ಗಾಝಾದ ಅಮಾಯಕರ ಮೇಲೆ ಬಾಂಬ್ ಸುರಿದರೆ ಒತ್ತೆಯಾಳುಗಳ ಹತ್ಯೆ: ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಹಮಾಸ್

Date:

Advertisements

ಗಾಝಾದಲ್ಲಿ ಇಸ್ರೇಲ್ ನಿರಂತರ ಬಾಂಬ್ ಸುರಿಯುತ್ತಿದ್ದು, ಅಮಾಯಕ ನಾಗರಿಕರು ಸಾವನ್ನಪ್ಪುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಸ್ರೇಲ್‌ಗೆ ಕೊನೆಯ ಎಚ್ಚರಿಕೆ ನೀಡಿರುವ ‘ಹಮಾಸ್’, ಗಾಝಾದ ಅಮಾಯಕರ ಮೇಲೆ ಬಾಂಬ್ ಸುರಿದರೆ ಇಸ್ರೇಲಿ ಒತ್ತೆಯಾಳುಗಳನ್ನು ಗಲ್ಲಿಗೇರಿಸಿ ಹತ್ಯೆ ಮಾಡುವುದಾಗಿ ಎಚ್ಚರಿಕೆ ನೀಡಿದೆ.

ಈ ಬಗ್ಗೆ ಹಮಾಸ್‌ನ ಕಸ್ಸಾಮ್ ಬ್ರಿಗೇಡ್‌ನ ವಕ್ತಾರ ಅಬೂ ಒಬೈದಾ ಆಡಿಯೋ ಬಿಡುಗಡೆಗೊಳಿಸಿರುವುದಾಗಿ ‘ಅಲ್-ಜಝೀರಾ’ ವರದಿ ಮಾಡಿದೆ.

ಇಸ್ರೇಲ್ ಗಾಝಾದ ಮೇಲೆ ಬಾಂಬ್ ದಾಳಿ ಮುಂದುವರಿಸಿ, ನಾಗರಿಕರನ್ನು ಕೊಲ್ಲುವುದನ್ನು ಮುಂದುವರಿಸಿದರೆ ವಶದಲ್ಲಿರುವ ಇಸ್ರೇಲಿ ಬಂಧಿತರನ್ನು ಗಲ್ಲಿಗೇರಿಸುವುದಾಗಿ ಹಮಾಸ್‌ನ ಕಸ್ಸಾಮ್ ಬ್ರಿಗೇಡ್‌ ಎಚ್ಚರಿಕೆ ನೀಡಿದೆ.

Advertisements

“ಇದು ನಮ್ಮ ಪ್ರಮುಖ ಘೋಷಣೆ. ನಿಮ್ಮ ಒಂದೊಂದು ಬಾಂಬ್‌ಗಳು ಗಾಝಾದ ಮೇಲೆ ಬಿದ್ದರೆ, ನಮ್ಮ ವಶದಲ್ಲಿರುವ ಇಸ್ರೇಲಿ ಬಂಧಿತರನ್ನು ಒಬ್ಬೊಬ್ಬರನ್ನಾಗಿ ಗಲ್ಲಿಗೆ ಏರಿಸುತ್ತೇವೆ. ನೀವು ಅಮಾಯಕರ ಮೇಲೆ ಬಾಂಬ್ ಹಾಕುವುದನ್ನು ನಿಲ್ಲಿಸದೇ ಇದ್ದಲ್ಲಿ ನಾವು ಅದನ್ನು ಮಾಡಬೇಕಾದ ಅನಿವಾರ್ಯತೆ ನೀವು ಸೃಷ್ಟಿ ಮಾಡಬೇಡಿ” ಎಂದು ಹಮಾಸ್‌ನ ಕಸ್ಸಾಮ್ ಬ್ರಿಗೇಡ್‌ಗಳ ವಕ್ತಾರ ಅಬೂ ಒಬೈದಾ ಹೇಳಿರುವುದಾಗಿ ವರದಿ ಮಾಡಿದೆ.

“ನಾವು ಈ ಬಲವಂತದ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಮಾಡಬೇಡಿ. ನಿಮ್ಮ ಬಾಂಬ್‌ ಬಿದ್ದಂತೆ ನಾವು ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ. ಅದರ ವಿಡಿಯೋವನ್ನು ಕೂಡ ಪ್ರಸಾರ ಮಾಡಬೇಕಾದ ಅನಿವಾರ್ಯತೆ ಸೃಷ್ಟಿ ಮಾಡಬೇಡಿ. ಇದು ನಿಮಗೆ ಕೊನೆಯ ಎಚ್ಚರಿಕೆ. ನಾವು ಆ ರೀತಿ ಮಾಡಿದರೆ ಅದಕ್ಕೆ ಇಸ್ರೇಲಿ ನಾಯಕರೇ ಜವಾಬ್ದಾರಿಯಾಗುತ್ತಾರೆ” ಎಂದು ಹಮಾಸ್ ತಿಳಿಸಿರುವುದಾಗಿ ಜಝೀರಾ ವರದಿ ಮಾಡಿದೆ.

100ಕ್ಕೂ ಹೆಚ್ಚು ಜನರನ್ನು ಹಮಾಸ್ ತನ್ನ ವಶದಲ್ಲಿಟ್ಟುಕೊಂಡಿದ್ದು, ಅವರೆಲ್ಲರನ್ನೂ ಗಾಝಾದ ಯಾವುದೋ ಪ್ರದೇಶಕ್ಕೆ ಕರೆದೊಯ್ದಿರುವುದಾಗಿ ಎಂದು ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಎಂದು ಇಸ್ರೇಲ್‌ನ ವಿದೇಶಾಂಗ ಸಚಿವ ಎಲಿ ಕೊಹೆನ್ ಹೇಳಿದ್ದಾರೆ.

ಹಮಾಸ್ ದಾಳಿಯಲ್ಲಿ 700ಕ್ಕೂ ಹೆಚ್ಚು ಇಸ್ರೇಲಿ ನಾಗರಿಕರು ಸಾವನ್ನಪ್ಪಿದ್ದರೆ, ಇಸ್ರೇಲ್‌ ಗಾಝಾದ ಮೇಲೆ ನಿರಂತರ ಬಾಂಬ್ ದಾಳಿ ನಡೆಸುತ್ತಿರವುದರಿಂದ 500ಕ್ಕೂ ಅಧಿಕ ಪ್ಯಾಲೆಸ್ತೀನಿಯರು ಮೃತಪಟ್ಟಿರುವುದಾಗಿ ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X