ಜಮ್ಮು ಕಾಶ್ಮೀರ ಉಗ್ರ ದಾಳಿ ಬಗ್ಗೆ ಪ್ರಧಾನಿ ಮೋದಿ ‘ಮೌನ’ ಪ್ರಶ್ನಿಸಿದ ರಾಹುಲ್ ಗಾಂಧಿ

Date:

Advertisements

ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರವಾಗಿ ಉಗ್ರ ದಾಳಿಗಳು ನಡೆಯುತ್ತಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವನ್ನು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ತನಗೆ ಬಂದ ಅಭಿನಂದನಾ ಸಂದೇಶಗಳಿಗೆ ಉತ್ತರಿಸುವುದರಲ್ಲಿ ನಿರತರಾಗಿರುವ ನರೇಂದ್ರ ಮೋದಿ ಅವರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭೀಕರವಾಗಿ ಹತ್ಯೆಯಾದ ಭಕ್ತರ ಕುಟುಂಬಗಳ ಕಿರುಚಾಟವೂ ಕೇಳಿಸುತ್ತಿಲ್ಲ” ಎಂದು ಮೋದಿಯನ್ನು ಕುಟುಕಿದ್ದಾರೆ.

“ರಿಯಾಸಿ, ಕಥುವಾ ಮತ್ತು ದೋಡಾದಲ್ಲಿ ಕಳೆದ 3 ದಿನಗಳಲ್ಲಿ 3 ಪ್ರತ್ಯೇಕ ಭಯೋತ್ಪಾದಕ ದಾಳಿ ಘಟನೆಗಳು ನಡೆದಿವೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮಾತ್ರ ಇನ್ನೂ ಸಂಭ್ರಮಾಚರಣೆಯಲ್ಲಿ ಮುಳುಗಿದ್ದಾರೆ” ಎಂದು ರಾಹುಲ್ ಟೀಕಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ?  ಜಮ್ಮು ಕಾಶ್ಮೀರ | ಉಗ್ರರ ಎನ್‌ಕೌಂಟರ್‌; ಸಿಆರ್‌ಪಿಎಫ್ ಯೋಧ ಹುತಾತ್ಮ, ಆರು ಭದ್ರತಾ ಸಿಬ್ಬಂದಿಗಳಿಗೆ ಗಾಯ

“ಬಿಜೆಪಿ ಸರ್ಕಾರದಲ್ಲಿ ಭಯೋತ್ಪಾದಕ ದಾಳಿಗಳನ್ನು ಯೋಜಿಸುತ್ತಿರುವವರು ಏಕೆ ಸಿಕ್ಕಿ ಬೀಳುವುದಿಲ್ಲ ಎಂದು ದೇಶವು ಉತ್ತರವನ್ನು ಕೇಳುತ್ತಿದೆ” ಎಂದು ಹೇಳಿದ್ದಾರೆ.


ಇನ್ನು ಕಾಂಗ್ರೆಸ್ ನಾಯಕ ಮತ್ತು ಮಾಧ್ಯಮ, ಪ್ರಚಾರ ವಿಭಾಗದ ಉಸ್ತುವಾರಿ ಪವನ್ ಖೇರಾ ಕೂಡಾ ಪ್ರಧಾನಿ ಮೋದಿ ಮೌನವನ್ನು ಪ್ರಶ್ನಿಸಿದ್ದಾರೆ. “ಪಾಕಿಸ್ತಾನಿ ನಾಯಕರ ಶುಭಾಶಯಕ್ಕೆ ಪ್ರತಿಕ್ರಿಯಿಸಲು ಪ್ರಧಾನಿ ಮೋದಿ ಅವರಿಗೆ ಸಮಯವಿದೆ, ಆದರೆ ಕ್ರೂರ ಭಯೋತ್ಪಾದಕ ದಾಳಿಯನ್ನು ಖಂಡಿಸಲು ಸಮಯವಿಲ್ಲ” ಎಂದಿದ್ದಾರೆ.

