ಶಕ್ತಿ ಯೋಜನೆ | ಖಾಸಗಿ ಬಸ್‌ಗಳಿಗೂ ವಿಸ್ತರಿಸಲು ಒತ್ತಾಯ

Date:

ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆ ಅನುಷ್ಠಾನಗೊಂಡಿದೆ. ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡಲಾಗುತ್ತಿದೆ. ಇದರಿಂದಾಗಿ, ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದ್ದು, ನಷ್ಟವಾಗುತ್ತಿದೆ ಎಂದು ಖಾಸಗಿ ಬಸ್‌ಗಳ ಮಾಲೀಕರು ಹೇಳುತ್ತಿದ್ದಾರೆ. ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

- Advertisement -

ರಾಜ್ಯದಲ್ಲಿ ಶಕ್ತಿ ಯೋಜನೆ ಪ್ರಾರಂಭವಾದ ಒಂದು ದಿನದಲ್ಲಿ ಖಾಸಗಿ ಬಸ್‌ಗಳಿಗೆ ಪ್ರಯಾಣಿಕರ ಸಂಖ್ಯೆಯಲ್ಲಿ 50% ಕುಸಿತ ಕಂಡಿದೆ ಎಂದು ಖಾಸಗಿ ಬಸ್ ನಿರ್ವಾಹಕರು ಸೋಮವಾರ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ನಮ್ಮ ಬಸ್‌ಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ವೇತನ ನೀಡಲು ಹಣವಿಲ್ಲದ ಪರಿಸ್ಥಿತಿ ಎದುರಾಗಿದೆ. ಅವರು ತಮ್ಮ ಕುಟುಂಬಗಳನ್ನು ಪೋಷಿಸಲು ಹೇಗೆ ಸಾಧ್ಯ? ನಮ್ಮ ಬಸ್‌ಗಳಿಗೆ ಡೀಸೆಲ್‌ ಹಾಕಿಸಲೂ ಹಣವಿಲ್ಲ” ಎಂದು ಬೆಂಗಳೂರಿನ ಕೆಕೆ ಟ್ರಾವೆಲ್ಸ್ ಮಾಲೀಕ ನಿಸಾರ್ ಅಹಮದ್ ಹೇಳಿದ್ದಾರೆ.

“ಮಹಿಳೆಯರು ಈಗ ಸರ್ಕಾರಿ ಬಸ್‌ಗಳನ್ನು ಹತ್ತಲು ಕಾಯುತ್ತಾರೆ. ನಾವು ಬಹುತೇಕ ಖಾಲಿ ಬಸ್‌ಗಳಲ್ಲಿ ಸಂಚಾರ ಮಾಡಬೇಕಾಗಿದೆ. ರಾಜ್ಯದಲ್ಲಿ 10,000 ಖಾಸಗಿ ಬಸ್‌ಗಳಿವೆ. ಈ ಬಸ್‌ಗಳಲ್ಲಿನ ದುಡಿಯನ್ನೇ ನಂಬಿಕೊಂಡು ಸಾವಿರಾರು ಕುಟುಂಬಗಳು ಜೀವಿಸುತ್ತಿವೆ. ಉಚಿತ ಬಸ್ ಪ್ರಯಾಣವನ್ನು ವಿಸ್ತರಿಸಬೇಕು ಅಥವಾ ನಷ್ಟವನ್ನು ಸರಿದೂಗಿಸಲು ನಮಗೆ ತೆರಿಗೆ ವಿನಾಯಿತಿ ನೀಡಬೇಕು” ಎಂದು ಮತ್ತೊಬ್ಬ ಬಸ್‌ ಮಾಲೀಕ ವಿ ಗೀತೇಶ್‌ ಹೇಳಿರುವುದಾಗಿ ‘ಟಿಓಐ’ ವರದಿ ಮಾಡಿದೆ.

ಈ ಸುದ್ದಿ ಓದಿದ್ದೀರಾ?: ಶಕ್ತಿ ಯೋಜನೆ | ಮತ್ತಷ್ಟು ‘ಸ್ವಾತಂತ್ರ್ಯ’ದತ್ತ ಮಹಿಳೆಯರ ಸವಾರಿ

“ಖಾಸಗಿ ಬಸ್‌ಗಳಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ವಾಹನ ವಿಮೆ ಕಂತುಗಳನ್ನು ಮತ್ತು ತ್ರೈಮಾಸಿಕ ತೆರಿಗೆಯನ್ನು ಪಾವತಿಸಬೇಕಾಗುತ್ತದೆ. ಒಂದು ಟೈರ್ ಬದಲಾವಣೆಗೆ ರೂ 24,000 ವೆಚ್ಚವಾಗುತ್ತದೆ ಮತ್ತು ರಸ್ತೆಗಳ ಕೆಟ್ಟ ಸ್ಥಿತಿಯಿಂದಾಗಿ, ಬಸ್‌ಗಳು ಪದೇ ಪದೇ ಕೆಟ್ಟು ನಿಲ್ಲುತ್ತವೆ” ಎಂದು ಅವರು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....