ಪ್ರಧಾನಿ ಮೋದಿಯ ಶಿವಮೊಗ್ಗ ಕಾರ್ಯಕ್ರಮ; ಜನರನ್ನು ಕರೆತರಲು ₹3.90 ಕೋಟಿ ಖರ್ಚು!

Date:

Advertisements
  • ಬಸ್‌ಗಳ ಬಾಡಿಗೆ ಬಿಲ್‌ ಪಾವತಿಸಿದ್ದು ಕಾರ್ಯಪಾಲಕ ಇಂಜಿನಿಯರ್‌
  • ಫೆಬ್ರವರಿ 27ರ ಕಾರ್ಯಕ್ರಮಕ್ಕೆ ಖರ್ಚಾಯಿತು 3 ಕೋಟಿ 90 ಲಕ್ಷ ರೂ.

ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿ ಬರೋಬ್ಬರಿ ಒಂದು ತಿಂಗಳು ಕಳೆದಿದೆ. ಆದರೆ, ಮೋದಿಯವರ ಎರಡು ಗಂಟೆಯ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಕೋಟ್ಯಾಂತರ ರೂಪಾಯಿ ಖರ್ಚಾಗಿರುವುದು ಇದೀಗ ಬೆಳಕಿಗೆ ಬಂದಿದೆ.

ಹೌದು, ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮವನ್ನು ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿತ್ತು. ಎರಡರಿಂದ ಮೂರು ಗಂಟೆಯ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಕೆಎಸ್‌ಆರ್‌ಟಿಸಿಯ ಸುಮಾರು 1,600 ಬಸ್‌ಗಳು ಬಳಕೆಯಾಗಿವೆ. ಬರೀ ಇದರ ಬಿಲ್‌, ಮೂರು ಕೋಟಿ ತೊಂಬತ್ತು ಲಕ್ಷ ರೂಪಾಯಿ.

ಫೆಬ್ರವರಿ 27ರ ಕಾರ್ಯಕ್ರಮಕ್ಕೆ ಬಳಸಲಾಗಿರುವ ಬಸ್‌ಗಳ ಸಂಖ್ಯೆ ಮತ್ತು ಅದಕ್ಕೆ ತಗುಲಿರುವ ಖರ್ಚಿನ ವಿವರ ಆಕಾಶ್ ಪಾಟೀಲ್ ಎಂಬುವವರ ಮಾಹಿತಿ ಹಕ್ಕಿನಿಂದ ಹೊರಬಿದ್ದಿದೆ.ಶಿವಮೊಗ್ಗ ಕಾರ್ಯಕ್ರಮ

Advertisements

ಕೆಎಸ್‌ಆರ್‌ಟಿಸಿ ಶಿವಮೊಗ್ಗ ವಿಭಾಗಕ್ಕೆ ಮಾಹಿತಿ ಹಕ್ಕು ಸಲ್ಲಿಸಿದ್ದ ಆಕಾಶ್ ಪಾಟೀಲ್, “ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಕೆಎಸ್‌ಆರ್‌ಟಿಸಿಯ ಎಷ್ಟು ಬಸ್‌ಗಳನ್ನು ಬಳಸಲಾಗಿತ್ತು. ಇದರಿಂದಾದ ಖರ್ಚು ಎಷ್ಟು ಮತ್ತು ಈ ಮೊತ್ತವನ್ನು ಪಾವತಿಸಿದರು ಯಾರು?” ಎಂದು ಕೇಳಿದ್ದರು.

ಆಕಾಶ್ ಪಾಟೀಲ್ ಅವರ ಪ್ರಶ್ನೆಗೆ ಮಾಹಿತಿ ನೀಡಿರುವ ಕೆಎಸ್‌ಆರ್‌ಟಿಸಿ, “ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಕ್ರಮಕ್ಕೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಜನರನ್ನು ಕರೆತರಲು ಸುಮಾರು 1,600 ಬಸ್‌ಗಳನ್ನು ಬಳಸಲಾಗಿದೆ. ಇದಕ್ಕೆ 3,93,92,565 ರೂಪಾಯಿ ಬಿಲ್‌ ಆಗಿದೆ” ಎಂದು ಅಚ್ಚರಿಯ ಮಾಹಿತಿ ನೀಡಿದೆ.

ಈ ಸುದ್ದಿ ಓದಿದ್ದೀರಾ? ಐಟಿ ಅಧಿಕಾರಿಗಳ ರಕ್ಷಣೆಯಲ್ಲಿ ಬಿಜೆಪಿ ಸರ್ಕಾರ ಒಬ್ಬೊಬ್ಬ ಅಭ್ಯರ್ಥಿಗೂ ₹10 ಕೋಟಿ ಸಾಗಿಸುತ್ತಿದೆ: ದಿನೇಶ್ ಗುಂಡೂರಾವ್

1,600 ಬಸ್‌ಗಳ ಬಾಡಿಗೆಯನ್ನು ಶಿವಮೊಗ್ಗದ ಕಾರ್ಯಪಾಲಕ ಇಂಜಿನಿಯರ್‌ ಪಾವತಿಸಿದ್ದಾರೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಕೇವಲ ಎರಡರಿಂದ ಮೂರು ಗಂಟೆಯ ಕಾರ್ಯಕ್ರಮಕ್ಕೆ ಬರೀ ಜನರನ್ನು ಕರೆತಲು ಮೂರು ಕೋಟಿ ತೊಂಬತ್ತು ಲಕ್ಷ ರೂಪಾಯಿ ಖರ್ಚಾಗಿರುವುದು ಅಚ್ಚರಿ ಮೂಡಿಸಿದೆ. ಜನರನ್ನು ಕರೆತರಲಷ್ಟೇ ಇಷ್ಟು ರೂಪಾಯಿ ಖರ್ಚಾಗಿರುವಾಗ ಇನ್ನೂ ಬೇರೆ ಬೇರೆ ಕಾರ್ಯಕ್ಕೆ ಇನ್ನೆಷ್ಟು ಖರ್ಚಾಗಿರಬಹುದು ಎನ್ನುವ ಅನುಮಾನಕ್ಕೂ ಎಡೆ ಮಾಡಿಕೊಟ್ಟಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಎಲ್ಲಾ ರಾಜಕೀಯ ಪಕ್ಷಗಳು ಹೀಗೆಯೇ ಮಾಡುವರು. ಯಾರೂ ಸ್ವ ಇಚ್ಛೆಯಿಂದ ಪ್ರಧಾನಮಂತ್ರಿಗಳ ಮತ್ತು ಇತರೇ ರಾಜಕೀಯ ವ್ಯಕ್ತಿಗಳ ಭಾಷಣ ಕೇಳಲು ಬರುವುದಿಲ್ಲ, ಆ ತರಹದ ವಾತಾವರಣ ನಿರ್ಮಾಣವಾಗಿದೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X