ರಾಹುಲ್ ಜನಪ್ರಿಯ ನಾಯಕ, ಪ್ರಧಾನಿ ಯಾರಾಗಬೇಕೆಂಬ ಭಿನ್ನಾಭಿಪ್ರಾಯವಿಲ್ಲ: ಸಂಜಯ್ ರಾವತ್

Date:

“ರಾಹುಲ್ ಗಾಂಧಿ ಜನಪ್ರಿಯ ನಾಯಕರಾಗಿದ್ದು ಇಂಡಿಯಾ ಒಕ್ಕೂಟದಲ್ಲಿ ಮುಂದಿನ ಪ್ರಧಾನಿ ಯಾರಾಗಬೇಕೆಂದ ವಿಚಾರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ” ಎಂದು ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವತ್ ಹೇಳಿದ್ದಾರೆ.

ಇಂಡಿಯಾ ಒಕ್ಕೂಟ ಸರ್ಕಾರ ರಚಿಸುವುದಾದರೆ ರಾಹುಲ್ ಗಾಂಧಿ ಪ್ರಧಾನಿಯಾಗಬಹುದೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಂಜಯ್ ರಾವತ್, “ರಾಹುಲ್ ಗಾಂಧಿ ನಾಯಕತ್ವವನ್ನು ಒಪ್ಪಿಕೊಳ್ಳಲು ಸಿದ್ಧರಿದ್ದರೆ, ನಾವು ಏಕೆ ವಿರೋಧಿಸುತ್ತೇವೆ” ಎಂದು ಪ್ರಶ್ನಿಸಿದರು.

ಹಾಗೆಯೇ, “ರಾಹುಲ್ ಗಾಂಧಿ ರಾಷ್ಟ್ರೀಯ ನಾಯಕ ಮತ್ತು ತಮ್ಮನ್ನು ತಾವು ಸಾಬೀತುಪಡಿಸಿದ್ದಾರೆ. ಜನಪ್ರಿಯ ನಾಯಕರಾಗಿದ್ದಾರೆ, ನಾವೆಲ್ಲರೂ ಅವರನ್ನು ಪ್ರೀತಿಸುತ್ತೇವೆ. ಇಂಡಿಯಾ ಒಕ್ಕೂಟದಲ್ಲಿ ಮುಂದಿನ ಪ್ರಧಾನಿ ಬಗ್ಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ” ಎಂದು ಸ್ಪಷ್ಟಪಡಿಸಿದರು.

ಇದನ್ನು ಓದಿದ್ದೀರಾ?  ‘ಇಂಡಿಯಾ’ ಮೈತ್ರಿಕೂಟ ಸಭೆಯಲ್ಲಿ ಪ್ರಧಾನಿ ಅಭ್ಯರ್ಥಿ ನಿರ್ಧರಿಸುತ್ತದೆ: ಉದ್ಧವ್ ಠಾಕ್ರೆ

“ಬಿಜೆಪಿಗೆ ಬಹುಮತ ಲಭ್ಯವಾಗಿಲ್ಲ. 235-240 ಸೀಟುಗಳಲ್ಲಷ್ಟೆ ಬಿಜೆಪಿ ಗೆಲುವು ಕಂಡಿದೆ. ಅವರು ಮೋದಿ ಸರ್ಕಾರವನ್ನು ಆರಂಭಿಸುವ ಬಗ್ಗೆ ಮಾತನಾಡುತ್ತಿದ್ದರು. ಆದರೆ ಮೋದಿ ಸರ್ಕಾರ ಎಲ್ಲಿ” ಎಂದು ಲೇವಡಿ ಮಾಡಿದರು.

“ಎನ್‌ಡಿಎ ಸರ್ಕಾರ ರಚನೆಯಾದರೂ ಕೂಡಾ ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಕುಮಾರ್ ಎಂಬ ಎರಡು ಸ್ತಂಭಗಳ ಬಲದಿಂದ ರಚಿಸಬೇಕಾಗುತ್ತದೆ. ಆ ಸ್ತಂಭ ಯಾವಾಗ ಬೇಕಾದರೂ ಕುಸಿಯಬಹುದು. ಬಿಜೆಪಿ ತನ್ನ ಗೌರವವನ್ನೇ ಕಳೆದುಕೊಂಡಿದೆ. ಗೌರವವನ್ನು ಕಳೆದುಕೊಂಡ ಪ್ರಧಾನಿ ನಮಗೆ ಬೇಕಾಗಿಲ್ಲ. ಮೋದಿ ಬ್ರ್ಯಾಂಡ್‌ ಅಂತ್ಯವಾಗಿದೆ” ಎಂದು ಹೇಳಿದರು.

“ಇಡಿ, ಸಿಬಿಐ, ಐಟಿ ಕಾರಣದಿಂದಾಗಿ ಬಿಜೆಪಿ ಗೆಲುವು ಕಂಡಿದೆ. ಅವರು ಸರ್ಕಾರ ರಚಿಸುವುದಾದರೆ ರಚಿಸಲಿ. ಇದು ಪ್ರಜಾಪ್ರಭುತ್ವ, ನಾವು ಆ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಸರ್ಕಾರ ರಚಿಸುವ ಅಧಿಕಾರ ಅವರಿಗಿದೆ” ಎಂದರು.

