ಕೇಜ್ರಿವಾಲ್‌ಗೆ ಸಮನ್ಸ್‌ | ಪ್ರತಿಭಟಿಸಿದ ರಾಘವ್‌ ಚಡ್ಡಾ, ಸಂಜಯ್‌ ಸಿಂಗ್‌ ಪೊಲೀಸ್‌ ವಶಕ್ಕೆ

Date:

Advertisements
  • ಪ್ರತಿಭಟನೆಯಲ್ಲಿ ರಾಘವ್‌ ಚಡ್ಡಾ ಜೊತೆ ಹಲವರು ಭಾಗಿ
  • ಸಿಬಿಐ ವಿಚಾರಣೆಗೆ ಹಾಜರಾದ ಅರವಿಂದ್‌ ಕೇಜ್ರಿವಾಲ್‌

ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸಿಬಿಐ ಸಮನ್ಸ್‌ ನೀಡಿರುವುದನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟಿಸಿದ ಆಮ್‌ ಆದ್ಮಿ ಪಕ್ಷದ (ಎಎಪಿ) ನಾಯಕರಾದ ರಾಘವ್‌ ಚಡ್ಡಾ ಸೇರಿದಂತೆ ಇತರರನ್ನು ಪೊಲೀಸರು ಭಾನುವಾರ (ಏಪ್ರಿಲ್‌ 16) ವಶಕ್ಕೆ ಪಡೆದಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ತನಿಖಾ ದಳ (ಸಿಬಿಐ) ಕೇಜ್ರಿವಾಲ್‌ ಅವರಿಗೆ ಎರಡು ದಿನಗಳ ಹಿಂದೆ ಸಮನ್ಸ್ ನೀಡಿದೆ.

ಕೇಜ್ರಿವಾಲ್ ಪರವಾಗಿ ಪ್ರತಿಭಟನೆ ನಡೆಸುತ್ತಿದ್ದ 1500ಕ್ಕೂ ಹೆಚ್ಚು ಎಎಪಿ ನಾಯಕರು ಮತ್ತು ಕಾರ್ಯಕರ್ತರನ್ನು ದೆಹಲಿ ಪೊಲೀಸರು ತಡೆದಿದ್ದಾರೆ. ಈ ಪೈಕಿ 1379 ಜನರನ್ನು ನಾನಾ ಪೊಲೀಸ್ ಠಾಣೆಗಳಲ್ಲಿ ಇರಿಸಲಾಗಿದೆ. ಇತರರನ್ನು ಬಸ್‌ಗಳಲ್ಲಿ ಕರೆದೊಯ್ಯಲಾಗುತ್ತಿದೆ ಎಂದು ಎಎಪಿ ನಾಯಕ ಮತ್ತು ಸಚಿವ ಗೋಪಾಲ್ ರೈ ಹೇಳಿದ್ದಾರೆ.

Advertisements

ದೆಹಲಿಯಾದ್ಯಂತ ಎಎಪಿ ನಾಯಕರು ಬೀದಿಗಿಳಿದು ಪ್ರತಿಭಟಿಸಿದರು. ಇದರಲ್ಲಿ ರಾಘವ್‌ ಚಡ್ಡಾ, ಸಂಜಯ್‌ ಸಿಂಗ್‌ ಮೊದಲಾದ ನಾಯಕರು ಸೇರಿದ್ದಾರೆ.

ಕೇಜ್ರಿವಾಲ್‌ ಅವರಿಗೆ ಸಿಬಿಐ ಸಮನ್ಸ್ ನೀಡಿರುವುದನ್ನು ರಾಘವ್‌ ಚಡ್ಡಾ ಸೇರಿ ಅನೇಕರು ಖಂಡಿಸಿದ್ದಾರೆ. ಪ್ರತಿಭಟನೆಯಿಂದ ಭಾನುವಾರ ದೆಹಲಿಯಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ದೆಹಲಿ ಸಚಿವರಾದ ಅತಿಶಿ, ರಾಘವ್ ಚಡ್ಡಾ, ಸಂಜಯ್ ಸಿಂಗ್, ಸೌರಭ್ ಭಾರದ್ವಾಜ್ ಸೇರಿದಂತೆ ದೆಹಲಿಯ ಸಿಬಿಐ ಕಚೇರಿಯ ಮುಂದೆ ಪಕ್ಷದ ಮುಖಂಡರು ಪ್ರತಿಭಟನೆ ನಡೆಸಿದರು.