ಇದನ್ನು ಓದಿದ್ದೀರಾ?  ರಿಯಾಸಿ ದಾಳಿ| ಉಗ್ರರು 20 ನಿಮಿಷಗಳ ಕಾಲ ಗುಂಡು ಹಾರಿಸಿದ್ದರು: ಮಾಜಿ ಸರಪಂಚ್

“ಜಮ್ಮು ಮತ್ತು ಕಾಶ್ಮೀರವನ್ನು ಶಾಂತಿ ಮತ್ತು ಸಹಜ ಸ್ಥಿತಿಗೆ ತರುವ ಬಿಜೆಪಿಯ ಪೊಳ್ಳು ಹೇಳಿಕೆಗಳನ್ನು ಸಂಪೂರ್ಣವಾಗಿ ಬಹಿರಂಗಗೊಂಡಿದೆ. ಕಾಶ್ಮೀರ ಕಣಿವೆಯಲ್ಲಿ ಚುನಾವಣೆ ಎದುರಿಸಲು ಬಿಜೆಪಿ ತಲೆಕೆಡಿಸಿಕೊಳ್ಳದಿರುವುದು ಅವರ ‘ನಯಾ ಕಾಶ್ಮೀರ’ ಎಂಬುದಕ್ಕೆ ಸಾಕ್ಷಿಯಾಗಿದೆ. ಅವರ ನೀತಿಯು ಹೀನಾಯವಾಗಿ ವಿಫಲವಾಗಿದೆ” ಎಂದು ಟೀಕಿಸಿದ್ದಾರೆ.

“2016ರಲ್ಲಿ ನಡೆದ ಪಠಾಣ್‌ಕೋಟ್‌ ದಾಳಿಯ ತನಿಖೆಗೆ ಮೋದಿ ಸರ್ಕಾರ ದರೋಡೆಕೋರ ಐಎಸ್‌ಐಗೆ ಆಹ್ವಾನ ನೀಡಿದ್ದು ನಿಜವಲ್ಲವೇ” ಎಂದು ಖೇರಾ ಪ್ರಶ್ನಿಸಿದ್ದಾರೆ.

“ಜಮ್ಮು ಕಾಶ್ಮೀರದಲ್ಲಿ 2,262 ಭಯೋತ್ಪಾದಕ ದಾಳಿಗಳು ನಡೆದಾಗಲೂ ಮೋದಿ ಸರ್ಕಾರವು ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟುಮಾಡಿದೆ. ಈ ದಾಳಿಯಲ್ಲಿ 363 ನಾಗರಿಕರು ಸಾವನ್ನಪ್ಪಿದರು ಮತ್ತು 596 ಯೋಧರು ಹುತಾತ್ಮರಾಗಿದ್ದಾರೆ” ಎಂದು ಖೇರಾ ಅಂಕಿ ಅಂಶ ಸಮೇತ ಮೋದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನು ಓದಿದ್ದೀರಾ?  ರಿಯಾಸಿ ಉಗ್ರ ದಾಳಿ | ಸಂತ್ರಸ್ತರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ, ಉದ್ಯೋಗ ಘೋಷಿಸಿದ ರಾಜಸ್ಥಾನ ಸರ್ಕಾರ


ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರವಾಗಿ ಉಗ್ರ ದಾಳಿಗಳು ನಡೆಯುತ್ತಿದೆ. ಇಂದು ಮುಂಜಾನೆಯಷ್ಟೆ ದೋಡಾದಲ್ಲಿ ಮತ್ತೆ ಉಗ್ರರು ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ. ಇದರಲ್ಲಿ ಪೊಲೀಸ್ ಸಿಬ್ಬಂದಿಯೋರ್ವರು ಗಾಯಗೊಂಡಿದ್ದಾರೆ. ಇನ್ನು ಬುಧವಾರ ಅವಳಿ ಗಡಿ ಜಿಲ್ಲೆಗಳಾದ ರಾಜೌರಿ ಮತ್ತು ಪೂಂಚ್‌ನಲ್ಲಿ ಭಯೋತ್ಪಾದಕ ದಾಳಿಗಳು ನಡೆದಿದೆ.

ಇನ್ನು ಶಿವ ಖೋರಿ ದೇವಸ್ಥಾನದಿಂದ ಕತ್ರಾಕ್ಕೆ ಸಾಗುತ್ತಿದ್ದ ಯಾತ್ರಾರ್ಥಿಗಳು ತುಂಬಿದ್ದ ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು ಬಸ್ ಕಮರಿಗೆ ಉರುಳಿದೆ. ಇದರಿಂದಾಗಿ ಕನಿಷ್ಠ 9 ಮಂದಿ ಸಾವನ್ನಪ್ಪಿದ್ದಾರೆ. 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X