370ನೇ ವಿಧಿ | ಸುಪ್ರೀಂ ತೀರ್ಪು ಐತಿಹಾಸಿಕ, ಉಜ್ವಲ ಭವಿಷ್ಯದ ಭರವಸೆ; ಮೋದಿ ಶ್ಲಾಘನೆ

Date:

Advertisements

ಜಮ್ಮು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಕೇಂದ್ರದ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ, ಐತಿಹಾಸಿಕ, ಭರವಸೆಯ ದಾರಿದೀಪ; ಉಜ್ವಲ ಭವಿಷ್ಯದ ಭರವಸೆ ಮತ್ತು ಬಲಿಷ್ಠ ಹಾಗೂ ಅಖಂಡ ಭಾರತವನ್ನು ನಿರ್ಮಿಸುವ ದೇಶದ ಸಾಮೂಹಿಕ ಸಂಕಲ್ಪಕ್ಕೆ ಸಾಕ್ಷಿಯಾಗಿದೆ ಎಂದು ಸೋಮವಾರ ಶ್ಲಾಘಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ, ‘ಆರ್ಟಿಕಲ್ 370 ರದ್ದತಿಗೆ ಸಂಬಂಧಿಸಿದ ಇಂದಿನ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕವಾಗಿದೆ ಮತ್ತು 2019 ರ ಆಗಸ್ಟ್ 5 ರಂದು ಭಾರತದ ಸಂಸತ್ತು ತೆಗೆದುಕೊಂಡ ನಿರ್ಧಾರವನ್ನು ಸಾಂವಿಧಾನಿಕವಾಗಿ ಎತ್ತಿಹಿಡಿಯುತ್ತದೆ’ ಎಂದಿದ್ದಾರೆ.

ಇದು ‘ಜಮ್ಮು, ಕಾಶ್ಮೀರ ಮತ್ತು ಲಡಾಖ್‌ನಲ್ಲಿರುವ ನಮ್ಮ ಸಹೋದರಿಯರು ಮತ್ತು ಸಹೋದರರಿಗೆ ಭರವಸೆ, ಪ್ರಗತಿ ಮತ್ತು ಏಕತೆ ಪ್ರತಿಧ್ವನಿಸುವ ಘೋಷಣೆಯಾಗಿದೆ’ ಎಂದು ಪ್ರಧಾನಿ ಅಭಿಪ್ರಾಯ ಪಟ್ಟಿದ್ದಾರೆ.

Advertisements

“ನಿಮ್ಮ ಕನಸುಗಳನ್ನು ಈಡೇರಿಸುವ ನಮ್ಮ ಬದ್ಧತೆ ಅಚಲವಾಗಿದೆ ಎಂದು ಜಮ್ಮು, ಕಾಶ್ಮೀರ ಮತ್ತು ಲಡಾಖ್‌ನ ಚೇತರಿಸಿಕೊಳ್ಳುವ ಜನರಿಗೆ ನಾನು ಭರವಸೆ ನೀಡಲು ಬಯಸುತ್ತೇನೆ. ಪ್ರಗತಿಯ ಫಲಗಳು ನಿಮ್ಮನ್ನು ತಲುಪುವುದು ಮಾತ್ರವಲ್ಲದೆ 370 ನೇ ವಿಧಿಯ ಕಾರಣದಿಂದಾಗಿ ನೊಂದ ನಮ್ಮ ಸಮಾಜದ ಅತ್ಯಂತ ದುರ್ಬಲ ಮತ್ತು ಅಂಚಿನಲ್ಲಿರುವ ವರ್ಗಗಳಿಗೆ ಪ್ರಗತಿ ವಿಸ್ತರಿಸುವುದನ್ನು ಖಚಿತಪಡಿಸಿಕೊಳ್ಳಲು ನಾವು ನಿರ್ಧರಿಸಿದ್ದೇವೆ’ ಎಂದಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ 370ನೇ ವಿಧಿಯಡಿ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಪಡಿಸಿರುವುದನ್ನು ಸ್ಥಾಗತಿಸಿದ್ದಾರೆ. ಈ ಬಗ್ಗೆ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X