ಬಂಗಲೆ ತೊರೆಯುವ ಆದೇಶ ಪಾಲಿಸುತ್ತೇನೆ: ರಾಹುಲ್ ಗಾಂಧಿ ಪತ್ರ

Date:

ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ತಿಂಗಳೊಳಗೆ ಸರ್ಕಾರಿ ಬಂಗಲೆ ತೊರೆಯುವಂತೆ ಲೋಕಸಭಾ ವಸತಿ ಸಮಿತಿ ನೀಡಿದ ನೋಟಿಸ್‌ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉತ್ತರಿಸಿದ್ದು, “ನಿಮ್ಮ ಪತ್ರಕ್ಕೆ ಧನ್ಯವಾದ, ನಿಮ್ಮ ಆದೇಶ ಪಾಲಿಸುತ್ತೇನೆ” ಎಂದು ಪತ್ರದಲ್ಲಿ ಪ್ರತಿಕ್ರಿಯಿಸಿದ್ದಾರೆ.

“ಕಳೆದ ನಾಲ್ಕು ಅವಧಿಗೆ ಸಂಸತ್ತಿನ ಚುನಾಯಿತ ಪ್ರೆತಿನಿಧಿಯಾಗಿ ಇಲ್ಲಿ ನಾನು ಕಳೆದ ಸಂತಸದ ಕ್ಷಣಗಳಿಗೆ ನನ್ನ ಲೋಕಸಭಾ ಕ್ಷೇತ್ರದ ಜನರಿಗೆ ನಾನು ಆಬಾರಿಯಾಗಿದ್ದೇನೆ. ನನ್ನ ಹಕ್ಕುಗಳ ಬಗ್ಗೆ ಪೂರ್ವಗ್ರಹವಿಲ್ಲದೆಯೇ, ನಾನು ನಿಮ್ಮ ಪತ್ರದಲ್ಲಿ ಬರೆದಿರುವ ಆದೇಶವನ್ನು ಖಂಡಿತಾ ಪಾಲಿಸುತ್ತೇನೆ” ಎಂದು ಅವರು ವಸತಿ ಸಮಿತಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.

ಸಂಸದನ ಸ್ಥಾನದಿಂದ ಅನರ್ಹಗೊಂಡ ಮೂರು ದಿನದ ನಂತರ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರಿಗೆ ಒಂದು ತಿಂಗಳೊಳಗೆ ಸರ್ಕಾರಿ ಬಂಗಲೆ ತೊರೆಯುವಂತೆ ಲೋಕಸಭಾ ವಸತಿ ಸಮಿತಿ ನೋಟಿಸ್ ನೀಡಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮೋದಿ ಸರ್‌ನೇಮ್ ವಿಚಾರದಲ್ಲಿ ನೀಡಿರುವ ಹೇಳಿಕೆಗೆ ಸಂಬಂಧಿಸಿದ ಮಾನಹಾನಿ ಪ್ರಕರಣದಲ್ಲಿ ಸೂರತ್‌ ಜಿಲ್ಲಾ ನ್ಯಾಯಾಲಯ ಶಿಕ್ಷೆ ವಿಧಿಸಿದ ನಂತರ ಲೋಕಸಭೆ ಸಚಿವಾಲಯ ರಾಹುಲ್ ಗಾಂಧಿ ಅವರನ್ನು ಸಂಸದನ ಸ್ಥಾನದಿಂದ ವಜಾಗೊಳಿಸಿತ್ತು.

ಈ ಸುದ್ದಿ ಓದಿದ್ದೀರಾ? ರಾಹುಲ್ ಗಾಂಧಿ ಅನರ್ಹತೆ | ದೇಶದ 35 ನಗರಗಳಲ್ಲಿ ಕಾಂಗ್ರೆಸ್ ಪತ್ರಿಕಾಗೋಷ್ಠಿ

2004ರಲ್ಲಿ ಅವರು ಮೊದಲ ಬಾರಿಗೆ ಲೋಕಸಭಾ ಸದಸ್ಯರಾಗಿ ಆಯ್ಕೆಯಾದಾಗ ಅವರಿಗೆ ನವದೆಹಲಿಯ ಲುಧಿಯಾನ ಏರಿಯಾದ 12 ತುಘಲಕ್ ರಸ್ತೆಯಲ್ಲಿರುವ ಬಂಗಲೆಯನ್ನು ಸರಕಾರದ ವತಿಯಿಂದ ನೀಡಲಾಗಿತ್ತು.

ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕಾರಣ ಏಪ್ರಿಲ್‌ 22ರೊಳಗೆ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಬೇಕು ಎಂದು ಲೋಕಸಭಾ ವಸತಿ ಸಮಿತಿ ನೀಡಿರುವ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿಯಲ್ಲಿ ಬಿಜೆಪಿಗೆ ಹಿನ್ನಡೆ; ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್‌ ಸೇರ್ಪಡೆ

ಲೋಕಸಭೆ ಚುನಾವಣೆಯ ವೇಳೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಮಾಜಿ...

ತಡವಾಗಿ ತಲುಪಿದ ವಿಮಾನ; ಒಲಿಂಪಿಕ್ ಅರ್ಹತಾ ಪಂದ್ಯದಿಂದ ಹೊರಗುಳಿದ ಕುಸ್ತಿಪಟು ದೀಪಕ್ ಪೂನಿಯಾ ಮತ್ತು ಸುಜೀತ್ ಕಲ್ಕಲ್‌

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಡೆ ಕ್ಷಣದಲ್ಲಿ ಪದಕ ಕಳೆದುಕೊಂಡ ಕುಪ್ತಿಪಟು ದೀಪಕ್ ಪೂನಿಯಾ...

ಡಿಡಿ ನ್ಯೂಸ್ ಲೋಗೊ ಬಣ್ಣ ಕೇಸರೀಕರಣ: ವ್ಯಾಪಕ ಆಕ್ರೋಶ

ಕೇಂದ್ರ ಸರ್ಕಾರ ಅಧೀನದ ವಿದ್ಯುನ್ಮಾನ ಮಾಧ್ಯಮ ಸಂಸ್ಥೆ ಡಿಡಿ ನ್ಯೂಸ್‌ ಲೋಗೊ...

ನೇಹಾ ಕೊಲೆ ಪ್ರಕರಣ | ಹುಬ್ಬಳ್ಳಿ, ಬೆಳಗಾವಿಯಲ್ಲಿ ಚುನಾವಣೆ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಯತ್ನ

ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಕೊಲೆ...