ಮೋದಿ ಉಪನಾಮ ಪ್ರಕರಣ; ಗುಜರಾತ್‌ ಹೈಕೋರ್ಟ್‌ಗೆ ರಾಹುಲ್‌ ಗಾಂಧಿ ಮೇಲ್ಮನವಿ

Date:

Advertisements
  • ಮೋದಿ ಉಪನಾಮ ಪ್ರಕರಣ; ಜೈಲು ಶಿಕ್ಷೆ ವಿಧಿಸಿದ್ದ ಗುಜರಾತ್‌ ಸೆಷನ್ಸ್ ನ್ಯಾಯಾಲಯ
  • ಮತ್ತೊಂದು ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ ತಡೆಯಾಜ್ಞೆ ನೀಡಿದ್ದ ಪಾಟ್ನಾ ಹೈಕೋರ್ಟ್

ಮೋದಿ ಉಪನಾಮ ಮಾನಹಾನಿ ಪ್ರಕರಣಕ್ಕೆ ತಡೆ ನೀಡಲು ಸೂರತ್‌ ಸೆಷನ್ಸ್‌ ನ್ಯಾಯಾಲಯ ತಿರಸ್ಕರಿಸಿದ ಹಿನ್ನೆಲೆ ಗುಜರಾತ್‌ ಹೈಕೋರ್ಟ್‌ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಿದ್ದಾರೆ.

ರಾಹುಲ್‌ ಗಾಂಧಿ ಸೂರತ್‌ ಸೆಷನ್ಸ್‌ ನ್ಯಾಯಾಲಯ ವಿಧಿಸಿರುವ ಜೈಲು ಶಿಕ್ಷೆಗೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದು, ಶಿಕ್ಷೆ ರದ್ದಾದರೆ ಸಂಸದ ಸ್ಥಾನ ಮರಳಿ ಬರಲು ಸಹಾಯವಾಗುತ್ತದೆ.

ಕ್ರಿಮಿನಲ್‌ ಮಾನಹಾನಿ ಪ್ರಕರಣ ದಾಖಲಿಸಿರುವುದರಿಂದ ರಾಹುಲ್‌ ಗಾಂಧಿ ಅವರಿಗೆ ಗರಿಷ್ಠ ಎರಡು ವರ್ಷ ಶಿಕ್ಷೆ ವಿಧಿಸಿರುವುದರಿಂದ ಕಳೆದ ತಿಂಗಳು ಅವರನ್ನು ಸಂಸದನ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು.

Advertisements

ವಿಚಾರಣಾ ನ್ಯಾಯಾಲಯವು ತನ್ನನ್ನು ಕಠೋರವಾಗಿ ನಡೆಸಿಕೊಂಡಿದೆ, ಸಂಸದನ ಸ್ಥಾನಮಾನದಿಂದ ತಾವು ಸಾರ್ವಜನಿಕವಾಗಿ ಹೆಚ್ಚು ಪ್ರಭಾವಿತವಾಗಿರುವುದಾಗಿ ರಾಹುಲ್ ಗಾಂಧಿ ಸೆಷನ್ಸ್‌ ನ್ಯಾಯಾಲಯಕ್ಕೆ ಸಲ್ಲಿಸಿದ ಮೇಲ್ಮನವಿಯಲ್ಲಿ ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ? ವಾಟರ್ ಮೆಟ್ರೋ | ದೇಶದ ಮೊದಲ ಜಲಸಾರಿಗೆಗೆ ಪ್ರಧಾನಿ ಮೋದಿ ಇಂದು ಚಾಲನೆ ; ಏನಿದರ ವಿಶೇಷ?

ಆದಾಗ್ಯೂ, ನ್ಯಾಯಾಧೀಶ ರಾಬಿನ್ ಮೊಂಗೇರಾ ರಾಹುಲ್‌ ಗಾಂಧಿಯವರ ಮೇಲ್ಮನವಿಯನ್ನು ಒಪ್ಪಲಿಲ್ಲ. ನೀವು ಲೋಕಸಭಾ ಸದಸ್ಯರಾಗಿದ್ದವರು ಹಾಗೂ ದೇಶದ ಎರಡನೇ ಅತಿ ದೊಡ್ಡ ರಾಜಕೀಯ ಪಕ್ಷವೊಂದರ ಅಧ್ಯಕ್ಷರೂ ಆಗಿದ್ದವರು. ಹೀಗಾಗಿ, ಪದಗಳನ್ನು ಬಳಸುವಾಗ ನೀವು (ರಾಹುಲ್) ಎಚ್ಚರದಿಂದ ಇರಬೇಕಿತ್ತು. ರಾಹುಲ್ ಅವರಂತಹ ವ್ಯಕ್ತಿಯಿಂದ ಸಭ್ಯ ನಡವಳಿಕೆಗೆ ಸಂಬಂಧಿಸಿ ಅಧಿಕ ನಿರೀಕ್ಷೆ ಇರುತ್ತದೆ. ಈ ಹಿನ್ನೆಲೆ ಕಾನೂನಿನಡಿ ಅವಕಾಶವಿರುವಷ್ಟು ಪ್ರಮಾಣದ ಶಿಕ್ಷೆಯನ್ನು ವಿಚಾರಣಾ ನ್ಯಾಯಾಲಯ ವಿಧಿಸಿದೆ’ ಎಂದು ತಿಳಿಸಿದ್ದರು.

ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮತ್ತೊಂದು ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿಗೆ ಪಾಟ್ನಾ ಹೈಕೋರ್ಟ್​ ಕೆಳ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.

ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿಯ ರಾಜ್ಯಸಭಾ ಸಂಸದ ಹಾಗೂ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ರಾಹುಲ್‌ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X