ತಿಂಗಳೊಳಗೆ ಸರ್ಕಾರಿ ಬಂಗಲೆ ತೊರೆಯುವಂತೆ ರಾಹುಲ್‌ ಗಾಂಧಿಗೆ ನೋಟಿಸ್

Date:

Advertisements
  • ನವದೆಹಲಿಯ ಲೂಧಿಯಾನದ 12 ತುಘಲಕ್ ರಸ್ತೆಯಲ್ಲಿರುವ ಬಂಗಲೆಯಲ್ಲಿ ವಾಸವಿರುವ ರಾಹುಲ್‌ ಗಾಂಧಿ
  • ಸೂರತ್‌ ಜಿಲ್ಲಾ ನ್ಯಾಯಾಲಯ ಶಿಕ್ಷೆ ವಿಧಿಸಿದ ನಂತರ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದ ರಾಹುಲ್

ಸಂಸದನ ಸ್ಥಾನದಿಂದ ಅನರ್ಹಗೊಂಡ ಮೂರು ದಿನದ ನಂತರ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರಿಗೆ ಒಂದು ತಿಂಗಳೊಳಗೆ ಸರ್ಕಾರಿ ಬಂಗಲೆ ತೊರೆಯುವಂತೆ ಲೋಕಸಭಾ ವಸತಿ ಸಮಿತಿ ನೋಟಿಸ್ ನೀಡಿದೆ.

ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್‌ ಜಿಲ್ಲಾ ನ್ಯಾಯಾಲಯ ಶಿಕ್ಷೆ ವಿಧಿಸಿದ ನಂತರ ಲೋಕಸಭೆ ಸಚಿವಾಲಯ ಸಂಸದನ ಸ್ಥಾನದಿಂದ ವಜಾಗೊಳಿಸಿತ್ತು.

2004ರಲ್ಲಿ ಅವರು ಮೊದಲ ಬಾರಿಗೆ ಲೋಕಸಭಾ ಸದಸ್ಯರಾಗಿ ಆಯ್ಕೆಯಾದಾಗ ಅವರಿಗೆ ನವದೆಹಲಿಯ ಲೂಧಿಯಾನದ 12 ತುಘಲಕ್ ರಸ್ತೆಯಲ್ಲಿರುವ ಬಂಗಲೆಯನ್ನು ಅವರಿಗೆ ಸರಕಾರದ ವತಿಯಿಂದ ನೀಡಲಾಗಿತ್ತು.

Advertisements

ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕಾರಣ ಏಪ್ರಿಲ್‌ 22ರೊಳಗೆ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಬೇಕು ಎಂದು ಲೋಕಸಭಾ ವಸತಿ ಸಮಿತಿ ನೀಡಿರುವ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ ಈವರೆಗೂ ತನಗೆ ಅಂತಹ ಯಾವುದೇ ನೋಟಿಸ್ ದೊರಕಿಲ್ಲ ಎಂದು ತಿಳಿಸಿದ್ದಾರೆ.

ತನಿಖೆಗೆ ಮತ್ತೆ ಆಗ್ರಹ

ಅದಾನಿ ಸಮೂಹದಲ್ಲಿ ಜನರ ನಿವೃತ್ತಿ ನಿಧಿಯ ಹೂಡಿಕೆಯ ಬಗ್ಗೆ ಹಲವಾರು ಆರೋಪಗಳು ಕೇಳಿಬಂದಿದ್ದರೂ, ತನಿಖೆ ಏಕೆ ನಡೆಸಲಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಎಲ್‌ಐಸಿಯ ಬಂಡವಾಳ, ಅದಾನಿಗೆ!. ಎಸ್‌ಬಿಐ ಬಂಡವಾಳ, ಅದಾನಿಗೆ!. ಇಪಿಎಫ್‌ಒ ಬಂಡವಾಳವೂ ಅದಾನಿಗೆ! ‘ಮೋದಾನಿ’ ಬಹಿರಂಗಗೊಂಡ ನಂತರವೂ ಸಾರ್ವಜನಿಕರ ನಿವೃತ್ತಿ ಹಣವನ್ನು ಅದಾನಿ ಕಂಪನಿಗಳಲ್ಲಿ ಏಕೆ ಹೂಡಿಕೆ ಮಾಡಲಾಗುತ್ತಿದೆ?’ ಎಂದು ಕೇಳಿದ್ದಾರೆ.

‘ಪ್ರಧಾನ ಮಂತ್ರಿಗಳೇ, ತನಿಖೆ ಇಲ್ಲ, ಉತ್ತರವಿಲ್ಲ! ಇಷ್ಟೊಂದು ಭಯ ಯಾಕೆ ‘ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X