ಮುನಿರತ್ನ ಅಪರಾಧಗಳಿಗೆ ಆರ್ ಅಶೋಕ್, ಕುಮಾರಸ್ವಾಮಿ ಕುಮ್ಮಕ್ಕು: ಕೃಷ್ಣ ಬೈರೇಗೌಡ ಆರೋಪ

Date:

Advertisements

ಶಾಸಕ ಮುನಿರತ್ನ ಅವರ ದುಷ್ಕೃತ್ಯವನ್ನು ಖಂಡಿಸದೆ ಆರ್. ಅಶೋಕ್, ಎಚ್‌ ಡಿ ಕುಮಾರಸ್ವಾಮಿ ಸುಮ್ಮನೆ ಇದ್ದಾರೆ. ಇವರ ಕುಮ್ಮಕ್ಕು ಇಲ್ಲದೆ ಇಷ್ಟೆಲ್ಲ ನಡೆಯುತ್ತದೆಯೇ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದರು.

ಚಿಕ್ಕಬಳ್ಳಾಪುರ ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುನಿರತ್ನ ಮಾಡಿದ್ದು ತಪ್ಪು ಎಂದು ಇವರು ಎಲ್ಲಿಯೂ ಮಾತನಾಡಿಲ್ಲ. ಮುನಿರತ್ನ ಭ್ರಷ್ಟಾಚಾರಿ, ಮನೆಯಲ್ಲಿಯೇ ಬಿಬಿಎಂಪಿ ಬಿಲ್ ಬರೆಯುತ್ತಾರೆ ಎನ್ನುವುದು ಎಲ್ಲರಿಗೂ ಗೊತ್ತಿತ್ತು. ಆದರೆ ಈಗ ಹನಿಟ್ರ್ಯಾಪ್ ನಡೆಸುತ್ತಾರೆ ಎನ್ನುವ ಆಘಾತಕಾರಿ ಅಂಶ ತಿಳಿದು ಬಂದಿದೆ” ಎಂದು ಹೇಳಿದರು.

“ಅಧಿಕಾರಿಗಳು, ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡಿದ್ದಾರೆ. ಇದಕ್ಕೆ ಏಡ್ಸ್ ಇರುವವರನ್ನೇ ಬಳಕೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬಿಜೆಪಿ ಕಾರ್ಯಕರ್ತೆಯೇ ದೂರು ನೀಡಿದ್ದಾರೆ. ಇಷ್ಟೆಲ್ಲ ಕಂಡು ಬಂದರೂ ಬಿಜೆಪಿಯವರು ಯಾವುದೇ ಕ್ರಮ ತೆಗೆದುಕೊಂಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisements

“ಕಾಂಗ್ರೆಸ್‌ನಲ್ಲಿ ಇದ್ದಾಗ ತಪ್ಪು ಮಾಡಿದ್ದರೆ ಕೇಳಬೇಕಾಗಿತ್ತು. ಬಿಜೆಪಿಯಲ್ಲಿ ಇದ್ದಾಗ ಕೇಳಬಾರದು ಎನ್ನುವ ಮನಸ್ಥಿತಿ ಆರ್.ಅಶೋಕ್ ಅವರದ್ದು. ಅಶೋಕ್ ಮತ್ತು ಕುಮಾರಸ್ವಾಮಿಗೆ ಮನುಷ್ಯತ್ವ ಇದೆಯಾ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಶೇ.100ರಷ್ಟು ಸಾಚ ಯಾರೂ ಇಲ್ಲ. ಎಲ್ಲರೂ ತಪ್ಪು ಮಾಡುತ್ತಾರೆ. ಆದರೆ ಮುನಿರತ್ನ ಮಾಡಿರುವುದು ಸರಿಯೇ ಎಂದು ಯೋಚಿಸಲಿ. ಇಷ್ಟೆಲ್ಲಾ ಹೊರ ಬಂದಿದ್ದರೂ ಬೆಂಬಲವಾಗಿ ನಿಂತವರೂ ಸಹ ಅಪರಾಧದ ಭಾಗವಾಗಿದ್ದಾರೆ” ಎಂದು ಕಿಡಿಕಾರಿದರು.

“ಮುನಿರತ್ನ ಒಕ್ಕಲಿಗ ಸಮಾಜದ ಅವಹೇಳನ ಮಾಡಿದ್ದಾರೆ. ಪ್ರಕರಣವನ್ನು ಎಸ್ಐಟಿ ತನಿಖೆಗೆ ಒಪ್ಪಿಸುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದೇವೆ. ಒಕ್ಕಲಿಗ ಸಮಾಜದ ಮೇಲೆ ದಾಳಿ ನಡೆದಾಗ ಸಮುದಾಯದ ಎಚ್ಚೆತ್ತುಕೊಂಡು ಒಂದು ಧ್ವನಿಯಲ್ಲಿ ಖಂಡಿಸಬೇಕು. ಸಮಾಜವು ನಿರ್ಮಲಾನಂದನಾಥ ಸ್ವಾಮೀಜಿ ಅವರಿಗೆ ಗೌರವ ಕೊಡುತ್ತದೆ. ಅವರ ನೇತೃತ್ವದಲ್ಲಿ ಖಂಡನಾ ನಿರ್ಣಯ ಸಭೆ ಆಗಬೇಕು ಎಂದು ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ಸ್ವಾಮೀಜಿ ಅವರ ತೀರ್ಮಾನವೇ ಅಂತಿಮ.
ರಾಜ್ಯದಲ್ಲಿ ಒಕ್ಕಲಿಗ ಸಮಾಜ ಗೌರವಯುತವಾಗಿ ನಡೆದುಕೊಂಡು ಬಂದಿದೆ. ವಿನಾಕಾರಣ ಅವಹೇಳನ ಮಾಡಬಹುದು ಎಂದರೆ ಸಮಾಜದ ಗೌರವಕ್ಕೆ ಚ್ಯುತಿ ಬರುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X