ಖಾಸಗಿ ಸಾರಿಗೆಯವರಿಗೆ ಪರಿಹಾರ ಕೊಡಲು ಪ್ರಾಯೋಗಿಕವಾಗಿ ಸಾಧ್ಯವಿಲ್ಲ: ರಾಮಲಿಂಗಾರೆಡ್ಡಿ

Date:

Advertisements
  • ‘ಸಾರಿಗೆ ಚಾಲಕರು 3 ಲಕ್ಷ ಮಂದಿ ಇದ್ದು, ಅವರ ಬೇಡಿಕೆ ಈಡೇರಿಕೆ ಕಷ್ಟ’
  • ‘ಪ್ರತಿಯೊಬ್ಬರಿಗೆ ಪರಿಹಾರ ಕೊಟ್ಟರೆ 5,009 ಕೋಟಿ ರೂ. ಬೇಕಾಗುತ್ತದೆ’

ಖಾಸಗಿ ಸಾರಿಗೆಯವರು ಶಕ್ತಿ ಯೋಜನೆಯಿಂದ ನಷ್ಟ ಆಗಿದೆ ಪರಿಹಾರ ಕೊಡಿ ಅಂತಿದ್ದಾರೆ. ಅದು ಪ್ರಾಯೋಗಿಕವಾಗಿ ಸಾಧ್ಯವಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದರು.

ಖಾಸಗಿ ಸಾರಿಗೆ ಒಕ್ಕೂಟದ ಮುಷ್ಕರ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, “ನಮ್ಮ ಶಕ್ತಿ ಯೋಜನೆಗೆ ಬಜೆಟ್‌ನಲ್ಲಿ 2500 ಕೋಟಿ ರೂ. ಇಡಲಾಗಿದೆ. ಆಟೋ ಚಾಲಕರು ಪ್ರತಿ ತಿಂಗಳು 10 ಸಾವಿರ ಕೊಡು ಅಂತಾರೆ. ಎಲ್ಲಿಂದ ಹಣ ತರಬೇಕು? ಸಾರಿಗೆ ಚಾಲಕರು 3 ಲಕ್ಷ ಮಂದಿ ಇದ್ದಾರೆ. ಅವರ ಬೇಡಿಕೆ ಪ್ರಕಾರ ಪರಿಹಾರ ಕೊಟ್ಟರೆ ಅದೇ 5,009 ಕೋಟಿ ರೂ. ಆಗುತ್ತದೆ. ಇದನ್ನು ಈಡೇರಿಸಲು ಸಾಧ್ಯವೇ” ಎಂದು ಪ್ರಶ್ನಿಸಿದರು.

“ಸಾರಿಗೆ ಸಂಸ್ಥೆಗಳ ಬೇಡಿಕೆ ಎಲ್ಲವೂ ಈಗಿನದ್ದಲ್ಲ. ಕಳೆದ ನಾಲ್ಕೈದು ವರ್ಷಗಳ ಹಳೆಯ ಬೇಡಿಕೆಗಳು ಅವು. ಟ್ಯಾಕ್ಸ್ ಹೆಚ್ಚಳ ಮತ್ತು ಶಕ್ತಿ ಯೋಜನೆ ಮಾತ್ರ ನಮ್ಮ ಸರ್ಕಾರ ಬಂದ ಮೇಲೆ ಆಗಿದೆ. ಮುಖ್ಯಮಂತ್ರಿಗಳು ಸಭೆ ಕರೆದಾಗ ಸಾರಿಗೆ ಸಂಘಗಳು ಬರಲಿಲ್ಲ. ಕಾನೂನಾತ್ಮಕವಾಗಿ ಏನು ಈಡೇರಿಸಲು ಸಾಧ್ಯ ಅದನ್ನು ಈಡೇರಿಸುತ್ತೇವೆ. ಸಾರಿಗೆ ಚಾಲಕರ ಪರವಾಗಿಯೇ ನಮ್ಮ ‌ಸರ್ಕಾರ ಇದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಖಾಸಗಿ ಸಾರಿಗೆಯವರ ನಷ್ಟ ತುಂಬಿಕೊಡಲು ಸರ್ಕಾರಕ್ಕೆ ಆಗಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಖಾಸಗಿ ಸಾರಿಗೆ ಬೇಡಿಕೆ ವಿಚಾರವಾಗಿ ಕೆಲವು ಪ್ರಕರಣ ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ನಲ್ಲಿವೆ. ನಮ್ಮ ವಕೀಲರಿಗೆ ಹೇಳಿ ಅವರ ನ್ಯಾಯಯುತ ಬೇಡಿಕೆ ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಬಿಜೆಪಿ ಅವಧಿಯಲ್ಲಿ ಬೇಡಿಕೆ ಈಡೇರಿಕೆಗೆ ಅವರು ಪ್ರಯತ್ನಿಸದೇ ಈಗ ನಮ್ಮ ಸರ್ಕಾರದ ಅವಧಿಯಲ್ಲಿ ಎಲ್ಲ ಬೇಡಿಕೆ ಮುಂದಿಟ್ಟರೆ ಹೇಗೆ? ಸಭೆಗೆ ಕರೆದಾಗ ಬರಲಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಬಿಜೆಪಿಗೆ ನೈತಿಕತೆ ಇಲ್ಲ

ಖಾಸಗಿ ಸಾರಿಗೆ ಪ್ರತಿಭಟನೆಗೆ ಬೆಂಬಲಿಸುವ ಹಕ್ಕು ಬಿಜೆಪಿಗೆ ಇದೆಯಾ? ತಮ್ಮ ಅಧಿಕಾರ ಅವಧಿಯಲ್ಲಿ ಬಿಜೆಪಿ ಏನು ಮಾಡಿತು? ಈಗ ಅವರ ಬಗ್ಗೆ ಸಿಂಪಥಿ ಮಾತುಗಳನ್ನಾಡುತ್ತಿದೆ” ಎಂದು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X