ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ?: ಆರ್‌ ಅಶೋಕ್‌ ಆರೋಪ

Date:

Advertisements

ನಾಗಮಂಗಲ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗಿತ್ತಿದೆ. ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ ಕೂಗಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಆರೋಪಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಅವರು, “ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳು ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದಾರೆ” ಎಂದಿದ್ದಾರೆ.

“ಇದರ ಬೆನ್ನಲ್ಲೇ ಚಿಕ್ಕಮಗಳೂರಲ್ಲಿ ಬೈಕ್‌ನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದಿರುವ ಪುಂಡಾಟ, ದಾವಣಗೆರೆಯ ಗಾಂಧಿನಗರ ಹಾಗೂ ಅಹ್ಮದ್ ನಗರಗಳಲ್ಲಿ ಹಿಂದೂ ಯುವಕರು ಬಾವುಟ ಕಟ್ಟಿದ್ದಕ್ಕೆ ಮತಾಂಧ ಪುಂಡರು ಅವರ ಮೇಲೆ ಹಲ್ಲೆ ಮಾಡಿರುವುದು, ಇವನ್ನೆಲ್ಲಾ ಗಮನಿಸುತ್ತಿದ್ದರೆ ಈ ಪ್ರಚೋದನಕಾರಿ ಘಟನೆಗಳು ಗಣೇಶೋತ್ಸವವನ್ನೇ ಟಾರ್ಗೆಟ್ ಮಾಡಿರುವಂತಿದೆ” ಎಂದು ಕಿಡಿಕಾರಿದ್ದಾರೆ.

Advertisements

“ಇಂತಹ ಘಟನೆಗಳು ಅಯೋಧ್ಯ ರಾಮ ಮಂದಿರದ ಉದ್ಘಾಟನೆ ಸಂದರ್ಭದಲ್ಲಿಯೂ ನಡೆದಿತ್ತು. ಹಿಂದೂಗಳ ಹಬ್ಬಗಳು, ಉತ್ಸವಗಳು, ಸಂಭ್ರಮಾಚರಣೆಗಳನ್ನೇ ಗುರಿಯಾಗಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಇಂತಹ ದುಷ್ಕೃತ್ಯಗಳ ಹಿಂದೆ ಮತೀಯ ಮೂಲಭೂತವಾದಿ ಸಂಘಟನೆಗಳ ದೊಡ್ಡ ಜಾಲವೇ ಇರುವಂತಿದೆ” ಎಂದು ಆರೋಪಿಸಿದ್ದಾರೆ.

“ಅಂತಾರಾಜ್ಯ, ಅಂತರಾಷ್ಟ್ರೀಯ ನಂಟು ಹೊಂದಿರುವ ಇಂತಹ ವ್ಯವಸ್ಥಿತ, ಪ್ರಾಯೋಜಿತ, ಜಾಲವನ್ನ ಬೇಧಿಸುವುದು ಸ್ಥಳೀಯ ಪೊಲೀಸರಿಂದ ಅಸಾಧ್ಯವಾಗಿದ್ದು, ಕೂಡಲೇ ಈ ಪ್ರಕರಣಗಳನ್ನ ಎನ್‌ಐಎ ತನಿಖೆಗೆ ಒಪ್ಪಿಸಬೇಕು ಎಂದು ಗೃಹ ಸಚಿವ ಪರಮೇಶ್ವರ್‌ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸುತ್ತೇನೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ಪೊಲೀಸ್ರು ಎಷ್ಟು ಜಾಗೃತರಾಗಿದ್ದಾರೆ ನೋಡಿ….ಮಂಗಳೂರಿನ ಕಾಟಿಪಳ್ಳದ ಬದ್ರಿಯಾ ಮಸೀದಿ ಮೇಲೆ ಕೆಲ ಕಿಡಿಗೇಡಿಗಳು ಕಲ್ಲು ತೂರಿದ ಕೂಡಲೇ 6 ಮಂದಿಯನ್ನು ಬಂಧಿಸಿದ್ದಾರೆ. ಅದ್ರೆ, ನಾಗಮಂಗಲದಲ್ಲಿ ಗಣಪತಿ ಮೆರವಣಿಗೆ ವೇಳೆ ಗಲಭೆ ನಡೆಸಿದ ಕಿಡಿಗೇಡಿಗಳನ್ನು ಇನ್ನೂ ಕೂಡ ಸರ್ಕಾರ ಬಂಧಿಲ್ಲ. ಈ ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ಪರ ಇರೋದಕ್ಕೆ ಇದಕ್ಕಿಂತ ಸಾಕ್ಖಿ ಬೇಕೆ?

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X