“ಪ್ರಧಾನಿ ನರೇಂದ್ರ ಮೋದಿ ಅವರು ಅರವಿಂದ್ ಕೇಜ್ರಿವಾಲ್ ಅವರ ಹೆಚ್ಚುತ್ತಿರುವ ಜನಪ್ರಿಯತೆಗೆ ಹೆದರುತ್ತಿದ್ದಾರೆ. ಇದಕ್ಕಾಗಿ ಎಎಪಿ ನಾಯಕರನ್ನು ಜೈಲಿಗೆ ಹಾಕಲಾಗುತ್ತಿದೆ. ಇದೇ ಕಾರಣಕ್ಕೆ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ವಿಚಾರಣೆಗೆ ಕರೆದಿದೆ. ಸಾವಿರಾರು ಕೋಟಿ ಹಗರಣ ನಡೆದಿದೆ ಎನ್ನಲಾಗುತ್ತಿದೆ. ಆದರೆ ಇಲ್ಲಿಯವರೆಗೂ ಒಂದು ರೂಪಾಯಿ ಕೂಡ ಅವ್ಯವಹಾರ ನಡೆದಿರುವುದನ್ನು ಸಾಬೀತುಪಡಿಸಲು ಸಾಧ್ಯವಾಗಿಲ್ಲ. ಇಡೀ ದೇಶ ಅರವಿಂದ್ ಕೇಜ್ರಿವಾಲ್ ಅವರೊಡನೆ ನಿಂತಿದೆ” ಎಂದು ಸಚಿವ ಅತಿಶಿ ಸುದ್ದಿಸಂಸ್ಥೆ ಎಎನ್‌ಐಗೆ ತಿಳಿಸಿದರು.

ಅಬಕಾರಿ ನೀತಿ ಹಗರಣ ಪ್ರಕರಣದ ವಿಚಾರಣೆಗಾಗಿ ಅರವಿಂದ್‌ ಕೇಜ್ರಿವಾಲ್ ಅವರು ಭಾನುವಾರ ಬೆಳಿಗ್ಗೆ ದೆಹಲಿಯ ಸಿಬಿಐ ಕೇಂದ್ರ ಕಚೇರಿಗೆ ಆಗಮಿಸಿದ್ದರು.

“ಸಿಬಿಐನ ಎಲ್ಲ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ. ಸಿಬಿಐ ಬಿಜೆಪಿ ನಿಯಂತ್ರಣದಲ್ಲಿದ್ದು, ನನ್ನನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ” ಎಂದು ಕೇಜ್ರಿವಾಲ್‌ ಸಿಬಿಐ ಕಚೇರಿಯ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಿಂಘು ಗಡಿಯಲ್ಲಿ ಪಂಜಾಬ್ ಸಚಿವರನ್ನು ತಡೆದ ಪೊಲೀಸರು, ದೆಹಲಿಗೆ ಪ್ರವೇಶಿಸಲು ಅವಕಾಶ ನೀಡಲಿಲ್ಲ ಎಂದು ಎಎಪಿ ನಾಯಕರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರ | ಮಾನಹಾನಿ ಪ್ರಕರಣ ; ರಾಹುಲ್‌ ಗಾಂಧಿಗೆ ಶಾಶ್ವತ ವಿನಾಯತಿ

ಪ್ರತಿಭಟನೆಯಲ್ಲಿ ಪಂಜಾಬ್ ಆರೋಗ್ಯ ಸಚಿವ ಡಾ. ಬಲ್ಬೀರ್ ಸಿಂಗ್, ಪಂಜಾಬ್ ಕಂದಾಯ ಸಚಿವ ಬ್ರಮ್ ಶಂಕರ್ ಜಿಂಪಾ, ಪಂಜಾಬ್ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್, ಎಎಪಿ ನಾಯಕರಾದ ಕುಲ್ಜಿತ್ ರಾಂಧವಾ ಮತ್ತು ದಿನೇಶ್ ಚಡ್ಡಾ ಸೇರಿದ್ದರು.

ಪ್ರತಿಭಟನೆ ವೇಳೆ ರಾಘವ್ ಚಡ್ಡಾ, ಸಂಜಯ್ ಸಿಂಗ್ ಮೊದಲಾದವರ ಬಂಧನ ವಿರೋಧಿಸಿ ಎಎಪಿ ನಾಯಕರು ಸಿಬಿಐ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X