ಆರು ದಿನಗಳ ರಾಜ್ಯ ಪ್ರವಾಸ ನಡೆಸಲಿರುವ ಪೃಥ್ವಿ ರೆಡ್ಡಿ, ಮುಖ್ಯಮಂತ್ರಿ ಚಂದ್ರು

Date:

Advertisements
  • ಆರು ಜಿಲ್ಲೆಗಳಲ್ಲಿ ಆಪ್ ಜನಸಭೆ ಹಾಗೂ ರೋಡ್‌ ಷೋ
  • ಮಾ. 26ರಿಂದ ಮಾ. 31ರವರೆಗೆ ನಡೆಯಲಿರುವ ಪ್ರವಾಸ

ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಆಮ್‌ ಆದ್ಮಿ ಪಾರ್ಟಿಯು ಒಟ್ಟು ಆರು ದಿನಗಳ ರಾಜ್ಯ ಪ್ರವಾಸವನ್ನು ಹಮ್ಮಿಕೊಂಡಿದ್ದು, ಇದರ ನೇತೃತ್ವವನ್ನು ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹಾಗೂ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ವಹಿಸಲಿದ್ದಾರೆ.

ಮಾರ್ಚ್‌ 26ರಿಂದ ಮಾರ್ಚ್‌ 31ರವರೆಗೆ ರಾಜ್ಯ ಪ್ರವಾಸ ನಡೆಯಲಿದೆ. ಈ ಆರು ದಿನಗಳಲ್ಲಿ ಆರು ಜಿಲ್ಲೆಗಳಿಗೆ ಭೇಟಿ ನೀಡಿ, ಜನಸಭೆ ಹಾಗೂ ರೋಡ್‌ ಷೋ ನಡೆಸಲಿದ್ದಾರೆ.

ಮಾರ್ಚ್‌ 26ರ ಬೆಳಗ್ಗೆ 11 ಗಂಟೆಗೆ ಬೀದರ್‌ ಜಿಲ್ಲೆಯ ಔರಾದ್‌ನಲ್ಲಿ ಜನಸಭೆ ಹಾಗೂ ಸಂಜೆ 4 ಗಂಟೆಗೆ ಬೀದರ್‌ ದಕ್ಷಿಣದಲ್ಲಿ ಜನಸಭೆ ನಡೆಸಲಿದ್ದಾರೆ. ಮಾರ್ಚ್‌ 27ರ ಬೆಳಗ್ಗೆ 11 ಗಂಟೆಗೆ ವಿಜಯಪುರದ ಇಂಡಿಯಲ್ಲಿ ಜನಸಭೆ ಹಾಗೂ ಸಂಜೆ 4 ಗಂಟೆಗೆ ಬಾಗಲಕೋಟೆಯ ತೇರದಾಳದಲ್ಲಿ ಜನಸಭೆ ನಡೆಸಲಿದ್ದಾರೆ. ಮಾರ್ಚ್‌ 28ರ ಬೆಳಗ್ಗೆ 11 ಗಂಟೆಗೆ ಬಾಗಲಕೋಟೆಯಲ್ಲಿ ರೋಡ್‌ ಷೋ ಹಾಗೂ ಸಂಜೆ 4 ಗಂಟೆಗೆ ಬದಾಮಿಯಲ್ಲಿ ಜನಸಭೆಯಲ್ಲಿ ಭಾಗವಹಿಸಲಿದ್ದಾರೆ.

Advertisements

ಮಾರ್ಚ್‌ 29ರ ಬೆಳಗ್ಗೆ 11 ಗಂಟೆಗೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಜನಸಭೆ ಹಾಗೂ ಸಂಜೆ 4 ಗಂಟೆಗೆ ಧಾರವಾಡದ ಕಲಘಟಗಿಯಲ್ಲಿ ಜನಸಭೆ ನಡೆಸಲಿದ್ದಾರೆ. ಮಾರ್ಚ್‌ 30ರ ಬೆಳಗ್ಗೆ 10 ಗಂಟೆಗೆ ಧಾರವಾಡದಲ್ಲಿ ರೋಡ್‌ ಷೋ ಹಾಗೂ ಜನಸಭೆಯಲ್ಲಿ ಭಾಗವಹಿಸಿ, ಅದೇ ದಿನ ಸಂಜೆ 4 ಗಂಟೆಗೆ ಹಾವೇರಿಯ ಬ್ಯಾಡಗಿಯಲ್ಲಿ ಜನಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಮಾರ್ಚ್‌ 31ರ ಬೆಳಗ್ಗೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಜನಸಭೆ ನಡೆಸುವುದರೊಂದಿಗೆ ಈ ರಾಜ್ಯಪ್ರವಾಸ ಅಂತ್ಯಗೊಳ್ಳಲಿದೆ ಎಂದು ಪಕ್ಷ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X