ಕಂಗನಾ ರನೌತ್‌ಗೆ ಕಪಾಳಮೋಕ್ಷಗೈದ CISF ಸಿಬ್ಬಂದಿಗೆ 1 ಲಕ್ಷ ಬಹುಮಾನ ಘೋಷಿಸಿದ ಉದ್ಯಮಿ!

Date:

Advertisements

ಬಾಲಿವುಡ್‌ ನಟಿ, ಬಿಜೆಪಿಯ ನೂತನ ಸಂಸದೆ ಕಂಗನಾ ರನೌತ್‌ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್‌ ಸಿಬ್ಬಂದಿಯೊಬ್ಬರು ಕಪಾಳ ಮೋಕ್ಷ ಮಾಡಿರುವ ಘಟನೆ ವರದಿಯಾಗಿತ್ತು.

ಈ ಘಟನೆ ಬಗ್ಗೆ ಕಂಗನಾ ರನೌತ್‌ ಅವರು ಕೂಡ ವಿಡಿಯೋ ಮೂಲಕ ನೇರ ಆರೋಪ ಮಾಡಿದ್ದರು. ಕಪಾಳಮೋಕ್ಷಗೈದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಐಎಸ್‌ಎಫ್‌ ಸಿಬ್ಬಂದಿ ಕುಲ್ವಿಂದರ್‌ ಕೌರ್‌ ಅವರನ್ನು ಅಮಾನತು ಮಾಡಲಾಗಿದ್ದು, ಇಲಾಖಾ ತನಿಖೆಗೆ ನಿರ್ದೇಶನ ನೀಡಲಾಗಿದೆ. ಈಗ ಈ ಘಟನೆಗೆ ಸಂಬಂಧಿಸಿದಂತೆ ಹಲವು ಬೆಳವಣಿಗೆಗಳು ನಡೆಯುತ್ತಿದೆ.

ಕಂಗನಾ ರನೌತ್‌ ಅವರಿಗೆ ಕಪಾಳಮೋಕ್ಷಗೈದಿರುವ ಸಿಐಎಸ್‌ಎಫ್‌ನ ಮಹಿಳಾ ಸಿಬ್ಬಂದಿ ಕುಲ್ವಿಂದರ್‌ ಕೌರ್‌ ಅವರಿಗೆ ಪಂಜಾಬ್‌ನ ಉದ್ಯಮಿಯೊಬ್ಬರು ಒಂದು ಲಕ್ಷ ಬಹುಮಾನ ಘೋಷಿಸಿದ್ದಾರೆ. ಅಲ್ಲದೇ, ಈ ಬಗ್ಗೆ ವಿಡಿಯೋವೊಂದನ್ನು ಕೂಡ ಬಿಡುಗಡೆಗೊಳಿಸಿದ್ದಾರೆ.

Advertisements

“ಚಂಡೀಗಢ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಸಂಸದೆ, ನಟಿ ಕಂಗನಾ ರನೌತ್‌ಗೆ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಕುಲ್ವಿಂದರ್ ಕೌರ್‌ಗೆ ಜಿರಾಕ್‌ಪುರ (ಮೊಹಾಲಿ) ಮೂಲದ ಉದ್ಯಮಿ ಶಿವರಾಜ್ ಸಿಂಗ್ ಬೈನ್ಸ್ ಒಂದು ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ” ಎಂದು ಉದ್ಯಮಿ ಬಿಡುಗಡೆಗೊಳಿಸಿರುವ ವಿಡಿಯೋವನ್ನು ಹಂಚಿಕೊಳ್ಳುತ್ತಾ ಪತ್ರಕರ್ತ ಗಗನ್ ದೀಪ್ ಸಿಂಗ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಈ ವಿಡಿಯೋದಲ್ಲಿ ಉದ್ಯಮಿ ಶಿವರಾಜ್ ಸಿಂಗ್ ಬೈನ್ಸ್ ಅವರು, ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಕುಲ್ವಿಂದರ್ ಕೌರ್‌ ಅವರು ಕಂಗನಾ ರನೌತ್‌ಗೆ ಕಪಾಳಮೋಕ್ಷ ಮಾಡಿರುವುದರಿಂದ ಮನಸ್ಸಿಗೆ ತುಂಬಾ ಖುಷಿಯಾಗಿದೆ. ಯಾಕೆಂದರೆ ಪಂಜಾಬ್‌ನವರನ್ನು ಅವಮಾನಿಸಿದ್ದಕ್ಕೆ ಸರಿಯಾದ ಬುದ್ಧಿ ಕಲಿಸಿದ್ದಾರೆ. ಪಂಜಾಬ್‌ನವರ ಪರವಾಗಿ ನಾನು ಆಕೆಗೆ ಒಂದು ಲಕ್ಷ ರೂಪಾಯಿಯನ್ನು ಬಹುಮಾನವಾಗಿ ನೀಡುತ್ತೇನೆ” ಎಂದಿದ್ದಾರೆ.

ಈ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಪಂಜಾಬ್‌ನ ರೈತ ಮುಖಂಡ ಹಾಗೂ ಸಿಐಎಸ್ಎಫ್ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರ ಸಹೋದರ ಶೇರ್ ಸಿಂಗ್ ಮಹಿವಾಲ್, “ನಮಗೆ ಸಿಕ್ಕಿರುವ ಮಾಹಿತಿಯ ಪ್ರಕಾರ, ಕಂಗನಾ ರನೌತ್‌ ಅವರು ತಪಾಸಣೆಯ ಸಂದರ್ಭದಲ್ಲಿ ಸಹೋದರಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಈ ಬೆಳವಣಿಗೆ ನಡೆದಿದೆ. ನನ್ನ ಸಹೋದರಿ ಏನು ಮಾಡಿದ್ದರೂ ಕೂಡ ಸರಿಯಾಗಿದೆ. ನಾನು ಅವಳ ಪರವಾಗಿ ನಿಲ್ಲುತ್ತೇನೆ” ಎಂದು ಹೇಳಿದ್ದಾರೆ.

