ಮಧ್ಯಮ ವರ್ಗಕ್ಕೆ ಬಂಪರ್‌ ಉಡುಗೊರೆ, ಈ ಬಗ್ಗೆ ಕಾಂಗ್ರೆಸ್ ನಾಯಕರು ಮಾತನಾಡಲ್ಲ: ಆರ್ ಅಶೋಕ್

Date:

Advertisements

ಯುಪಿಎ ಅವಧಿಯಲ್ಲಿ ಅನಗತ್ಯ ವೆಚ್ಚ ಹಾಗೂ ಲೂಟಿಯಿಂದಾಗಿ ಅಧಿಕ ಗಾತ್ರದ ಬಜೆಟ್‌ ಮಂಡಿಸಲು ಸಾಧ್ಯವಾಗುತ್ತಿರಲಿಲ್ಲ. ಅವುಗಳಿಗೆ ಕಡಿವಾಣ ಹಾಕಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ, ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದೆ. ಮಧ್ಯಮ ವರ್ಗಕ್ಕೆ ಬಂಪರ್‌ ಉಡುಗೊರೆ ನೀಡಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕರು ಮಾತನಾಡಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು.

ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕರು, “2013-14 ರ ಮನಮೋಹನ್‌ ಸಿಂಗ್‌ ಸರ್ಕಾರದಲ್ಲಿ ಬಜೆಟ್‌ ಗಾತ್ರ 16,65,297 ಕೋಟಿ ರೂ. ಆಗಿತ್ತು. 2025-26 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ 50,65,345 ಕೋಟಿ ರೂ. ಗಾತ್ರದ ಬಜೆಟ್‌ ಮಂಡಿಸಿದೆ. ಲೂಟಿಯಾಗುತ್ತಿದ್ದ ಹಣವನ್ನು ಮರಳಿ ತಂದಿದ್ದರಿಂದ ಬಜೆಟ್‌ ಗಾತ್ರ ಹೆಚ್ಚಾಗಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಕೇಂದ್ರ ಬಜೆಟ್ – 2025 | ರಾಜ್ಯದ ಸಚಿವರು ಹೇಳಿದ್ದೇನು?

Advertisements

“ಹಿಂದೆ 11,09,997 ಕೋಟಿ ರೂ. ಯೋಜನೇತರ ವೆಚ್ಚವಾಗಿದ್ದರೆ, ಈಗ ಅದು 39,44,255 ಕೋಟಿ ರೂ. ಗೆ ಏರಿದೆ. ಬಂಡವಾಳ ವೆಚ್ಚ ಆಗ 2,29,129 ಕೋಟಿ ರೂ. (13.7%) ಆಗಿದ್ದು, ಈಗ 11,21,090 ಕೋಟಿ ರೂ. ಆಗಿದೆ. ಅಂದರೆ ಬಂಡವಾಳ ವೆಚ್ಚ 9 ಲಕ್ಷ ಕೋಟಿ ರೂ. (22.13%) ಏರಿಕೆ ಕಂಡಿದೆ. ಅಂದರೆ ತೆರಿಗೆ ಸೋರಿಕೆ, ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಲಾಗಿದೆ” ಎಂದರು.

“ಮಧ್ಯಮ ವರ್ಗಕ್ಕೆ ಬಂಪರ್‌ ಉಡುಗೊರೆ ನೀಡಲಾಗಿದೆ. 12 ಲಕ್ಷ ರೂ. ವರೆಗೆ ತೆರಿಗೆ ವಿನಾಯಿತಿ ನೀಡಿರುವುದರಿಂದ ಜನರಿಗೆ ಅನುಕೂಲವಾಗಿದೆ. ಸಿಎಂ ಸಿದ್ದರಾಮಯ್ಯ ಗಾಳಿ ಒಂದನ್ನು ಬಿಟ್ಟು ಎಲ್ಲಕ್ಕೂ ತೆರಿಗೆ ವಿಧಿಸಿದ್ದಾರೆ. ಮೋದಿ ಸರ್ಕಾರ ಯಾವುದೇ ತೆರಿಗೆಯನ್ನು ಹೇರಿಲ್ಲ” ಎಂದರು.

“ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಸಿಗುವ ಸಾಲದ ಮಿತಿಯನ್ನು 3 ಲಕ್ಷ ರೂ. ನಿಂದ 5 ಲಕ್ಷ ರೂ. ಗೆ ಏರಿಸಲಾಗಿದೆ. ಸ್ಟಾರ್ಟ್‌ಅಪ್ ಕಂಪನಿಗಳಿಗೆ 10 ಕೋಟಿ ರೂ.ನಿಂದ 20 ಕೋಟಿ ರೂ. ವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ. ಮೊದಲ ಬಾರಿ ಉದ್ಯಮ ಆರಂಭಿಸುವ ಎಸ್‌ಸಿ, ಎಸ್‌ಟಿ ವರ್ಗದ 5 ಲಕ್ಷ ಮಹಿಳೆಯರಿಗೆ ಹೊಸ ಯೋಜನೆಯಡಿ ಟರ್ಮ್‌ಲೋನ್‌ ನೀಡಲಾಗುತ್ತದೆ” ಎಂದು ಹೇಳಿದರು.

“ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವಾಗುತ್ತಿದೆ. ಕೇಂದ್ರ ಸರ್ಕಾರದಿಂದ 1 ಕೋಟಿ ತಾಯಂದಿರಿಗೆ ಪೌಷ್ಟಿಕ ಆಹಾರ ನೀಡುವ ಯೋಜನೆ ತರಲಾಗಿದೆ. ಇದು ಬಾಣಂತಿಯರ ಆರೋಗ್ಯ ರಕ್ಷಣೆಗೆ ಸಹಾಯವಾಗಲಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಕೇಂದ್ರ ಬಜೆಟ್ 2025 | ಜನರಿಗೆ ಅನುಕೂಲವಾಗುವುದು ಏನೂ ಇಲ್ಲ: ಸಚಿವ ಪ್ರಿಯಾಂಕ್ ಖರ್ಗೆ

“ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್‌ ಕೇಂದ್ರ ಆರಂಭಿಸುವ ಮೂಲಕ ಬಡವರಿಗೆ ಅನುಕೂಲ ಕಲ್ಪಿಸಲಾಗಿದೆ. ಕ್ಯಾನ್ಸರ್‌ ಸೇರಿದಂತೆ 36 ಜೀವ ರಕ್ಷಕ ಔಷಧಗಳಿಗೆ ಕಸ್ಟಮ್ಸ್ ಸುಂಕದಿಂದ ಸಂಪೂರ್ಣವಾಗಿ ವಿನಾಯಿತಿ ನೀಡಲಾಗಿದೆ. ಮುಂದಿನ ವರ್ಷದಿಂದ ವೈದ್ಯಕೀಯ ಕಾಲೇಜಿನಲ್ಲಿ 10 ಸಾವಿರ ಸೀಟುಗಳನ್ನು ಹೆಚ್ಚಿಸಲಾಗುತ್ತದೆ. ಟಿವಿ, ಸ್ವದೇಶಿ ಉಡುಪು, ಚರ್ಮ ಉತ್ಪನ್ನಗಳ ದರ ಇಳಿಕೆಯಾಗಲಿದೆ” ಎಂದರು.

“ರಾಜ್ಯಗಳಿಗೆ 50 ವರ್ಷಗಳ ಬಡ್ಡಿ ರಹಿತ ಸಾಲಕ್ಕಾಗಿ 1.5 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ. ಆದರೆ ಕಾಂಗ್ರೆಸ್‌ ಇನ್ನೂ ಕೇಂದ್ರದಿಂದ ತಾರತಮ್ಯ ಎಂದು ಹೇಳುತ್ತಲೇ ಇದೆ. ಆದಾಯ ತೆರಿಗೆ ಮಿತಿ ಹೆಚ್ಚಿಸಿದ್ದಕ್ಕೆ ಕಾಂಗ್ರೆಸ್‌ ನಾಯಕರು ಅಭಿನಂದನೆ ತಿಳಿಸಿಲ್ಲ. ಜಲಜೀವನ್‌ ಮಿಷನ್‌ ಯೋಜನೆಯನ್ನು ವಿಸ್ತರಣೆ ಮಾಡಲಾಗಿದೆ. ಈ ಎಲ್ಲ ಯೋಜನೆಗಳು ರಾಜ್ಯದ ಜನರಿಗೆ ಸಿಗಲಿದೆ. ಆದರೆ ಕರ್ನಾಟಕಕ್ಕೆ ಏನೂ ನೀಡಿಲ್ಲ ಎಂದು ಕಾಂಗ್ರೆಸ್‌ ನಾಯಕರು ಸುಳ್ಳು ಹೇಳುತ್ತಿದ್ದಾರೆ” ಎಂದು ದೂರಿದರು.

ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿಯೂ ಬಿಜೆಪಿಯ ಮಿತ್ರ ಪಕ್ಷ ಅಧಿಕಾರದಲ್ಲಿರುವ ಬಿಹಾರಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ. ಉಳಿದ ರಾಜ್ಯಗಳಿಗೆ ಹೆಚ್ಚು ಯೋಜನೆ, ಅನುದಾನ ಘೋಷಿಸಲಾಗಿಲ್ಲ. ಈ ಬಜೆಟ್ ವಿರುದ್ಧ ಹಲವು ವಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆಟ್ಟಿಗರು ಇದು ‘ಬಿಹಾರಿ ಬಜೆಟ್’ ಎಂದು ಟೀಕಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X