ಮೋದಿ ವಿರುದ್ಧ ಪ್ರಚೋದನಕಾರಿ ಹೇಳಿಕೆ; ಸಚಿವ ಶಿವರಾಜ ತಂಗಡಗಿ ವಿರುದ್ಧ ದೂರು ದಾಖಲು

Date:

“ಈಗಲೂ ಯುವಕರು ಮತ್ತು ವಿದ್ಯಾರ್ಥಿಗಳು ಮೋದಿ.. ಮೋದಿ.. ಎಂದರೆ ಕಪಾಳಕ್ಕೆ ಹೊಡೆಯಬೇಕು” ಎಂದು ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು ದಾಖಲಾಗಿದೆ.

- Advertisement -

ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಕೊಪ್ಪಳ ಕ್ಷೇತ್ರದ ತಮ್ಮ ಪಕ್ಷದ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ಪರ ಪ್ರಚಾರ ಮಾಡುವ ಸಮಯದಲ್ಲಿ ಮೋದಿ ವಿರುದ್ಧ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

“ಶಿವರಾಜ ತಂಗಡಗಿ ತಮ್ಮ ಭಾಷಣದಲ್ಲಿ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು” ಎಂದು ಕಾರಟಗಿಯಲ್ಲಿ ಚುನಾವಣಾಧಿಕಾರಿಯಾಗಿ ಕೆಲಸ ಮಾಡುತ್ತಿರುವ ಗಂಗಾವತಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಗ್ಯಾನನಗೌಡ ನಂದನಗೌಡ ನೀಡಿದ ದೂರು ಮೇಲೆ ಪ್ರಕರಣ ದಾಖಲಾಗಿದೆ.

ಶಿವರಾಜ ತಂಗಡಗಿ ಹೇಳಿದ್ದೇನು?

ಭಾನುವಾರ (ಮಾ. 24) ಕಾರಟಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ತಂಗಡಗಿ ಮಾತನಾಡುತ್ತ, “ಯುವಕರಿಗೆ ಎರಡು ಕೋಟಿ ಉದ್ಯೋಗ ಕೊಡುವುದಾಗಿ ಹೇಳಿ ಪ್ರಧಾನಿ ನರೇಂದ್ರ ಮೋದಿ ಮಾತು ತಪ್ಪಿದ್ದಾರೆ. ಉದ್ಯೋಗ ಕೊಡಿ ಎಂದು ಕೇಳಿದರೆ ಪಕೋಡಾ ಮಾರಲು ಹೋಗಿ ಎಂದಿದ್ದಾರೆ. ಈಗಲೂ ಯುವಕರು ಹಾಗೂ ವಿದ್ಯಾರ್ಥಿಗಳು ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡೆಯಬೇಕು” ಎಂದು ಆಕ್ರೋಶ ಹೊರಹಾಕಿದ್ದರು.

ಬಿಜೆಪಿ ಪ್ರತಿಭಟನೆ

ತಂಗಡಗಿ ಹೇಳಿಕೆ ಬಿಜೆಪಿಗರ ಆಕ್ರೋಶಕ್ಕೆ ಕಾರಣವಾಗಿದೆ. ಹೇಳಿಕೆ ಖಂಡಿಸಿ ಪಕ್ಷದ ಕಾರ್ಯಕರ್ತರು ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಮಂಗಳವಾರ ಕಾರಟಗಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಕ್ಷೇತ್ರದ ಮಾಜಿ ಶಾಸಕ ಬಸವರಾಜ ದಢೇಸೂಗೂರು ಕಚೇರಿಯಿಂದ ಆರಂಭವಾಗಲಿರುವ ಪ್ರತಿಭಟನಾ ಮೆರವಣಿಗೆ ಕನಕದಾಸ ವೃತ್ತದ ತನಕ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...