ರಾಹುಲ್ ಗಾಂಧಿಗೆ ಒಂದು ಉಳಿದವರಿಗೆ ಇನ್ನೊಂದು ಕಾನೂನು ಇಲ್ಲ: ಸಿಎಂ ಬೊಮ್ಮಾಯಿ

Date:

  • ಏನು ಮಾತನಾಡಿದರೂ ನಡೆಯುತ್ತೆ ಎನ್ನುವ ಭಾವನೆ ರಾಹುಲ್‌ಗೆ ಇದೆʼ
  • ‘ದೇಶದ ಕಾನೂನು ವ್ಯವಸ್ಥೆ ಪ್ರಕಾರ ರಾಹುಲ್‌ ಗಾಂಧಿಗೆ ಶಿಕ್ಷೆಯಾಗಿದೆʼ

ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು. ರಾಹುಲ್ ಗಾಂಧಿಗೆ ಒಂದು ಉಳಿದವರಿಗೆ ಇನ್ನೊಂದಿಲ್ಲ. ದೇಶದಲ್ಲಿ ಕಾನೂನು ವ್ಯವಸ್ಥೆ ಪ್ರಕಾರ ಎಲ್ಲ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.

“ಏನು ಮಾತನಾಡಿದರೂ ನಡೆಯುತ್ತದೆ ಎನ್ನುವ ಭಾವನೆ ರಾಹುಲ್‌ ಗಾಂಧಿಗೆ ಇದೆ. ಅವರಿಗೆ ಸರಿಪಡಿಸಿಕೊಳ್ಳಲು ಅವಕಾಶವಿತ್ತು. ಆದರೆ ಅವರು ಸರಿಪಡಿಸಿಕೊಳ್ಳಲಿಲ್ಲ. ವಿರೋಧ ಪಕ್ಷದದವರನ್ನ ಚುನಾವಣೆಯಲ್ಲಿ ಸೋಲಿಸಬೇಕು ಅಥವಾ ಸಂಸತ್ತಿನಲ್ಲಿ ಚರ್ಚೆ ಮಾಡಬೇಕು. ಅದು ಬಿಟ್ಟು ಹಾದಿಬೀದಿಯಲ್ಲಿ ವೈಯಕ್ತಿಕ ನಿಂದನೆ ಮಾಡಿ ಮಾತನಾಡಿದರೆ, ಖಂಡಿತವಾಗಿಯೂ ಅದಕ್ಕೆ ಕಾನೂನು ಇದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ರಾಹುಲ್ ಗಾಂಧಿ ಕೇವಲ ವ್ಯಕ್ತಿಯ ವಿರುದ್ಧ ಅಲ್ಲ ಒಂದು ವರ್ಗದ ವಿರುದ್ಧ ಮಾತನಾಡಿದ್ದಾರೆ. ಬಹಳ ಜನರಿಗೆ ಇದರಿಂದ ನೋವಾಗಿದೆ. ಅವರೆಲ್ಲರೂ ಪ್ರಕರಣ ದಾಖಲಿಸಿದ್ದರಿಂದ ನ್ಯಾಯಾಲಯ ತೀರ್ಪು ನೀಡಿದೆ” ಎಂದರು.

ಕಾಂಗ್ರೆಸ್ ಪಟ್ಟಿಯಲ್ಲಿ ಆಶ್ಚರ್ಯವಿಲ್ಲ

ಕಾಂಗ್ರೆಸ್ ನಿಂದ ಮೊದಲ ಪಟ್ಟಿ ಬಿಡುಗಡೆಯಾಗಿರುವುದರಲ್ಲಿ ಯಾವುದೇ  ಆಶ್ಚರ್ಯವಿಲ್ಲ. ಅದರಲ್ಲಿ  ಹೊಸತನವಿಲ್ಲ. ಬಿಜೆಪಿ ಪಟ್ಟಿ ಬಿಡುಗಡೆ ಕುರಿತು ಕಾದು ನೋಡಿ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆ ನಿಶ್ಚಿತ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ ಟಿಕೆಟ್‌ | ಬಣ ಬಡಿದಾಟಕ್ಕೆ ಪೂರ್ಣವಿರಾಮವಿಟ್ಟ ಸಿಎಂ, ಡಿಸಿಎಂ; ಅಭ್ಯರ್ಥಿ ಯಾರು?

ಕೋಲಾರ ಟಿಕೆಟ್‌ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಪಾಳಯದಲ್ಲಿ ಉಂಟಾಗಿದ್ದ ಬಣಗಳ ಬಡಿದಾಟವನ್ನು...

ಕಂಗನಾ ರಣಾವತ್ ಬಗ್ಗೆ ವಿವಾದಾತ್ಮಕ ಹೇಳಿಕೆ; ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ

ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಖ್ಯಾತ ನಟಿ ಕಂಗನಾ ರಣಾವತ್...

ಬೀದರ್‌ | ಕೇಂದ್ರ ಸಚಿವ ಭಗವಂತ ಖೂಬಾಗೆ ಇದು ಕೊನೆ ಚುನಾವಣೆ: ಸಚಿವ ಈಶ್ವರ ಖಂಡ್ರೆ

ಕೇಂದ್ರ ಸಚಿವ ಭಗವಂತ ಖೂಬಾ ಅವರ ದುರಂಕಾರ, ಅಧಿಕಾರದ ದರ್ಪ ಹಾಗೂ...

ಲೋಕಸಭೆ ಕದನ | ಸಂಘರ್ಷ ಪೀಡಿತ ಮಣಿಪುರದಲ್ಲಿ ಬಿಜೆಪಿ ಸ್ಥಿತಿ ಏನಾಗಿದೆ?

ಮಣಿಪುರದಲ್ಲಿ ಬಿಜೆಪಿ ಕಳೆದೆರಡು ಚುನಾವಣೆಯಲ್ಲೂ ಮತಪ್ರಮಾಣದಲ್ಲಿ ಏರಿಕೆ ಕಂಡಿದ್ದರೂ ಈ ಬಾರಿ...