‘ಜೈ ಶ್ರೀರಾಮ್’ ಎಂದಮಾತ್ರಕ್ಕೆ ಬಿಜೆಪಿಯವರು ಪಾಪ ಮು‌ಕ್ತರಾಗುವುದಿಲ್ಲ: ಅಶೋಕ್‌ಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು

Date:

Advertisements

ಹಿಂದೂ ಧಾರ್ಮಿಕತೆ ವಿಚಾರವಾಗಿ ವಿಪಕ್ಷ ನಾಯಕ ಆರ್‌ ಅಶೋಕ್‌ ಮತ್ತು ಆರ್‌ಡಿಪಿಆರ್‌ ಸಚಿವ ಪ್ರಿಯಾಂಕ್‌ ಖರ್ಗೆ ನಡುವಿನ ವಾಕ್ಸಮರ ಮುಂದುವರಿದಿದೆ. ಈ ಇಬ್ಬರು ನಾಯಕರಿಂದ ನಾಲ್ಕು ದಿನದಿಂದ ಎಕ್ಸ್‌ ತಾಣದಲ್ಲಿ ಪರಸ್ಪರ ಮಾತಿನ ಏಟು ತಿರುಗೇಟು ನಡೆಯುತ್ತಿದೆ.

ಇಂದು (ಡಿ.30) ಸಚಿವ ಪ್ರಿಯಾಂಕ್‌ ಖರ್ಗೆ ಅವರು ಆರ್‌ ಅಶೋಕ್‌ ಅವರು ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿ, “ಆರ್‌ ಅಶೋಕ್‌ ಅವರೇ ನನ್ನ ಹೇಳಿಕೆ ಸ್ಪಷ್ಟವಾಗಿದೆ. ನೀವು ಜೈ ಶ್ರೀ ರಾಮ್ ಎಂದು ಹೇಳುವುದರಿಂದ ನಿಮ್ಮ ಪಾಪಗಳನ್ನು ತೊಳೆದುಹೋಗುವುದಿಲ್ಲ. ನಮ್ಮ ಬದುಕು ಕಟ್ಟುವ ರಾಜಕೀಯ, ಬಿಜೆಪಿಯದ್ದು ಭಾವನೆ ಪ್ರಚೋದಿಸುವ ರಾಜಕೀಯ” ಎಂದು ಕುಟುಕಿದ್ದಾರೆ.

“ವಿಷಯಾಂತರ ಮಾಡುವುದರಲ್ಲಿ ಬಿಜೆಪಿಯವರೇ ನಿಸ್ಸಿಮರು ಎನ್ನುವುದು ಜಗತ್ತಿಗೆ ತಿಳಿದ ಸಂಗತಿ. ನಮ್ಮದು ಮನೆಗಳಲ್ಲಿ ದೀಪ ಹಚ್ಚುವ ಯೋಜನೆಗಳು, ಬಿಜೆಪಿಯವರದ್ದು ಸಮಾಜದಲ್ಲಿ ಬೆಂಕಿ ಹಚ್ಚುವ ಸಂಚುಗಳು” ಎಂದು ಹರಿಹಾಯ್ದಿದ್ದಾರೆ.

Advertisements

“ಆರ್‌ ಅಶೋಕ್ ಸರ್,‌ ತಾವು ಕಾಂಗ್ರೆಸ್ ಪಕ್ಷ ಮತ್ತು ಖರ್ಗೆ ಕುಟುಂಬದ ಬಗ್ಗೆ ಚಿಂತಿಸುವ ಬದಲು ನಿಮ್ಮ ಪಕ್ಷದ ಸಮಸ್ಯೆಗಳನ್ನು ಗಮನಿಸಿದರೆ ಕ್ಷೇಮ. ಒಕ್ಕಲಿಗರು, ದಲಿತರ ಬಗ್ಗೆ ಅವಹೇಳನ ಮಾಡಿದ ಹಾಗೂ ನಿಮಗೇ HIV ಇಂಜೆಕ್ಷನ್ ಚುಚ್ಚಲು ಸಂಚು ರೂಪಿಸಿದ ಮುನಿರತ್ನರಿಗೆ ಕನಿಷ್ಠ ಒಂದು ಶೋಕಾಸ್ ನೋಟಿಸ್ ನೀಡುವುದಕ್ಕೂ ಸಾಮ್ರಾಟರಿಂದ ಸಾಧ್ಯವಾಗಿಲ್ಲ ಎಂದು ಜನಸಾಮಾನ್ಯರು ಮಾತಾಡಿಕೊಂಡು ನಗುತ್ತಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

“ನಿಮ್ಮನ್ನು ನೀವೇ ರಕ್ಷಿಸಿಕೊಳ್ಳಲು ಸಾಧ್ಯವಿಲ್ಲದ ನಿಮ್ಮಿಂದ ಕುದಿಯುತ್ತಿರುವ ತಮ್ಮ ಪಕ್ಷದ ಜ್ವಾಲಾಮುಖಿಯನ್ನು ತಣಿಸಲು ಸಾಧ್ಯವೇ? ಮುಳುಗುತ್ತಿರುವ ಕರ್ನಾಟಕದ ಬಿಜೆಪಿಯನ್ನು ಪ್ರಭು ಶ್ರೀರಾಮ ಬಂದರೂ ಉಳಿಸಲು ಸಾಧ್ಯವಿಲ್ಲ!” ಎಂದು ಲೇವಡಿ ಮಾಡಿದ್ದಾರೆ.

“ವಿರೋಧ ಪಕ್ಷದ ನಾಯಕರೇ, ಚನ್ನಗಿರಿಯಲ್ಲಿ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ ಎಂದು ನಿಮ್ಮದೇ ಪಕ್ಷದ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರನ್ನು ಕೇಳುವುದು ಸೂಕ್ತ. ಅವರ ಅವಧಿಯಲ್ಲಿನ ಬೆಳವಣಿಗೆಗಳ ಬಗ್ಗೆ ಅವರಿಗೇ ಹೆಚ್ಚು ತಿಳಿದಿರುತ್ತದೆ. ನಿಮ್ಮ ಹಿತಕ್ಕಾಗಿ ನನ್ನದೊಂದು ಸಲಹೆ, ಕಳಪೆ ಮತ್ತು ವಿಷಯ ರಹಿತ ಪೋಸ್ಟ್ ಗಳಿಂದ ನಿಮ್ಮ ಸಾಮಾಜಿಕ ಜಾಲತಾಣದ ನಿರ್ವಾಹಕರು ನಿಮ್ಮ ಇಮೇಜ್ ಡ್ಯಾಮೇಜ್ ಮಾಡುತ್ತಿದ್ದಾರೆ. ಬಹುಶಃ ವೇತನ ಕಡಿಮೆಯಾಗಿದ್ದಕ್ಕೆ ಅವರು ನಿಮ್ಮ ಮೇಲೆ ಕೋಪಗೊಂಡಿರಬಹುದು, ಅವರ ವೇತನ ಏರಿಕೆ ಮಾಡಿ” ಎಂದು ಕುಟುಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X