ಬಂಗಲೆ ತೊರೆಯುವ ಆದೇಶ ಪಾಲಿಸುತ್ತೇನೆ: ರಾಹುಲ್ ಗಾಂಧಿ ಪತ್ರ

Date:

ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ತಿಂಗಳೊಳಗೆ ಸರ್ಕಾರಿ ಬಂಗಲೆ ತೊರೆಯುವಂತೆ ಲೋಕಸಭಾ ವಸತಿ ಸಮಿತಿ ನೀಡಿದ ನೋಟಿಸ್‌ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉತ್ತರಿಸಿದ್ದು, “ನಿಮ್ಮ ಪತ್ರಕ್ಕೆ ಧನ್ಯವಾದ, ನಿಮ್ಮ ಆದೇಶ ಪಾಲಿಸುತ್ತೇನೆ” ಎಂದು ಪತ್ರದಲ್ಲಿ ಪ್ರತಿಕ್ರಿಯಿಸಿದ್ದಾರೆ.

“ಕಳೆದ ನಾಲ್ಕು ಅವಧಿಗೆ ಸಂಸತ್ತಿನ ಚುನಾಯಿತ ಪ್ರೆತಿನಿಧಿಯಾಗಿ ಇಲ್ಲಿ ನಾನು ಕಳೆದ ಸಂತಸದ ಕ್ಷಣಗಳಿಗೆ ನನ್ನ ಲೋಕಸಭಾ ಕ್ಷೇತ್ರದ ಜನರಿಗೆ ನಾನು ಆಬಾರಿಯಾಗಿದ್ದೇನೆ. ನನ್ನ ಹಕ್ಕುಗಳ ಬಗ್ಗೆ ಪೂರ್ವಗ್ರಹವಿಲ್ಲದೆಯೇ, ನಾನು ನಿಮ್ಮ ಪತ್ರದಲ್ಲಿ ಬರೆದಿರುವ ಆದೇಶವನ್ನು ಖಂಡಿತಾ ಪಾಲಿಸುತ್ತೇನೆ” ಎಂದು ಅವರು ವಸತಿ ಸಮಿತಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.

ಸಂಸದನ ಸ್ಥಾನದಿಂದ ಅನರ್ಹಗೊಂಡ ಮೂರು ದಿನದ ನಂತರ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರಿಗೆ ಒಂದು ತಿಂಗಳೊಳಗೆ ಸರ್ಕಾರಿ ಬಂಗಲೆ ತೊರೆಯುವಂತೆ ಲೋಕಸಭಾ ವಸತಿ ಸಮಿತಿ ನೋಟಿಸ್ ನೀಡಿತ್ತು.

ಮೋದಿ ಸರ್‌ನೇಮ್ ವಿಚಾರದಲ್ಲಿ ನೀಡಿರುವ ಹೇಳಿಕೆಗೆ ಸಂಬಂಧಿಸಿದ ಮಾನಹಾನಿ ಪ್ರಕರಣದಲ್ಲಿ ಸೂರತ್‌ ಜಿಲ್ಲಾ ನ್ಯಾಯಾಲಯ ಶಿಕ್ಷೆ ವಿಧಿಸಿದ ನಂತರ ಲೋಕಸಭೆ ಸಚಿವಾಲಯ ರಾಹುಲ್ ಗಾಂಧಿ ಅವರನ್ನು ಸಂಸದನ ಸ್ಥಾನದಿಂದ ವಜಾಗೊಳಿಸಿತ್ತು.

ಈ ಸುದ್ದಿ ಓದಿದ್ದೀರಾ? ರಾಹುಲ್ ಗಾಂಧಿ ಅನರ್ಹತೆ | ದೇಶದ 35 ನಗರಗಳಲ್ಲಿ ಕಾಂಗ್ರೆಸ್ ಪತ್ರಿಕಾಗೋಷ್ಠಿ

2004ರಲ್ಲಿ ಅವರು ಮೊದಲ ಬಾರಿಗೆ ಲೋಕಸಭಾ ಸದಸ್ಯರಾಗಿ ಆಯ್ಕೆಯಾದಾಗ ಅವರಿಗೆ ನವದೆಹಲಿಯ ಲುಧಿಯಾನ ಏರಿಯಾದ 12 ತುಘಲಕ್ ರಸ್ತೆಯಲ್ಲಿರುವ ಬಂಗಲೆಯನ್ನು ಸರಕಾರದ ವತಿಯಿಂದ ನೀಡಲಾಗಿತ್ತು.

ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕಾರಣ ಏಪ್ರಿಲ್‌ 22ರೊಳಗೆ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಬೇಕು ಎಂದು ಲೋಕಸಭಾ ವಸತಿ ಸಮಿತಿ ನೀಡಿರುವ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಕರೂಪ ನಾಗರಿಕ ಸಂಹಿತೆ ಅನುಷ್ಠಾನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್ ಶಾ

ಕೇಂದ್ರ ಸರ್ಕಾರ ಜಾರಿಗೊಳಿಸಲಿರುವ ಏಕರೂಪ ನಾಗರಿಕ ಸಂಹಿತೆ ಕಾಯ್ದೆಯನ್ನು ತಡೆಯಲು ಯಾರಿಂದಲೂ...

ಬೆಂಗಳೂರು ಟೆಕ್ ಸಮ್ಮಿಟ್ 2023 | ಜೈವಿಕ ತಂತ್ರಜ್ಞಾನ ಕಾರ್ಯನೀತಿಯ ಪರಿಷ್ಕೃತ ಕರಡು ಬಿಡುಗಡೆ

ಬೆಂಗಳೂರು ಅರಮನೆಯಲ್ಲಿ 'ಬ್ರೇಕಿಂಗ್ ದಿ ಬೌಂಡರೀಸ್' ಘೋಷವಾಕ್ಯದ 26ನೇ ‘ಬೆಂಗಳೂರು ತಂತ್ರಜ್ಞಾನ...

ಮಸೂದೆ ವಿಳಂಬ: ಸಿಎಂ, ಸಚಿವರನ್ನು ಭೇಟಿಯಾಗುವಂತೆ ಕೇರಳ ರಾಜ್ಯಪಾಲರಿಗೆ ಸುಪ್ರೀಂ ಸೂಚನೆ

ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಎಂಟು ಮಸೂದೆಗಳ ಬಗ್ಗೆ...

ಕಾಗಿನೆಲೆ ಪೀಠ ಒಂದು ಜಾತಿಯ ನೆಲೆ ಅಲ್ಲ, ಎಲ್ಲ ಶೋಷಿತ ಜಾತಿ-ಸಮುದಾಯಗಳ ನೆಲೆ: ಸಿದ್ದರಾಮಯ್ಯ

ಕನಕದಾಸರು ಜಾತಿ‌, ಅನಕ್ಷರತೆಯ ಅಸಮಾನತೆ ಹೋಗಲಾಡಿಸಲು ಹೋರಾಡಿದರು ಯಾವ ಧರ್ಮವೂ...