ಏನಿದು ಘಟನೆ?

ಬಾಲಿವುಡ್‌ ನಟಿ ಕಂಗನಾ ರನೌತ್‌ ಇತ್ತೀಚಿಗಷ್ಟೆ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು. ಚಂಡೀಗಢದಿಂದ ದೆಹಲಿಗೆ ಯುಕೆ707 ವಿಮಾನದಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಸಿಐಎಸ್‌ಎಫ್‌ ಸಿಬ್ಬಂದಿ ಕುಲ್ವಿಂದರ್‌ ಕೌರ್‌ ಕಪಾಳ ಮೋಕ್ಷ ಮಾಡಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ.

ಈ ಹಿಂದೆ ರೈತರ ಪ್ರತಿಭಟನೆಯ ಬಗ್ಗೆ ನೀಡಿದ್ದ ಹೇಳಿಕೆಯ ಬಗ್ಗೆ ಸಿಐಎಸ್‌ಎಫ್ ಸಿಬ್ಬಂದಿ ಆಕೆಯನ್ನು ಕಂಡಾಗ ಪ್ರಶ್ನಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದಿದ್ದರಿಂದ ಆಕ್ರೋಶಗೊಂಡ ಚಂಡೀಗಢ ಏರ್‌ಪೋರ್ಟಿನ ಸಿಐಎಸ್‌ಎಫ್‌ ಸಿಬ್ಬಂದಿ ಕುಲ್ವಿಂದರ್‌ ಕೌರ್‌ ಕಪಾಳಮೋಕ್ಷ ಮಾಡಿದ್ದಾರೆ ಎಂದು ವರದಿಯಾಗಿದೆ.

ಆನಂತರ ಅವರು, “ನಾನು ಏಕೆ ಕಂಗಾನ ಮುಖಕ್ಕೆ ಬಾರಿಸಿದ್ದು ಅಂದರೆ, ಅಂದು ರೈತರ ಆಂದೋಲನದ ಸಂದರ್ಭದಲ್ಲಿ ಆಂದೋಲನದಲ್ಲಿ ಭಾಗವಹಿಸಿದ ರೈತರ ಕುರಿತು 100 ರೂಪಾಯಿ ಆಸೆಗಾಗಿ ಬಂದವರು ಎಂದು ಈಕೆ ಹೇಳಿಕೆ ನೀಡಿದ್ದಳು. ಅಂದು ನನ್ನ ತಾಯಿಯೂ ಆಂದೋಲನದಲ್ಲಿ ಭಾಗವಹಿಸಿದ್ದರು. ಹಾಗಾಗಿ ಬಾರಿಸಿದೆ” ಎಂದಿದ್ದಾರೆ.

ಕಪಾಳಮೋಕ್ಷಗೈದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಐಎಸ್‌ಎಫ್‌ ಸಿಬ್ಬಂದಿ ಕುಲ್ವಿಂದರ್‌ ಕೌರ್‌ ಅವರನ್ನು ಅಮಾನತು ಮಾಡಲಾಗಿದ್ದು, ಇಲಾಖಾ ತನಿಖೆಗೆ ನಿರ್ದೇಶನ ನೀಡಲಾಗಿದೆ ಎಂದು ವರದಿಯಾಗಿದೆ.

kangana and cisf

ಘಟನೆಯ ನಂತರ ಸಾಮಾಜಿಕ ಮಾಧ್ಯಮದಲ್ಲಿ ಮಾತನಾಡಿರುವ ಕಂಗನಾ ರನೌತ್, “ನಾನು ಸುರಕ್ಷಿತವಾಗಿದ್ದೇನೆ. ಚಂಡೀಗಢ ವಿಮಾನ ನಿಲ್ದಾಣದಲ್ಲಿ ಇಂದು ಭದ್ರತಾ ಪರಿಶೀಲನೆಯ ವೇಳೆ ಈ ಘಟನೆ ನಡೆದಿದೆ. ಭದ್ರತಾ ಪರಿಶೀಲನೆಯ ನಂತರ ನಾನು ವಾಪಸ್‌ ಬರುತ್ತಿದ್ದಾಗ ದ್ವಿತೀಯ ಕ್ಯಾಬಿನ್‌ನಲ್ಲಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯಾಗಿದ್ದ ಮಹಿಳೆಯೊಬ್ಬರು ನನ್ನ ಕೆನ್ನೆ ಬಾರಿಸಿ ನಿಂದಿಸುವುದಕ್ಕೆ ಶುರು ಮಾಡಿದರು. ನಾನು ಏಕೆ ಈ ರೀತಿ ಮಾಡಿದೆ ಎಂದು ಕೇಳಿದಾಗ ನಾನು ರೈತರ ಪ್ರತಿಭನೆಯನ್ನು ಬೆಂಬಲಿಸಿ ಈ ರೀತಿ ಮಾಡಿರುವುದಾಗಿ ಹೇಳಿದರು. ನಾನು ಸುರಕ್ಷಿತವಾಗಿದ್ದು, ಪಂಜಾಬ್‌ನಲ್ಲಿ ಉಗ್ರಗಾಮಿಗಳು ಹಾಗೂ ವಿಧ್ವಂಸಕ ಕೃತ್ಯವೆಸಗುವವರು ಹೆಚ್ಚುತ್ತಿರುವ ಬಗ್ಗೆ ನಾನು ಕಳವಳಗೊಂಡಿದ್ದೇನೆ” ಎಂದು ತಿಳಿಸಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X