ಪೊಲೀಸ್‌ ಅಧಿಕಾರಿಗೆ ಅ**ನ್ ಎಂದು ಅಶ್ಲೀಲವಾಗಿ ನಿಂದಿಸಿದ ಆರ್ ಅಶೋಕ್

Date:

Advertisements

ಅನುಮತಿ ಇಲ್ಲದೆ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿಗರನ್ನು ಪ್ರಶ್ನಿಸಿದ ಪೊಲೀಸ್‌ ಅಧಿಕಾರಿಗೆ ವಿಧಾನಸಭೆ ವಿಪಕ್ಷ ನಾಯಕ ಆರ್‌ ಅಶೋಕ್‌ ಅಶ್ಲೀಲವಾಗಿ ನಿಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಾರಿಗೆ ಬಸ್‌ ಟಿಕೆಟ್‌ ಬೆಲೆ ಏರಿಕೆ ವಿರುದ್ಧ ಬೆಂಗಳೂರಿನ ಮೆಜೆಸ್ಟಿಕ್‌ ಬಸ್‌ ನಿಲ್ದಾಣನಲ್ಲಿ ವಿಪಕ್ಷ ನಾಯಕ ಆರ್‌ ಅಶೋಕ್ ಸೇರಿದಂತೆ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದರು. ಅನುಮತಿ ಪಡೆಯದೆ ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ನಡೆಸುವುದು ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಪ್ರತಿಭಟನೆಯನ್ನು ನಿಲ್ಲಿಸಬೇಕೆಂದು ಪೊಲೀಸರು ಸೂಚಿಸಿದ್ದಾರೆ.

ಇದೇ ವಿಚಾರಕ್ಕೆ, ಪೊಲೀಸರೊಂದಿಗೆ ಆರ್‌ ಅಶೋಕ್ ಮತ್ತು ಬಿಜೆಪಿಗರು ವಾಗ್ದಾದ ನಡೆಸಿದ್ದಾರೆ. ಈ ವೇಳೆ, ಅಶೋಕ್ ಅವರ ಕೈಹಿಡಿದು ಕರೆದೊಯ್ಯಲು ಮುಂದಾದ ಪೊಲೀಸ್‌ ಅಧಿಕಾರಿಗೆ ಅಶೋಕ್‌ ಅಶ್ಲೀಲ ಮತ್ತು ಅವಾಚ್ಯವಾಗಿ ನಿಂದಿಸಿದ್ದಾರೆ. ಘಟನೆಯ ವಿಡಿಯೋ ವೈರಲ್ ಆಗಿದೆ.

Advertisements

ವಿಡಿಯೋದಲ್ಲಿ, “ನಾನು ಅಪೊಸಿಷನ್ ಲೀಡ್ರು (ವಿಪಕ್ಷ ನಾಯಕ). ನನ್ನ ಮೈಮುಟ್ಟಿದ್ರೆ ಉಷಾರ್. ಚಪ್ಪಲಿಲಿ ಹೊಡಿತೀನಿ ನಿನ್ ಅ**ನ್” ಎಂದು ಆರ್‌ ಅಶೋಕ್‌ ನಿಂದಿಸಿದ್ದಾರೆ.

ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್‌, “ಅಶೋಕ್‌ ಅವರೇ ವಿಪಕ್ಷ ನಾಯಕರಾಗಿಬಿಟ್ಟರೆ ಕರ್ತವ್ಯದಲ್ಲಿರುವ ಪೋಲೀಸ್ ಅಧಿಕಾರಿಗೆ ಅವಾಚ್ಯವಾಗಿ ನಿಂದಿಸಬಹುದೇ? ನಿನ್ನ ಅ**ನ್ ಅನ್ನೋದು ಎಷ್ಟು ಸರಿ? ಗೂಂಡಾಗಿರಿ ವಿಪಕ್ಷ ನಾಯಕನ ಕೆಲಸವೇ? ನಾಲಿಗೆ ಸಂಸ್ಕಾರ ಹೇಳುತ್ತದೆ. ಸಿ.ಟಿ ರವಿ ನಂತರ ಈಗ ನಿಮ್ಮ ಸರದಿಯೇ? ನೀವು ವಿರೋಧ ಪಕ್ಷದ ನಾಯಕನಾಗಿ ಉಳಿಯಲು ಅರ್ಹರಲ್ಲ ಎಂಬುದನ್ನು ನಿಮ್ಮ ನಡತೆ ಹೇಳುತ್ತಿದೆ. ಸಂಸ್ಕೃತಿ, ಸಂಸ್ಕಾರದ ಬಗ್ಗೆ ಮಾರುದ್ದದ ಭಾಷಣ ಬಿಗಿಯುವ ನಿಮ್ಮ ನಾಯಕರ ಹೊಲಸು ನಾಲಿಗೆಯನ್ನು ಯಾವ ಫೆನಾಯಿಲ್‌ನಿಂದ ತೊಳೆಯಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X