ಪ್ರಜಾಪ್ರಭುತ್ವ, ಸಂವಿಧಾನವನ್ನು ರಕ್ಷಣೆ ಮಾಡುವುದೇ ಮಹನೀಯರಿಗೆ ಸಲ್ಲಿಸುವ ಗೌರವ: ಸಿಎಂ ಸಿದ್ದರಾಮಯ್ಯ

Date:

ಸಂವಿಧಾನವನ್ನು ದುರ್ಬಲಗೊಳಿಸುವ ಶಕ್ತಿಗಳ ವಿರುದ್ಧ ಹೋರಾಡಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ರಕ್ಷಣೆ ಮಾಡುವುದೇ ಎಲ್ಲ ಮಹನೀಯರಿಗೆ ಸಲ್ಲಿಸುವ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಸೋಷಿಯಲ್ ಜಸ್ಟೀಸ್ ಫೌಂಡೇಶನ್, ಮೈಸೂರು ಇವರ ವತಿಯಿಂದ ಆಯೋಜಿಸಿರುವ ಡಾ. ಹರೀಶ್ ಕುಮಾರ್ ಅವರ ‘ಆಧುನಿಕ ಭಾರತದ ನಿರ್ಮಾತೃ ಡಾ. ಬಾಬು ಜಗಜೀವನರಾಮ್’ ಮತ್ತು ‘ಬಾಬೂಜಿ ಚಿತ್ರ ಸಂಪುಟ’ ಕೃತಿಯನ್ನು ಬಿಡುಗಡೆಗೊಳಿಸಿದರು.

ಜಗಜೀವನ್ ರಾಂ ಅವರು ದೇಶ ಕಂಡ ಅಪ್ರತಿಮ ದೇಶಪ್ರೇಮಿ, ಮುತ್ಸದ್ಧಿ ರಾಜಕಾರಣಿ ಹಾಗೂ ಪ್ರಜಾಪ್ರಭುತ್ವವಾದಿ. ದೇಶಕ್ಕೆ ಸ್ವಾತಂತ್ರ್ಯ ಬರಬೇಕೆಂದು ಹೋರಾಟ ಮಾಡಿದ ಎಲ್ಲರಿಗೂ ಮುಂದೆ ದೇಶ ಹೇಗೆ ನಿರ್ಮಾಣವಾಗಬೇಕೆಂಬ ಕನಸಿತ್ತು. ಇದಕ್ಕೆ ಪೂರಕವಾದ ಸಂವಿಧಾನದ ರಚನಾ ಸಮಿತಿ ಅಧ್ಯಕ್ಷರಾಗಿ ಸೂಕ್ತ ಸಂವಿಧಾನವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ರಚನೆ ಮಾಡಿದ್ದಾರೆ ಎಂದರು.

ಸಮಾನ ಅವಕಾಶಗಳಿರುವ ಸಮಸಮಾಜ ನಿರ್ಮಾಣವಾಗಬೇಕು
ಸಮಾಜದಲ್ಲಿ ಹಸಿವು, ಬಡತನ, ನಿರುದ್ಯೋಗ, ದಾರಿದ್ರ್ಯ, ಅನಕ್ಷರತೆ ಎಲ್ಲವೂ ತೊಲಗಿ, ಸಮಾನ ಅವಕಾಶಗಳಿರುವ ಸಮಸಮಾಜ ನಿರ್ಮಾಣವಾಗಬೇಕು. ಅದಕ್ಕಾಗಿಯೇ ಪ್ರಯತ್ನ ಮಾಡಿದರು ಎಂದು ಸಿಎಂ ತಿಳಿಸಿದರು.

ಇತಿಹಾಸ ತಿರುಚಿರುವುದನ್ನು ನಾವು ನೋಡಿದ್ದೇವೆ. ಮುಂದೆ ಏನಾಗಬೇಕೆಬುದನ್ನು ಚರ್ಚಿಸುವುದು ಉತ್ತಮ. ಅಂಬೇಡ್ಕರ್, ಗಾಂಧಿ, ನೆಹರೂ, ಜಗಜೀವನ್ ರಾಂ ಅವರು ಹೇಳಿದಂಥ ಭಾರತ ನಿರ್ಮಾಣವಾಗಬೇಕು. ನಮಗೆ ಅವಕಾಶ ಸಿಕ್ಕಿದಾಗ ಅಂಥ ಭಾರತ, ರಾಜ್ಯವನ್ನು ನಿರ್ಮಿಸಬೇಕು. ಆ ದಿಕ್ಕಿನಲ್ಲಿ ನಮ್ಮ ಸರ್ಕಾರ ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ಎಲ್ಲ ಸರ್ಕಾರಗಳ ಉದ್ದೇಶ ಆದೇ ಆಗಬೇಕು. ಸಂವಿಧಾನದ ಪೀಠಿಕೆಯಲ್ಲಿ ಹೇಳಿರುವುದೇ ಸಂವಿಧಾನದ ಉದ್ದೇಶ. ಅದನ್ನು ಜಾರಿ ಮಾಡುವ ಪ್ರಯತ್ನ ನಮ್ಮದು. ಅನೇಕ ಶಕ್ತಿ ಗಳು ಅದಕ್ಕೆ ವಿರುದ್ದವಾಗಿವೆ. ಅಂಥ ಶಕ್ತಿಗಳನ್ನು ವಿರುದ್ಧ ಹೋರಾಡುವ ಮಾಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು.

ಪಟ್ಟಭದ್ರ ಹಿತಾಸಕ್ತಿಗಳು ಹಿಂದೆಯೂ ಇದ್ದರು, ಈಗಲೂ ಇದ್ದಾರೆ. ಅವರನ್ನು ಗುರುತಿಸಿ ಅವರಿಗೆ ಶಕ್ತಿ ಬಾರದಂತೆ ನೋಡಿಕೊಳ್ಳುವ ಕೆಲಸವಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

3ನೇ ಕಂತಿಗಾಗಿ ಮತ್ತೆ ಬಂದ ಸುರ್ಜೇವಾಲ: ಸಿ ಟಿ ರವಿ ಆರೋಪ

ಕಾಂಗ್ರೆಸ್ ಯಾವಾಗಲೂ ಚುನಾವಣೆ ನಡೆಸುವುದೇ ಕಡೇ 3 ದಿನದಲ್ಲಿ ...

ಜನತಾ ದರ್ಶನದ ಮೂಲಕ ರಾಜ್ಯದ ‘ಆಡಳಿತ’ ಸಿಎಂಗೆ ಮನವರಿಕೆಯಾಗಿರಬಹುದು: ಕುಮಾರಸ್ವಾಮಿ

ಎಲ್ಲದಕ್ಕೂ ಸರ್ಕಾರವನ್ನು ಟೀಕಿಸಲ್ಲ ಎಂದ ಜೆಡಿಎಸ್ ರಾಜ್ಯಾಧ್ಯಕ್ಷ ನಮ್ಮ ಶಕ್ತಿ...