‘ರಾಹುಲ್‌ ಗಾಂಧಿ’ ಸರ್ವಾಧಿಕಾರ ವಿರುದ್ಧದ ಒಂದು ಕ್ರಾಂತಿ: ನವಜೋತ್‌ ಸಿಂಗ್‌ ಸಿಧು

Date:

  • 10 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನವಜೋತ್‌ ಸಿಂಗ್ ಸಿಧು
  • ಕಳೆದ ವರ್ಷ ಮೇ 20ರಂದು ಪಟಿಯಾಲ ನ್ಯಾಯಾಲಯಕ್ಕೆ ಶರಣಾಗಿದ್ದರು

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ದೇಶದಲ್ಲಿನ ಸರ್ವಾಧಿಕಾರದ ವಿರುದ್ಧದ ಒಂದು ಕ್ರಾಂತಿಯಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ನವಜೋತ್‌ ಸಿಂಗ್‌ ಸಿಧು ಶನಿವಾರ (ಏಪ್ರಿಲ್‌ 2) ಹೇಳಿದ್ದಾರೆ.

ರಸ್ತೆಯಲ್ಲಿ ರೋಷಾವೇಶ ತೋರಿದ 34 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಿಯಾಲ ಜೈಲು ಶಿಕ್ಷೆ ಅನುಭವಿಸಿದ 10 ತಿಂಗಳ ನಂತರ ಪಂಜಾಬ್‌ನ ಕಾಂಗ್ರೆಸ್‌ ನಾಯಕ ನವಜೋತ್‌ ಸಿಂಗ್‌ ಸಿಧು ಸನ್ನಡತೆಯ ಆಧಾರದಲ್ಲಿ ಶನಿವಾರ ಜೈಲಿನಿಂದ ಬಿಡುಗಡೆಯಾದರು.

ಜೈಲಿನಿಂದ ಹೊರಬಂದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನವಜೋತ್ ಸಿಂಗ್‌ ಸಿಧು, “ನನ್ನನ್ನು ಮಧ್ಯಾಹ್ನದ ವೇಳೆಗೆ ಬಿಡುಗಡೆ ಮಾಡಬೇಕಿತ್ತು. ಆದರೆ, ಜೈಲು ಅಧಿಕಾರಿಗಳು ತಡಮಾಡಿದ್ದಾರೆ. ಮಾಧ್ಯಮಗಳು ಹೊರಹೋಗಲೆಂದು ಅವರು ಕಾಯುತ್ತಿದ್ದರು” ಎಂದು ಸಿಧು ಆರೋಪಿಸಿದರು.

ತಾನು ಶನಿವಾರ ಮಧ್ಯಾಹ್ನ ಹೊತ್ತಿಗೆ ಬಿಡುಗಡೆಯಾಗುತ್ತೇನೆ. ಜೈಲಿನ ಹೊರಗೆ ಮಾಧ್ಯಮಗೋಷ್ಠಿ ನಡೆಸುತ್ತೇನೆ ಎಂದು ನವಜೋತ್‌ ಸಿಂಗ್ ಸಿಧು ಶುಕ್ರವಾರ ಹೇಳಿದ್ದರು.

ಈ ಸುದ್ದಿ ಓದಿದ್ದೀರಾ? ವೃತ್ತಿಯಲ್ಲಿ ಭಿಕ್ಷುಕನಾದರೂ ಪತ್ನಿ ಸಲಹುವುದು ಪತಿ ಕರ್ತವ್ಯ ಎಂದ ಪಂಜಾಬ್-ಹರಿಯಾಣ ಹೈಕೋರ್ಟ್

“ದೇಶದಲ್ಲಿ ಪ್ರಜಾಪ್ರಭುತ್ವ ಸರಪಳಿಗಳಲ್ಲಿ ಬಂಧಿಯಾಗಿದೆ. ಈ ದೇಶದಲ್ಲಿ ಸರ್ವಾಧಿಕಾರ ಬಂದಾಗಲೆಲ್ಲಾ ಒಂದು ಕ್ರಾಂತಿಯೂ ಬಂದಿದೆ. ಈ ಬಾರಿ ರಾಹುಲ್ ಗಾಂಧಿ ಅವರ ರೂಪದಲ್ಲಿ ಕ್ರಾಂತಿ ಆಗಮಿಸಿದೆ. ಅವರು ಕೇಂದ್ರ ಬಿಜೆಪಿ ಸರ್ಕಾರವನ್ನು ಸಮರ್ಥವಾಗಿ ಎದುರಿಸಲಿದ್ದಾರೆ” ಎಂದು ಹೇಳಿದ್ದಾರೆ.

ನವಜೋತ್ ಸಿಂಗ್ ಸಿಧು ಅವರು 1988ರಲ್ಲಿ ನಡೆಸಿದ್ದ ಹಲ್ಲೆಯಲ್ಲಿ 65 ವರ್ಷದ ಗುರ್ನಾಮ್ ಸಿಂಗ್ ಎಂಬುವವರು ಮೃತಪಟ್ಟಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೊರ್ಟ್, ಸಿಧು ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ಅನುಸಾರ ಸಿಧು ಅವರು ಕಳೆದ ವರ್ಷ ಮೇ 20ರಂದು ಪಟಿಯಾಲ ನ್ಯಾಯಾಲಯಕ್ಕೆ ಶರಣಾಗಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

3ನೇ ಕಂತಿಗಾಗಿ ಮತ್ತೆ ಬಂದ ಸುರ್ಜೇವಾಲ: ಸಿ ಟಿ ರವಿ ಆರೋಪ

ಕಾಂಗ್ರೆಸ್ ಯಾವಾಗಲೂ ಚುನಾವಣೆ ನಡೆಸುವುದೇ ಕಡೇ 3 ದಿನದಲ್ಲಿ ...

ಚಂದ್ರಬಾಬು ನಾಯ್ಡು ಜಾಮೀನು ಷರತ್ತು ಸಡಿಲಿಸಿದ ಸುಪ್ರೀಂ; ರ‍್ಯಾಲಿ, ಸಭೆಗಳಲ್ಲಿ ಭಾಗವಹಿಸಲು ಅನುಮತಿ

ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ಹಗರಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಷರತ್ತಾಗಿ ಸಾರ್ವಜನಿಕ...