ಸ್ವಾತಂತ್ರ್ಯ ದಿನಾಚರಣೆ | ಮಾಂಸ ನಿಷೇಧ ವಿರೋಧಿಸಿ ಕೋಳಿಗಳನ್ನು ಹಿಡಿದು ಪ್ರತಿಭಟನೆ

Date:

Advertisements

ಸ್ವಾತಂತ್ರ್ಯ ದಿನಾವರಣೆಯ ಹಿನ್ನೆಲೆ ಥಾಣೆ ಜಿಲ್ಲೆಯ ಕಲ್ಯಾಣ್ ಡೊಂಬಿವ್ಲಿ ನಗರಸಭೆಯು ಮಾಂಸದ ಅಂಗಡಿಗಳು ಮತ್ತು ಕಸಾಯಿಖಾನೆಗಳನ್ನು ಮುಚ್ಚುವಂತೆ ಆದೇಶಿಸಿದ್ದು, ಮಾಂಸ ನಿಷೇಧದ ವಿರುದ್ಧ ಕೋಳಿಗಳನ್ನು ಹಿಡಿದು ಪ್ರತಿಭಟನೆ ನಡೆಸಲಾಗಿದೆ. ನಗರಸಭೆಯ ಪ್ರಧಾನ ಕಚೇರಿಯ ಹೊರಗೆ ಶುಕ್ರವಾರ ಹಲವು ವಿರೋಧ ಪಕ್ಷಗಳು, ಮಾಂಸ ಮಾರಾಟಗಾರರ ಸಂಘಗಳು ಮತ್ತು ಸಮುದಾಯ ಗುಂಪುಗಳ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.

ಕಲ್ಯಾಣ್ ಪ್ರದೇಶದ ಕೆಡಿಎಂಸಿ ಮುಖ್ಯ ಕಚೇರಿಯ ಹೊರಗೆ ನಡೆದ ಪ್ರದರ್ಶನದಲ್ಲಿ ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಕಾರ್ಯಕರ್ತರೂ ಭಾಗವಹಿಸಿದ್ದರು.

ಇದನ್ನು ಓದಿದ್ದೀರಾ? ಸ್ವಾತಂತ್ರ್ಯದ ದಿನವೇ ಮಾಂಸದ ಅಂಗಡಿಗಳಿಗೆ ಇಲ್ಲ ಸ್ವಾತಂತ್ರ್ಯ!

Advertisements

ಆಗಸ್ಟ್ 14ರ ಮಧ್ಯರಾತ್ರಿಯಿಂದ ಆಗಸ್ಟ್ 15ರ ಮಧ್ಯರಾತ್ರಿಯವರೆಗೆ ಎಲ್ಲಾ ಕಸಾಯಿಖಾನೆಗಳು ಮತ್ತು ಪರವಾನಗಿ ಪಡೆದ ಮೇಕೆ, ಕುರಿ, ಕೋಳಿಗಳು ಮತ್ತು ಇತರೆ ಪ್ರಾಣಿಗಳ ಕಸಾಯಿಖಾನೆಗಳನ್ನು 24 ಗಂಟೆಗಳ ಕಾಲ ಮುಚ್ಚಬೇಕು ಎಂದು ಕೆಡಿಎಂಸಿ ಇತ್ತೀಚೆಗೆ ಆದೇಶ ಹೊರಡಿಸಿದೆ.

ಆದೇಶವನ್ನು ಉಲ್ಲಂಘಿಸಿದರೆ 1949ರ ಮಹಾರಾಷ್ಟ್ರ ಪುರಸಭೆ ಕಾಯ್ದೆಯಡಿ ಕ್ರಮ ಕೈಗೊಳ್ಳುವುದಾಗಿ ಅದು ಎಚ್ಚರಿಸಿದೆ. ಹಾಗೆಯೇ ಸರ್ಕಾರಿ ಆದೇಶದ ಪ್ರಕಾರ ತಮ್ಮ ನಿರ್ಧಾರ ತೆಗೆದುಕೊಳ್ಳಲಾಗಿದೆ ಮತ್ತು ಹೊಸ ನಿರ್ಧಾರವೇನಲ್ಲ ಎಂದು ಪುರಸಭೆ ಆಯುಕ್ತ ಅಭಿನವ್ ಗೋಯಲ್ ಸಮರ್ಥಿಸಿಕೊಂಡಿದ್ದಾರೆ.