ಇದನ್ನು ಓದಿದ್ದೀರಾ?  ಕಾರ್ಯತಂತ್ರ ರೂಪಿಸಲು ಎನ್‌ಡಿಎ, ಇಂಡಿಯಾ ಒಕ್ಕೂಟ ಸಜ್ಜು

ಹಾಗೆಯೇ “ನಮಗೆ ಬೇಕಾದಷ್ಟು ಸ್ಥಾನವಿದೆ. ನಮ್ಮನ್ನು ಜನರು 250 ಕ್ಷೇತ್ರದಲ್ಲಿ ಗೆಲ್ಲಿಸಿದ್ದಾರೆ. ಸರ್ಕಾರ ರಚಿಸುವ ಅಧಿಕಾರ ನಮಗಿದೆ. ಪ್ರಜಾಪ್ರಭುತ್ವದ ಜೊತೆ ನಿಲ್ಲಬೇಕೇ ಅಥವಾ ಸರ್ವಾಧಿಕಾರದ ಪರವಾಗಿ ನಿಲ್ಲಬೇಕೆ ಎಂಬುವುದನ್ನು ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಕುಮಾರ್ ನಿರ್ಧರಿಸಬೇಕು” ಎಂದು ತಿಳಿಸಿದರು.

ಇನ್ನು ಚಂದ್ರ ಬಾಬು ನಾಯ್ಡು ಈಗಾಗಲೇ ಎನ್‌ಡಿಎ ಪರವಾಗಿದ್ದೇವೆ ಎಂದು ಘೋಷಣೆ ಮಾಡಿದ್ದು, ಸ್ಪೀಕರ್ ಸ್ಥಾನಕ್ಕೆ ಬೇಡಿಕೆಯಿಟ್ಟಿದ್ದಾರೆ ಎನ್ನಲಾಗಿದೆ. ಆದರೆ ಎನ್‌ಡಿಎ ಸೇರುವುದೋ ಇಂಡಿಯಾ ಕೂಟ ಸೇರುವುದೋ ಎಂಬ ಬಗ್ಗೆ ನಿತೀಶ್ ಕುಮಾರ್ ಈವರೆಗೂ ನಿರ್ಧಾರ ಮಾಡಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ರಾಹುಲ್ ಗಾಂಧಿಯವರನ್ನು ‘ ಮೂರ್ಖರ ನಾಯಕ ‘ ಎಂದು ಝರಿದ ಮೋದಿಗೆ ಜನರೇ ಸರಿಯಾದ ಪ್ರತ್ಯುತ್ತರ ನೀಡಿದ್ದಾರೆ.
    ವಾರಣಾಸಿಯ ಜನರು ಮೋದಿ ಅವರನ್ನು ಮತ್ತೊಮ್ಮೆ ಚುನಾಯಿಸಿದ್ದಾರೆ, ಬಹಳ ಕಡಿಮೆ ಅಂತರದಿಂದ !

    ರಾಯಬರೇಲಿ ಹಾಗೂ ವಯನಾಡ್ ಕ್ಷೇತ್ರಗಳಿಂದ ರಾಹುಲ್ ಗಾಂಧಿ ಗೆದ್ದು ಬಂದಿದ್ದಾರೆ , ಭಾರಿ ಬಹುಮತದಿಂದ !

    ದೇಶಕ್ಕೆ ಒಬ್ಬನೇ ಪ್ರಧಾನಿ ನಿಜ , ಅದರೆ ನೀವೊಬ್ಬರೇ ದೇಶದ ನಾಯಕನಲ್ಲ !

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಒಪ್ಪಿಗೆ

ರಾಜ್ಯದಲ್ಲಿ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟವು ಒಪ್ಪಿಗೆ ನೀಡಿದೆ. ಶೀಘ್ರವೇ...

ಶಕ್ತಿ ಯೋಜನೆಗೆ 2 ವರ್ಷ: 474.82 ಕೋಟಿ ಮಹಿಳೆಯರ ಉಚಿತ ಪ್ರಯಾಣ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಶಕ್ತಿ ಯೊಜನೆ'...

ಪತ್ನಿಗೆ ವಿವಾಹೇತರ ಸಂಬಂಧವಿದೆ ಎಂಬ ಶಂಕೆ; ನಾಲ್ವರು ಮಕ್ಕಳೊಂದಿಗೆ ಪತಿ ಆತ್ಮಹತ್ಯೆ

ತನ್ನ ಪತ್ನಿಯು ವಿವಾಹೇತರ ಸಂಬಂಧ ಹೊಂದಿರಬಹುದು ಎಂದು ಅನುಮಾನಗೊಂಡಿದ್ದ ವ್ಯಕ್ತಿಯೊಬ್ಬ ತಮ್ಮ...

Download Eedina App Android / iOS

X