ಲೋಕಸಭಾ ಚುನಾವಣೆ | ಪೆರಿಯಾರ್-ಸಾಮಾಜಿಕ ನ್ಯಾಯ ಮತ್ತು ಆರ್‌ಎಸ್‌ಎಸ್-ಮೋದಿ ನಡುವಿನ ಯುದ್ಧ: ರಾಹುಲ್ ಗಾಂಧಿ

Date:

Advertisements

ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಪೆರಿಯಾರ್, ಸಾಮಾಜಿಕ ನ್ಯಾಯ ಸಿದ್ಧಾಂತ ಮತ್ತು ಆರ್‌ಎಸ್‌ಎಸ್‌, ಮೋದಿ ನಡುವಿನ ಯುದ್ಧ ನಡೆಯುತ್ತಿದೆ ಎಂದು ರಾಹುಲ್‌ ಗಾಂಧಿ ಪ್ರತಿಪಾದಿಸಿದ್ದಾರೆ.

ತಮಿಳುನಾಡಿನ ತುರುನಲ್ವೆಯಲ್ಲಿ ಚುನಾವಣಾ ರ್‍ಯಾಲಿ ಉದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿ ವಿರುದ್ಧ ಕುಟುವಾಗಿ ವಾಗ್ದಾಳಿ ನಡೆಸಿದರು. “ತಮಿಳು ಭಾಷೆಯ ಮೇಲಿನ ದಾಳಿಯು ತಮಿಳು ಜನರ ಮೇಲಿನ ದಾಳಿಯಾಗಿದೆ” ಎಂದು ಅವರು ಹೇಳಿದರು.

“ಇಂದು ಭಾರತದಲ್ಲಿ ಸೈದ್ಧಾಂತಿಕ ಕದನ ನಡೆಯುತ್ತಿದೆ. ಒಂದೆಡೆ ಪೆರಿಯಾರ್, ಸಾಮಾಜಿಕ ನ್ಯಾಯ, ಸ್ವಾತಂತ್ರ್ಯ ಮತ್ತು ಸಮಾನತೆಯ ವಿಚಾರಗಳು, ಇನ್ನೊಂದೆಡೆ ನರೇಂದ್ರ ಮೋದಿ ಮತ್ತು ಅವರ ಸರ್ಕಾರದ ವಿಚಾರಗಳಿವೆ. ‘ಒಂದು ರಾಷ್ಟ್ರ, ಒಂದು ನಾಯಕ, ಒಂದು ಭಾಷೆ’ ಎಂದು ಮೋದಿ ಹೇಳುತ್ತಾರೆ. ತಮಿಳು ಭಾಷೆ ಯಾವುದೇ ಭಾರತೀಯ ಭಾಷೆಗಿಂತ ಕಡಿಮೆಯಿಲ್ಲ. ಈ ದೇಶದಲ್ಲಿ ಹಲವಾರು ವಿಭಿನ್ನ ಭಾಷೆಗಳು ಮತ್ತು ಸಂಸ್ಕೃತಿಗಳಿವೆ. ನಮಗೆ ಎಲ್ಲವೂ ಸಮಾನವಾಗಿದ್ದು, ಮುಖ್ಯವಾಗಿವೆ” ಎಂದು ರಾಹುಲ್‌ ಪ್ರತಿಪಾದಿಸಿದ್ದಾರೆ.

Advertisements

“ಕೇಂದ್ರೀಯ ಸಂಸ್ಥೆಗಳನ್ನು ರಾಜಕೀಯ ಅಸ್ತ್ರಗಳಾಗಿ ಮೋದಿ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ. ಜಾರಿ ನಿರ್ದೇಶನಾಲಯ, ಸಿಬಿಐ, ಐಟಿ ರಾಜಕೀಯ ಅಸ್ತ್ರವಾಗಿ ಬಳಕೆಯಾಗುತ್ತಿದೆ. ಚುನಾವಣಾ ಆಯುಕ್ತರನ್ನು ಪ್ರಧಾನಿ ಆಯ್ಕೆ ಮಾಡುತ್ತಿದ್ದಾರೆ. ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಚುನಾವಣೆಗೆ ಎರಡು ತಿಂಗಳ ಮುಂಚೆ ಸ್ಥಗಿತಗೊಳಿಸಲಾಗಿದೆ. ಮುಖ್ಯಮಂತ್ರಿಗಳನ್ನು ಬಂಧಿಸಲಾಗಿದೆ, ವಿರೋಧ ಪಕ್ಷದ ನಾಯಕರಿಗೆ ಬೆದರಿಕೆ ಹಾಕಲಾಗುತ್ತಿದೆ’’ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. .

