ಪಿಯು ಉಪನ್ಯಾಸಕರ ಹುದ್ದೆಗೆ ಬಡ್ತಿ, ಪ್ರೌಢಶಾಲಾ ಶಿಕ್ಷಕರ ತಾರತಮ್ಯ ನಿವಾರಣೆಗೆ ಕ್ರಮ: ಮಧು ಬಂಗಾರಪ್ಪ

Date:

ರಾಜ್ಯದಲ್ಲಿ ಪ್ರೌಢಶಾಲಾ ಸಹ ಶಿಕ್ಷಕರಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ರೂಪಿಸಿರುವ ನಿಯಮಗಳಲ್ಲಿನ ತಾರತಮ್ಯಗಳ ಬಗ್ಗೆ ಬೆಳಗಾವಿಯ ಚಳಿಗಾಲದ ಅಧಿವೇಶನ ಮುಗಿಯುವ ಒಳಗೆ ವಿಶೇಷ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲು ಪ್ರಯತ್ನಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ತಿಳಿಸಿದರು.

- Advertisement -

ವಿಧಾನ ಪರಿಷತ್‌ನಲ್ಲಿ ಸದಸ್ಯ ಮರಿತಿಬ್ಬೇಗೌಡ ಅವರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವ್ಯಾಪ್ತಿಯಲ್ಲಿನ ಶಿಕ್ಷಕರಿಗೆ ಹಿರಿಯ ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ಬಡ್ತಿ ನೀಡುವಲ್ಲಿ ಒಂದು ನಿಯಮ, ಪ್ರೌಢಶಾಲೆಯಿಂದ ಪದವಿ ಪೂರ್ವ ಕಾಲೇಜಿಗೆ ಬಡ್ತಿ ನೀಡುವಲ್ಲಿ ಮತ್ತೊಂದು ನಿಯಮ ರೂಪಿಸಿ ತಾರತಮ್ಯ ಉಂಟು ಮಾಡಿರುವ ಗಂಭೀರ ಸಮಸ್ಯೆ ಕುರಿತ ಗಮನ ಸೆಳಯುವ ಸೂಚನೆಗೆ ಉತ್ತರಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

“ಪ್ರಸ್ತುತ ಪ್ರೌಢಶಾಲಾ ಸಹ ಶಿಕ್ಷಕರಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ಹೊಂದಲು ಪ್ರೌಢಶಾಲಾ ಸಹ ಶಿಕ್ಷಕರಾಗಿ 10 ವರ್ಷಗಳ ಅರ್ಹತಾದಾಯಕ ಸೇವೆಯನ್ನು ಪೂರೈಸಿರಬೇಕು. ಒಂದು ವೇಳೆ 10 ವರ್ಷ ಪೂರೈಸಿರುವವರು ಲಭ್ಯವಿಲ್ಲದಿದ್ದಲ್ಲಿ 7 ವರ್ಷ ಸೇವೆ ಪೂರೈಸಿರುವವರನ್ನು ಬಡ್ತಿಗೆ ಪರಿಗಣಿಸಲಾಗುವುದು” ಎಂದು ಹೇಳಿದರು.

“ಪ್ರಸ್ತುತ ಚಾಲ್ತಿಯಲ್ಲಿರುವ 2014 ರ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಉಪನ್ಯಾಸಕ ವೃಂದದಲ್ಲಿ ನೇರ ನೇಮಕಾತಿಗೆ ಶೇ.74 ಮತ್ತು ಶೇ.1 ರಷ್ಟು ಸೇವಾ ನಿರತ ಸಿ ಗುಂಪಿನ ನೌಕರರಿಗೆ ಹಾಗೂ ಶೆ.25 ರಷ್ಟು ಸೇವಾ ನಿರತ ಪ್ರೌಢಶಾಲಾ ಸಹ ಶಿಕ್ಷಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ಅರ್ಹತಾದಾಯಕ ಪರೀಕ್ಷೆ ಉತ್ತೀರ್ಣರಾಗುವ ಷರತ್ತಿನಂತೆ ಅನುಪಾತವನ್ನು ಹಂಚಿಕೆ ಮಾಡಿ ಬಡ್ತಿ ಕಲ್ಪಿಸಲಾಗಿದೆ” ಎಂದರು.

