ಪ್ರಿಯಾಂಕಾ ಗಾಂಧಿ ನಕಲಿ ‘ಉಪನಾಮ’ ಬಳಸಿಕೊಳ್ಳುತ್ತಿದ್ದಾರೆ: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್

Date:

Advertisements

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮತ ಗಳಿಸಲು ಗಾಂಧಿ ಕುಟುಂಬದ ‘ನಕಲಿ’ ಗಾಂಧಿ ಉಪನಾಮವನ್ನು ಬಳಸಿಕೊಂಡಿದ್ದಾರೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.

ರಾಜಸ್ಥಾನದ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ ಅವರು ಮಹಿಳೆಯರ ಮಂಗಳಸೂತ್ರಗಳನ್ನು ಕಾಂಗ್ರೆಸ್‌ ಕಿತ್ತುಕೊಳ್ಳುತ್ತದೆ ಎಂದು ಹೇಳಿದ ಬಳಿಕ, ನಾನಾ ರೀತಿಯಲ್ಲಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸುವುದನ್ನು ಬಿಜೆಪಿ ನಾಯಕರು ಮುಂದುವರೆಸಿದ್ದಾರೆ. ಮಧ್ಯಪ್ರದೇಶದ ಗುಣಾದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮೋಹನ್‌ ಯಾದವ್‌ ಅವರು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

“ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಮೊಮ್ಮಗಳು ವಿವಾಹವಾಗಿದ್ದರೂ ಮಂಗಳಸೂತ್ರ ಧರಿಸಿಲ್ಲ. ನಮ್ಮ ಸಂಪ್ರದಾಯದ ಪ್ರಕಾರ, ಮಗಳು ಮದುವೆಯಾದ ತಕ್ಷಣ, ಅವಳು ತನ್ನ ಅತ್ತೆ ಮನೆಯ ಉಪನಾಮವನ್ನು ತನ್ನ ಹೆಸರಿನೊಂದಿಗೆ ಸೇರಿಸಿಕೊಳ್ಳುತ್ತಾಳೆ. ಆದರೆ, ಈ ಮತದ ದಾಹವುಳ್ಳ ಜನರು ಇಂದಿಗೂ ತಮ್ಮ ಉಪನಾಮದಲ್ಲಿ ‘ಗಾಂಧಿ’ ಎಂದೇ ಬಳಸುತ್ತಿದ್ದಾರೆ. ಪ್ರಿಯಾಂಕಾ ಗಾಂಧಿ ಹೇಗೆ? ನಿಜವಾದ ಗಾಂಧಿ ಕುಟುಂಬದ ಸದಸ್ಯರು ಎಲ್ಲಿದ್ದಾರೆಂದು ಯಾರಿಗೆ ಗೊತ್ತು? ಅವರೆಲ್ಲ ನಕಲಿ ಗಾಂಧಿಗಳು. ಅವರು ಕೇವಲ ಗಾಂಧಿ ಹೆಸರಿನಲ್ಲಿ ಮತಗಳನ್ನು ಪಡೆಯಲು ಬಯಸುತ್ತಾರೆ” ಎಂದು ಹೇಳಿದ್ದಾರೆ.

Advertisements

ಗಮನಿಸಿ: ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಹೇಳಿಕೆಗಳು ಪುರುಷ ಪ್ರಧಾನ ವ್ಯವಸ್ಥೆಯನ್ನು ಪ್ರತಿಪಾದಿಸುತ್ತವೆ. ಗಂಡಿನಂತೆಯೇ ಹೆಣ್ಣು ಕೂಡ ಸ್ವತಂತ್ರಳು, ಆಕೆ ವಿವಾಹಕ್ಕೂ ಮುನ್ನ ತಂದೆಯ ಹೆಸರು ಹಾಗೂ ವಿವಾಹ ನಂತರ ಗಂಡನ ಹೆಸರಿನೊಂದಿಗೆ ತನ್ನನ್ನು ಗುರುತಿಸಿಕೊಳ್ಳುವ ಅಗತ್ಯವಿಲ್ಲ. ಅಂತಹ ಯಾವುದೇ ಕಾನೂನು ಕೂಡ ಭಾರತದಲ್ಲಿ ಇಲ್ಲ. ಮಹಿಳೆಯರು ಕೂಡ ತನ್ನದೇ ಆತ ಗುರುತನ್ನ ಹೊಂದುವ ಹಕ್ಕು ಹೊಂದಿದ್ದಾರೆ. ಅವರ ಗುರತನ್ನು ಪುರುಷರೊಂದಿಗೆ ಗುರುತಿಸುವ ಅಗತ್ಯವಿಲ್ಲ. ಬಿಜೆಪಿ ನಾಯಕರ ಹೇಳಿಕೆಗಳು ಮನುಸ್ಮೃತಿ ಅಂಶಗಳನ್ನು ಹೊಂದಿವೆ. ಈ ಮನುಸ್ಮೃತಿ ಹೆಣ್ಣು ಗಂಡಿನ ಅಧೀನಳು ಎಂದು ಹೇಳುತ್ತದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X