ಈ ನಡುವೆ ಶುಕ್ರವಾರ ಮುಂಜಾನೆಯಿಂದಲೇ ಕಲ್ಯಾಣ್‌ನ ಶಿವಾಜಿ ಚೌಕ್ ಮತ್ತು ಶಂಕರರಾವ್ ಚೌಕ್ ನಡುವೆ ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಉಪ ಆಯುಕ್ತ ಅತುಲ್ ಝೆಂಡೆ ಹೇಳಿದರು. ಇನ್ನು ಮಾಂಸ ನಿಷೇಧ ವಿರೋಧಿಸಿ ಪ್ರತಿಭಟನೆ ಪ್ರಾರಂಭವಾಗುವ ಮುನ್ನವೇ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಹಲವಾರು ಪ್ರತಿಭಟನಾಕಾರರನ್ನು ಬಂಧಿಸಿದರು.

ಪ್ರತಿಭಟನೆಯಲ್ಲಿ ಭಾಗಿಯಾಗಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಥಾಣೆ ಜಿಲ್ಲಾಧ್ಯಕ್ಷ ಸಚಿನ್ ಪೋಟೆ, “ಹುಂಜ ಬೆಳಿಗ್ಗೆ ಜನರನ್ನು ಎಬ್ಬಿಸುತ್ತದೆ. ಇಂದು, ಆಡಳಿತವನ್ನು ಎಬ್ಬಿಸಲು ನಾವು ಕೋಳಿಗಳನ್ನು ತಂದಿದ್ದೇವೆ” ಎಂದು ಹೇಳಿದರು.

ಇನ್ನು ಮಹಾರಾಷ್ಟ್ರದಲ್ಲಿ, ನಾಗ್ಪುರ, ನಾಸಿಕ್, ಮಾಲೆಗಾಂವ್ ಮತ್ತು ಛತ್ರಪತಿ ಸಂಭಾಜಿನಗರ ಪುರಸಭೆಗಳು ಸಹ ಇದೇ ರೀತಿಯ ಆದೇಶಗಳನ್ನು ಹೊರಡಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಸ್ವಾತಂತ್ರ್ಯ ಆಚರಣೆ ದಿನವೇ ವೈಯಕ್ತಿಕ ಸ್ವಾತಂತ್ರ್ಯದ ಎಷ್ಟಿದೆ ಎಂಬ ಪ್ರಶ್ನೆಯನ್ನು ಎತ್ತಿದೆ.

ವಿರೋಧ ಪಕ್ಷಗಳು ಸಹ ಈ ಕ್ರಮವನ್ನು ಟೀಕಿಸಿವೆ. ಆದರೆ ಸ್ವಾತಂತ್ರ್ಯ ದಿನದಂದು ಕಸಾಯಿಖಾನೆಗಳನ್ನು ಮುಚ್ಚುವ ನೀತಿಯನ್ನು ಮೊದಲು 1988 ಲ್ಲಿ ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷ ಶರದ್ ಪವಾರ್ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತರಲಾಗಿದೆ ಎಂದು ಬಿಜೆಪಿ ವಾದಿಸಿದೆ. “ಜನರ ಆಹಾರ ಆಯ್ಕೆಗಳನ್ನು ನಿಯಂತ್ರಿಸುವ ಆಸಕ್ತಿಯನ್ನು ಸರ್ಕಾರ ಹೊಂದಿಲ್ಲ. ಕಸಾಯಿಖಾನೆ ಮುಚ್ಚುವ ವಿವಾದವು ಅನಗತ್ಯ” ಎಂದು ಮುಖ್ಯಮಂತ್ರಿ ಫಡ್ನವೀಸ್ ಪ್ರತಿಪಾದಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X