2014 ರ ವೃಂದ ಮತ್ತು ನೇಮಕಾತಿ ನಿಯಮಗಳು ಹಾಗೂ ಅರ್ಹತದಾಯಕ ಪರೀಕ್ಷೆ ಉತೀರ್ಣರಾಗಬೇಕು ಎಂಬ ಷರತ್ತುಗಳ ಕಾರಣ ಕಳೆದ 9 ವರ್ಷಗಳಿಂದ ಯಾವುದೇ ಪ್ರೌಢಶಾಲಾ ಸಹ ಶಿಕ್ಷಕರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ಹೊಂದಲು ಸಾಧ್ಯವಾಗಿಲ್ಲ. ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವಾಗ ಶೇ.50ರಷ್ಟು ನೇರ ನೇಮಕಾತಿ ಮತ್ತು ಶೇ.50ರಷ್ಟು ಸೇವಾ ನಿರತರಿಗೆ ನಿಗದಿಪಡಿಸಿದ್ದು, ಯಾವುದೇ ಅರ್ಹತಾ ಪರೀಕ್ಷೆಯನ್ನು ಕಡ್ಡಾಯಗೊಳಿಸಿಲ್ಲ. ಒಂದೇ ಇಲಾಖೆಯಲ್ಲಿ ಬಡ್ತಿಗಾಗಿ ಈ ರೀತಿಯಾಗಿ ತಾರತಮ್ಯ ಇರುವುದರಿಂದ ಇದನ್ನು ಸರಿಪಡಿಸುವಂತೆ ಶಾಸಕ ಮರಿತಿಬ್ಬೇಗೌಡ ಅವರಿಗೆ ಪೂರಕವಾಗಿ ಸದಸ್ಯರಾದ ನಾರಾಯಣ ಸ್ವಾಮಿ, ಶಶೀಲ್ ನಮೋಶಿ, ಭೋಜೇಗೌಡ, ಸಂಕನೂರ್ ಹಾಗೂ ತೇಜಸ್ವಿನಿ ಗೌಡ ಮಾತನಾಡಿದರು.

ಈ ಸಮಸ್ಯೆಯ ಕುರಿತಂತೆ ಶಿಕ್ಷಕರೂ ಕೂಡಾ ತಮ್ಮ ಗಮನಕ್ಕೆ ತಂದಿದ್ದು, ಈ ಬಗ್ಗೆ ಪ್ರಸಕ್ತ ಅಧಿವೇಶನ ಮುಗಿಯುವ ಒಳಗೆ, ಅಗತ್ಯ ಬದಲಾವಣೆಗಳ ಬಗ್ಗೆ ವಿಶೇಷ ಸಭೆ ಕರೆದು ಚರ್ಚಿಸಲಾಗುವುದು ಎಂದು ಸಚಿವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೂರಜ್ ರೇವಣ್ಣಗೆ ಬಿಗ್ ರಿಲೀಫ್! 2 ಪ್ರಕರಣಗಳ ಬಿ-ರಿಪೋರ್ಟ್ ಸಲ್ಲಿಸಿದ ಸಿಐಡಿ

ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅಸಹಜ ಲೈಂಗಿಕ...

ಟಿಎಂಸಿ ಚಿಹ್ನೆ ಮುಟ್ಟುಗೋಲು: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಟಿಎಂಸಿ ಪಕ್ಷದ ಆಂತರಿಕ ಭಿನ್ನಮತ ಮತ್ತು ಬಂಡಾಯದ ಬಳಿಕ ಚುನಾವಣಾ ಆಯೋಗವು...

ಐದು ದಿನಗಳಲ್ಲಿ 12 ಮಸೂದೆಗಳಿಗೆ ರಾಜ್ಯಪಾಲರ ಅಂಕಿತ: ತಮಿಳು ಸರ್ಕಾರ–ರಾಜಭವನ ಸಂಬಂಧದಲ್ಲಿ ಹೊಸ ತಿರುವು

ಡಿಎಂಕೆ ಆಡಳಿತವಿದ್ದಾಗ ಮಸೂದೆಗಳು, ವಿಶ್ವವಿದ್ಯಾಲಯಗಳು ಹಾಗೂ ರಾಜ್ಯಪಾಲರ ಅಧಿಕಾರದ ವಿಚಾರದಲ್ಲಿ ನಿರಂತರ...