“ದೇಶದ 3-4 ಶ್ರೀಮಂತರು ಸರ್ಕಾರದಿಂದ ಪ್ರಯೋಜನ ಪಡೆಯುತ್ತಿದ್ದಾರೆ. ಆದರೆ, ಪ್ರವಾಹ ಪರಿಹಾರಕ್ಕಾಗಿ ಹಣವನ್ನು ಕೇಳಿದರೆ ಕೇಂದ್ರ ಸರ್ಕಾರ ನಿರಾಕರಿಸುತ್ತದೆ. ಪ್ರಧಾನಿ ಈ ದೇಶದ ಮೀನುಗಾರರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ಅವರ ಬಗ್ಗೆ ಮೋದಿ ಯೋಚಿಸುವುದಿಲ್ಲ. ನಾವು ಮೀನುಗಾರರಿಗೆ ವಿಶೇಷ ಪ್ರಣಾಳಿಕೆ ರಚಿಸಿದ್ದೇವೆ. ಮೀನುಗಾರಿಕಾ ದೋಣಿಗಳಿಗೆ ಡೀಸೆಲ್‌ಗೆ ಸಬ್ಸಿಡಿ, ಮೀನುಗಾರಿಕಾ ದೋಣಿಗಳಿಗೆ ವಿಮೆ, ಕ್ರೆಡಿಟ್ ಕಾರ್ಡ್ ನೀಡುತ್ತೇವೆ. ಒಳನಾಡು ಮೀನುಗಾರಿಕೆ ಮತ್ತು ಜಲಚರಗಳನ್ನು ಕೃಷಿ ಎಂದು ಗುರುತಿಸಲು ಕಾಂಗ್ರೆಸ್‌ ಹೊರಟಿದೆ” ಎಂದು ವಿವರಿಸಿದ್ದಾರೆ.

“ಮೋದಿ ಸರ್ಕಾರವು ಸಂವಿಧಾನವನ್ನು ಬದಲಾಯಿಸಲು ಯೋಜಿಸುತ್ತಿದೆ. ಬಿಜೆಪಿ ಸಂಸದರು ತಾವು ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಬಹಿರಂಗವಾಗಿ ಹೇಳುತ್ತಾರೆ. ಪ್ರಪಂಚದ ಉಳಿದ ರಾಷ್ಟ್ರಗಳು ಭಾರತವನ್ನು ಪ್ರಜಾಪ್ರಭುತ್ವದ ದಾರಿದೀಪ ಎಂದು ಕರೆಯುತ್ತಿದ್ದವು; ಈಗ ಅವರೆಲ್ಲರೂ ಭಾರತದ ಪ್ರಜಾಪ್ರಭುತ್ವವು ಇನ್ನು ಮುಂದೆ ಪ್ರಜಾಪ್ರಭುತ್ವವಲ್ಲ ಎಂದು ಹೇಳುವ ಪರಿಸ್ಥಿತಿ ಎದುರಾಗಿದೆ” ಎಂದು ರಾಹುಲ್ ಹೇಳಿದ್ದಾರೆ.

ತಮಿಳುನಾಡು 39 ಲೋಕಸಭಾ ಸ್ಥಾನಗಳನ್ನು ಹೊಂದಿದ್ದು, ಏಪ್ರಿಲ್ 19ರಂದು ಮತದಾನ ನಡೆಯಲಿದೆ. ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಜೊತೆ ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಿದ್ದು, ತಮಿಳುನಾಡಿನ 9 ಸ್ಥಾನಗಳು ಹಾಗೂ ಪುದುಚೇರಿಯ ಏಕೈಕ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X