ಒಂದೂವರೆ ಗಂಟೆಯಾದರೂ ಮಣಿಪುರದ ಬಗ್ಗೆ ತುಟಿ ಬಿಚ್ಚದ ಪ್ರಧಾನಿ ನರೇಂದ್ರ ಮೋದಿ

Date:

Advertisements
ಎನ್‌ಡಿಎ ಸರ್ಕಾರದ ಸಾಧನೆಗಳ ಪಟ್ಟಿ... ವಿಪಕ್ಷಗಳನ್ನು ತೆಗಳಿದ್ದು... ಸ್ವಯಂ ಹೊಗಳುವಿಕೆ... ರಾಹುಲ್ ಗಾಂಧಿಯವರ ವಿಡಿಯೋಗಳ ಬಗ್ಗೆ ಅಣಕ… ಮತ್ತೆ 2024ಕ್ಕೆ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ… 'ಇಂಡಿಯಾ' ಮೈತ್ರಿಕೂಟದ ಬಗ್ಗೆ ವ್ಯಂಗ್ಯ... ಆಡಳಿತ ಪಕ್ಷದ ಬೆಂಬಲಿಗರ ಮೇಜು ಕುಟ್ಟುವಿಕೆ…

ವಿಪಕ್ಷಗಳ ಅವಿಶ್ವಾಸ ನಿರ್ಣಯದ ಮೇಲೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಲೋಕಸಭೆಯಲ್ಲಿ ಆರಂಭಿಸಿರುವ ಭಾಷಣ ಒಂದು ಗಂಟೆಯಾದರೂ ಮಣಿಪುರದ ಬಗ್ಗೆ ಒಂದೇ ಒಂದು ಪದ ಮಾತನಾಡಿಲ್ಲ.

ಇಂದು ಸಂಜೆ 05:08ಕ್ಕೆ ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಮಣಿಪುರ ಹಿಂಸಾಚಾರ ಸಂಬಂಧ ವಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯದ ಮೇಲೆ ಮೋದಿ ಅವರು ಭಾಷಣ ಆರಂಭಿಸಿ, ಮಣಿಪುರ ಘಟನೆಯ ಬಗ್ಗೆ ಒಂದೂ ಮಾತನಾಡಲಿಲ್ಲ. ವಿಪಕ್ಷಗಳನ್ನು ಟೀಕಿಸುವುದರಲ್ಲೇ ಪ್ರಧಾನಿ ಮೋದಿ ತಮ್ಮ ಭಾಷಣ ಮುಗಿಸಿದರು.

‘ನನ್ನನ್ನು ಟೀಕಿಸಲು ವಿಪಕ್ಷ ನಾಯಕರು ಡಿಕ್ಷನರಿ ಹುಡುಕುತ್ತಾರೆ. ಅವರ ಮನಸ್ಥಿತಿ ಏನು ಅನ್ನೋದನ್ನ ನಾನು ವಿವರಿಸಬಲ್ಲೆ. ಪ್ರತಿ ದಿನ ಕೂಡ ಇಂತಹ ಜನರು ಟೀಕೆ ಮಾಡುತ್ತಾರೆ. ಮೋದಿಯವರೇ ನಿಮಗೆ ಸಮಾಧಿ ತೋಡುತ್ತಿದ್ದೇವೆ ಎಂದು ಹೇಳುತ್ತಾರೆ. ಈ ಶಬ್ದಗಳು, ಇವರ ಭಾಷೆ ನನಗೆ ಟಾನಿಕ್ ಆಗಿದೆ’ ಎಂದರು.

Advertisements

‘2024ರಲ್ಲೂ ನಾವೇ ಅಧಿಕಾರಕ್ಕೆ ಬರುತ್ತೇವೆ’ ಎಂದ ಪ್ರಧಾನಿ ಮೋದಿ, ವಿಪಕ್ಷಗಳ ಆಡುವ ಒಂದೊಂದು ಮಾತನ್ನು ದೇಶದ ಜನರು ಗಮನಿಸುತ್ತಿದ್ದಾರೆ. ವಿಪಕ್ಷಗಳು ಯಾವಾಗಲೂ ನಿರಾಸೆಯಿಂದಲೇ ಮಾತನಾಡುತ್ತಿವೆ. ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ’ ಎಂದು ಟೀಕಿಸಿದರು.

ವಿಪಕ್ಷಗಳ ಅವಿಶ್ವಾಸ ನಿರ್ಣಯ ಯಾಚನೆಯು ನಮಗೆ ಶುಭ ಸೂಚನೆ ಎಂದ ಮೋದಿ, ವಿಪಕ್ಷಗಳ ಸದಸ್ಯರು ಬರೀ ನೋ ಬಾಲ್ ಎಸೆಯುತ್ತಿದ್ದಾರೆ. ನಮ್ಮ ಸದಸ್ಯರು ಸೆಂಚುರಿ ಬಾರಿಸುತ್ತಿದ್ದಾರೆ. ವಿಪಕ್ಷ ನಾಯಕರೇ ಫೀಲ್ಡಿಂಗ್ ಆರ್ಗನೈಸ್‌ ಮಾಡಿದ್ದರು. ಆದರೆ ಸಿಕ್ಸ್, ಫೋರ್​ಗಳು ನಮ್ಮ ಕಡೆಯಿಂದ ಹೋದವು ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದರು.

ತಮ್ಮ ಭಾಷಣದುದ್ದಕ್ಕೂ ಕೇವಲ ಕಾಂಗ್ರೆಸ್‌ನ ಹೆಸರನ್ನು ಉಲ್ಲೇಖಿಸಿದ ಮೋದಿ, ಯಾವ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್‌ ಅಧಿಕಾರದಲ್ಲಿತ್ತು ಎಂಬುದನ್ನು ಪಟ್ಟಿ ಮಾಡಿ ಓದಿದರು.

ಮಣಿಪುರದ ಬಗ್ಗೆ ಮಾತನಾಡದ್ದಕ್ಕೆ ಆಕ್ರೋಶಗೊಂಡ ಇಂಡಿಯಾ ಮೈತ್ರಿಕೂಟದ ಸದಸ್ಯರು, ಮಣಿಪುರದ ಬಗ್ಗೆ ಮಾತನಾಡುವಂತೆ ಪಟ್ಟು ಹಿಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X