಿದೆ. ಪಿಂಚಣಿ ನೀತಿ ವಿರೋಧಿಸಿ ಗುರುವಾರದ (ಮಾರ್ಚ್ 23) ನಂತರ ಸುಮಾರು 300 ಕಡೆಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು, 10 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ. ಪ್ಯಾರಿಸ್‌ನಲ್ಲಿ 450ಕ್ಕೂ ಹೆಚ್ಚು ಪ್ರತಿಭಟನಕಾರರನ್ನು ಬಂಧಿಸಲಾಗಿದೆ.

ಗುರುವಾರ ನಡೆದ ಅನೇಕ ಪ್ರತಿಭಟನೆಗಳು ಹಿಂಸಾ ರೂಪ ಪಡೆದುಕೊಂಡವು. ಕಪ್ಪುಪಟ್ಟಿ ಧರಿಸಿದ್ದ ಪ್ರತಿಭಟನಕಾರರು ಹಾಗೂ ಪೊಲೀಸರು ನಡುವೆ ಘರ್ಷಣೆ ನಡೆದಿತ್ತು.

“ಹಿಂಸಾಚಾರದಲ್ಲಿ ಪೊಲೀಸರು ಹಾಗೂ ಅರೆಸೇನಾ ಪಡೆ ಸಿಬ್ಬಂದಿ ಸೇರಿ ಸುಮಾರು 441 ಮಂದಿಗೆ ಗಾಯಗಳಾಗಿವೆ” ಎಂದು ಆಂತರಿಕ ಸಚಿವ ಗೆರಾಲ್ಡ್ ಡಾರ್ಮ್ಯಾನಿನ್ ತಿಳಿಸಿದ್ದಾರೆ. ಪ್ರತಿರೋಧದ ಹಿನ್ನೆಲೆಯಲ್ಲಿ ದೇಶದಲ್ಲಿ ನೀತಿಯ ಕುರಿತು ಅಭಿಪ್ರಾಯ ಸಂಗ್ರಹಣೆ ನಡೆದಿದೆ. ಇದರಲ್ಲಿ ಪಿಂಚಣಿ ನೀತಿಯ ವಿರುದ್ಧ ಫ್ರಾನ್ಸ್ ಜನರು ತಮ್ಮ ಅಭಿಪ್ರಾಯ ದಾಖಲಿಸಿದ್ದಾರೆ. ನಂತರ, ನೀತಿಯನ್ನು ಹಿಂಪಡೆಯುವ ಸಂಬಂಧ ಅಧ್ಯಕ್ಷ ಮ್ಯಾಕ್ರನ್ ಅವರ ಮೇಲೆ ಒತ್ತಡ ಹೆಚ್ಚುತ್ತಿದೆ. ಆದರೆ, ತಮ್ಮ ನಿರ್ಧಾರವನ್ನು ಮ್ಯಾಕ್ರನ್ ಸಮರ್ಥಿಸಿಕೊಂಡಿದ್ದಾರೆ. “ವ್ಯವಸ್ಥೆಯು ದಿಕ್ಕುತಪ್ಪದಂತೆ ಮಾಡಲು ಈ ನೀತಿ ಅಗತ್ಯ” ಎಂದು ಹೇಳಿದ್ದಾರೆ.

ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಅವರು ಮಂಗಳವಾರ ಬೋಡೊ ನಗರಕ್ಕೆ ಭೇಟಿ ನೀಡಬೇಕಿತ್ತು. ಈ ವೇಳೆ ದೇಶಾದ್ಯಂತ ಪ್ರತಿಭಟನೆಗಳನ್ನು ನಡೆಸಲು ಕಾರ್ಮಿಕ ಒಕ್ಕೂಟಗಳು ನಿರ್ಧರಿಸಿದ್ದವು. ಗುರುವಾರ ರಾತ್ರಿ ಬೋಡೊ ನಗರದ ಭವ್ಯವಾದ ಟೌನ್‌ ಹಾಲ್‌ನ ಮರದ ಬಾಗಿಲಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದರು. “ಪ್ರತಿಭಟನೆಯ ಕಾರಣ ರಾಜ ಮೂರನೇ ಚಾರ್ಲ್ಸ್ ಅವರ ಫ್ರಾನ್ಸ್ ಭೇಟಿಯನ್ನು ಮುಂದೂಡಲಾಗಿದೆ” ಎಂದು ಅಧ್ಯಕ್ಷ ಮ್ಯಾಕ್ರನ್ ಕಚೇರಿ ಶುಕ್ರವಾರ ಹೇಳಿದೆ.

ಕಸದ ರಾಶಿಗೆ ಬೆಂಕಿ

ಪಿಂಚಣಿ ನೀತಿ ವಿರೋಧಿಸಿ ಫ್ರಾನ್ಸ್‌ನ ರಸ್ತೆಯ ತುಂಬೆಲ್ಲಾ ಕಸದ ರಾಶಿಗಳನ್ನು ಸುರಿಯುವುದು, ಅದಕ್ಕೆ ಬೆಂಕಿ ಹಚ್ಚುವುದು ಕಂಡು ಬಂದಿದೆ. ಸ್ವಚ್ಛತಾ ಕಾರ್ಮಿಕರೂ ಪ್ರತಿಭಟನೆ ನಡೆಸುತ್ತಿದ್ದು, ರಸ್ತೆಗಳಲ್ಲಿ ಕಸದ ರಾಶಿ ಸುರಿಯಲಾಗಿದೆ. ಗುರುವಾರದಂದು ಪ್ಯಾರಿಸ್‌ನಲ್ಲಿ ಸುಮಾರು ಸಾವಿರ ಕಸದ ರಾಶಿಗಳಿಗೆ ಬೆಂಕಿ ಹಚ್ಚಲಾಗಿತ್ತು.

ದೇಶದಲ್ಲಿ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಕಂಡುಬಂದಿದೆ. ದೇಶದ ಅತಿ ದೊಡ್ಡ ಮಾಸೈ ವಾಣಿಜ್ಯ ಬಂದರಿನ ಮಾರ್ಗಗಳನ್ನು ಬಂದ್ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಬ್ರಿಕ್ಸ್‌ ಶೃಂಗಸಭೆ | ಚೀನಾಗೆ ಹೆಚ್ಚಿನ ಲಾಭ, ಭಾರತಕ್ಕೆ ಸವಾಲುಗಳ ನಿರ್ವಹಣೆ: ಕಪಿಲ್ ಸಿಬಲ್

ಇತ್ತೀಚೆಗೆ ದೆಹಲಿಯಲ್ಲಿ ಮುಕ್ತಾಯಗೊಂಡ 'ಬ್ರಿಕ್ಸ್‌' ಶೃಂಗಸಭೆಯಿಂದ ಚೀನಾ ಅತ್ಯಂತ ಹೆಚ್ಚಿನ ಲಾಭವನ್ನು...

ಮತ್ತೆ ಆಪರೇಷನ್ ಕಮಲ: ಬಿಜೆಪಿ ಸೇರಲಿದ್ದಾರೆ 17 ಎನ್‌ಸಿಪಿಐ ಸಂಸದರು ಎಂದ ಬಂಡಾಯ ಸಂಸದ

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು ನ್ಯಾಷನಲಿಸ್ಟ್...

ಉಮರ್ ಖಾಲಿದ್ ಕುರಿತ ‘ಕೈದಿ‌ ನಂ. 626710 ಈಸ್ ಪ್ರೆಸೆಂಟ್’ ಸಾಕ್ಷ್ಯಚಿತ್ರ ಪ್ರದರ್ಶನ ರದ್ದಾಗಿದ್ದು ಯಾಕೆ?

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (NLSIU) ಜವಾಹರಲಾಲ್...