ಮುಸ್ಲಿಮರದ್ದು ಎಂದು ಭಾವಿಸಿ ಹಿಂದೂ ವ್ಯಕ್ತಿಯ ಬೇಕರಿಯನ್ನು ಸುಟ್ಟ ದುರುಳರು: ಕೋಮುದ್ವೇಷದ ವಿರುದ್ಧ ಆಕ್ರೋಶ

Date:

ಮುಸ್ಲಿಮರದ್ದು ಎಂದು ಭಾವಿಸಿ ಹಿಂದೂ ವ್ಯಕ್ತಿಯ ಬೇಕರಿಯನ್ನು ದುರುಳರ ಗುಂಪೊಂದು ಸುಟ್ಟು ಹಾಕಿದ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಯಾವತ್ ಗ್ರಾಮದಲ್ಲಿ ನಡೆದಿದೆ. ಸದ್ಯ ಬೇಕರಿ ಮಾಲೀಕ ಸ್ವಪ್ನಿಲ್ ಆದಿನಾಥ್ ಕದಮ್ ಮಾಧ್ಯಮಕ್ಕೆ ನೀಡಿರುವ ಹೇಳಿಕೆಯು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಕೋಮುದ್ವೇಷ, ಇಸ್ಲಾಮೋಫೋಬಿಯಾದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

- Advertisement -

ಮುಸ್ಲಿಂ ಯುವಕನೊಬ್ಬ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾನೆ ಮತ್ತು ಛತ್ರಪತಿ ಶಿವಾಜಿ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ ಎಂಬ ಸುದ್ದಿಗಳು ಹರಡುತ್ತಿರುವಂತೆ ಈ ಘಟನೆ ನಡೆದಿದೆ. ಶಿವಾಜಿ ಪ್ರತಿಮೆ ಧ್ವಂಸ ವಿರುದ್ಧ ಹಿಂಸಾತ್ಮಕ ಮೆರವಣಿಗೆ ನಡೆದಿದ್ದು, ಈ ವೇಳೆ ಬೇಕರಿ ಮುಸ್ಲಿಮರ ಒಡೆತನದಲ್ಲಿದೆ ಎಂದು ಭಾವಿಸಿ ಹಿಂದೂ ವ್ಯಕ್ತಿಯ ಬೇಕರಿಯನ್ನು ಸುಟ್ಟುಹಾಕಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಇದನ್ನು ಓದಿದ್ದೀರಾ? ಮುಸ್ಲಿಮರು ವಾಚ್ ಕದ್ದರೆಂದು ಕೋಮುದ್ವೇಷದ ಸುಳ್ಳು ಕಥೆ ಹೆಣೆದ ವೈದ್ಯ; ಸಿಐಎಸ್‌ಎಫ್‌ ತನಿಖೆಯಲ್ಲಿ ಬಟಾಬಯಲು

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಬೇಕರಿ ಮಾಲೀಕ ಸ್ವಪ್ನಿಲ್, “ನನ್ನ ಕೆಲವು ಕೆಲಸಗಾರರು ಮುಸ್ಲಿಮರು. ಅವರು ಉತ್ತರ ಪ್ರದೇಶ ಮೂಲದವರು. ಯಾವುದೋ ಮುಸ್ಲಿಂ ವ್ಯಕ್ತಿಯೋರ್ವ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಒಂದನ್ನು ಮಾಡಿದ್ದ ಎನ್ನಲಾಗಿದೆ. ಇಲ್ಲಿ 150-200 ದೂರದಲ್ಲಿ ಮಸೀದಿಯಿದೆ. ಗುಂಪು ಮಸೀದಿಯೆಡೆ ಹೋಗುತ್ತಿತ್ತು. ಈ ವೇಳೆ ಯಾರೋ ನನ್ನ ಬೇಕರಿಯನ್ನು ಮುಸ್ಲಿಮರದ್ದು ಎಂದು ಹೇಳಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

“ನಮ್ಮ ಬೇಕರಿಯನ್ನು ಮುಸ್ಲಿಮರದ್ದು ಎಂದು ತಪ್ಪಾಗಿ ಭಾವಿಸಿ ಗುಂಪು ಬೇಕರಿ ಮೇಲೆ ಕಲ್ಲು ತೂರಾಟ ನಡೆಸಿದೆ. ಬೇಕರಿಯನ್ನು ಸಂಪೂರ್ಣವಾಗಿ ಸುಟ್ಟು ಹಾಕಿದೆ. ಸಾಮಾಜಿಕ ಮಾಧ್ಯಮದಲ್ಲಿ ಮಾಡಲಾಗಿದೆ ಎನ್ನಲಾದ ಪೋಸ್ಟ್‌ಗೂ ನಮ್ಮ ಕೆಲಸಗಾರರಿಗೂ ಯಾವುದೇ ಸಂಬಂಧವಿಲ್ಲ” ಎಂದೂ ಸ್ವಪ್ನಿಲ್ ತಿಳಿಸಿದ್ದಾರೆ.

ಸದ್ಯ ಈ ಘಟನೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದೇಶದಲ್ಲಿ ಮುಸ್ಲಿಮರ ಮೇಲೆ ಹೆಚ್ಚುತ್ತಿರುವ ಹಗೆತನದ ಮತ್ತೊಂದು ಆತಂಕಕಾರಿ ಸಂಕೇತ. ಇಂತಹ ಕೃತ್ಯಗಳಿಂದಾಗಿ ಈಗಾಗಲೇ ಮುಸ್ಲಿಮರು ಮತ್ತು ಮುಸ್ಲಿಮೇತರರು ತಮ್ಮ ವ್ಯಾಪಾರವನ್ನೇ ಕಳೆದುಕೊಳ್ಳುವ ಆತಂಕದಲ್ಲೇ ಬದುಕುತ್ತಿದ್ದಾರೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ, “ದೇಶವನ್ನು ಈ ಹಂತಕ್ಕೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ತಂದು ನಿಲ್ಲಿಸಿದೆ” ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಕೇಸರಿ ಭಯೋತ್ಪಾದನೆ ಎಂದೂ ದೂರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಸ್ತುವನ್ನು ಸುಡುವುದರಿಂದಷ್ಟೇ ‘ಚರಸ್’ ಎಂದು ಸಾಬೀತುಪಡಿಸಲಾಗದು: 22 ವರ್ಷಗಳ ಬಳಿಕ ಇಬ್ಬರು ಖುಲಾಸೆ

ವಶಪಡಿಸಿಕೊಂಡ ವಸ್ತುವಿನ ಒಂದು ಸಣ್ಣ ಭಾಗವನ್ನು ಸುಟ್ಟು ನೋಡುವುದರಿಂದ ಮಾತ್ರವೇ ಅದು...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು ಕಾವಲುಗಾರನ ಕಥನ

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ...

DSS ಕುರಿತು ಅವಹೇಳನ: ಪ್ರತಾಪ ಸಿಂಹಗೆ ಅಂಬೇಡ್ಕರ್ ವಿಚಾರಗಳ ಬಗ್ಗೆ ಪಾಠ!

ಟೀಕಾಕಾರರಿಂದ ರಾಜಕೀಯ ನಿರುದ್ಯೋಗಿ ಎಂದೇ ಕರೆಸಿಕೊಳ್ಳುವ ಮೈಸೂರಿನ ಮಾಜಿ ಸಂಸದ ಪ್ರತಾಪ...

ವಲಸೆ ತಡೆಗೆ ‘ರುದ್ರಾಕ್ಷಿ ಕೃಷಿ’ ಯೋಜನೆಗೆ ಮುಂದಾದ ಉತ್ತರಾಖಂಡ ಸರ್ಕಾರ; 1.5 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯವೇ?

ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಿಂದ ಜನರು ನೌಕರಿ ಮತ್ತು ಜೀವನೋಪಾಯ ಅರಸಿ ನಗರಗಳಿಗೆ...