ಮೋದಿ ‘ಚಂದಾ ದಂಧೆ’; ನಿಜ ಮುಖ ಮುಚ್ಚಿಡಲು ಕೊನೆಯ ಪ್ರಯತ್ನ ಎಂದ ರಾಹುಲ್ ಗಾಂಧಿ

Date:

Advertisements

ಚುನಾವಣಾ ಬಾಂಡ್ ವಿಚಾರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನಿಲುವನ್ನು ಪ್ರಶ್ನಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಎಸ್‌ಬಿಐ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.

“ಮಾಹಿತಿಯನ್ನು ಹಂಚಿಕೊಳ್ಳಲು ಹಿಂಜರಿಯುತ್ತಿರುವ ಎಸ್‌ಬಿಐ, ಪ್ರಧಾನಿ ನರೇಂದ್ರ ಮೋದಿಯವರ ನಿಜವಾದ ಮುಖವನ್ನು ಮುಚ್ಚಿಡಲು ಮಾಡಲಾಗುತ್ತಿರುವ ಕೊನೆಯ ಪ್ರಯತ್ನ ಇದಾಗಿರುವಂತಿದೆ” ಎಂದು ಆರೋಪಿಸಿದ್ದಾರೆ. ಮಾಹಿತಿ ತಿಳಿಯವುದು ಜನರ ಹಕ್ಕು ಎಂದು ವಾದಿಸಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ನರೇಂದ್ರ ಮೋದಿಯವರು ತಮ್ಮ ‘ಚಂದಾ ದಂಧೆ’ಯನ್ನು ಮರೆಮಾಚಲು ಶತಪ್ರಯತ್ನ ನಡೆಸಿದ್ದಾರೆ, ನಡೆಸುತ್ತಿದ್ದಾರೆ. ಚುನಾವಣಾ ಬಾಂಡ್‌ಗಳ ಬಗ್ಗೆ ಸತ್ಯವನ್ನು ತಿಳಿದುಕೊಳ್ಳುವುದು ದೇಶವಾಸಿಗಳ ಹಕ್ಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹಾಗಿರುವಾಗ ಎಸ್‌ಬಿಐ ಈ ಮಾಹಿತಿಯನ್ನು ಚುನಾವಣೆಯ ಮೊದಲು ಸಾರ್ವಜನಿಕಗೊಳಿಸಲಾಗದು ಎಂದು ಹೇಳುವುದೇಕೆ,” ಎಂದು ಪ್ರಶ್ನಿಸಿದ್ದಾರೆ.

Advertisements

“ಒಂದೇ ಕ್ಲಿಕ್‌ನಲ್ಲಿ ಎಲ್ಲಾ ಮಾಹಿತಿಯನ್ನು ಪಡೆಯಬಹುದು, ಆದರೆ ಮಾಹಿತಿ ನೀಡಲು ಜೂನ್ 30 ರವರೆಗೆ ಎಸ್‌ಬಿಐ ಸಮಯ ಕೇಳಿದೆ. ಇದನ್ನು ನೋಡಿದಾಗ ಇಲ್ಲಿ ಏನೋ ಒಂದು ಸಮಸ್ಯೆ ಇದೆ ಅನಿಸಲ್ಲ, ಇಲ್ಲೆರುವುದೆಲ್ಲವೂ ಸಮಸ್ಯೆ ಎಂದು ಅರ್ಥವಾಗುತ್ತದೆ,” ಎಂದು ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.

“ದೇಶದ ಪ್ರತಿಯೊಂದು ಸ್ವತಂತ್ರ ಸಂಘಟನೆಗಳು ಮೋದಿ ಕುಟುಂಬಕ್ಕೆ ಸೇರುವ ಮೂಲಕ ತಮ್ಮ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಪ್ರಯತ್ನ ಮಾಡುತ್ತಿದೆ. ಚುನಾವಣೆಗೂ ಮುನ್ನವೇ ಮೋದಿಯ ‘ನಿಜ ಮುಖ’ ಮರೆಮಾಚುವ ‘ಕೊನೆಯ ಪ್ರಯತ್ನ’ ಇದಾಗಿದೆ,” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಐದು ವರ್ಷದಲ್ಲಿ 22217 ಚುನಾವಣಾ ಬಾಂಡ್

ಚುನಾವಣಾ ಬಾಂಡ್‌ಗಳ ವಿವರವನ್ನು ಎಸ್‌ಬಿಐ ಚುನಾವಣಾ ಆಯೋಗಕ್ಕೆ ನೀಡಬೇಕು ಎಂದು ಈ ಹಿಂದೆ ಸುಪ್ರೀಂ ಕೋರ್ಟ್ ತಿಳಿಸಿತ್ತು. ಪ್ರತಿ ಬಾಂಡ್‌ ಖರೀದಿಯ ದಿನ, ತಿಂಗಳು, ಖರೀದಿ ಮಾಡಿದವರ ವಿವರ, ಮೊತ್ತ ಎಲ್ಲ ಮಾಹಿತಿ ನೀಡಬೇಕು ಎಂದು ಎಸ್‌ಬಿಐಗೆ ಸುಪ್ರೀಂ ಸೂಚನೆ ನೀಡಿತ್ತು. ಮಾರ್ಚ್ 13ರ ಒಳಗಾಗಿ ಎಲ್ಲ ವಿವರವನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ತಿಳಿಸಲಾಗಿತ್ತು.

ಈ ನಿಟ್ಟಿನಲ್ಲಿ ಎಸ್‌ಬಿಐ ಕಳೆದ ಐದು ವರ್ಷಗಳ ಅವಧಿಯುಲ್ಲಿ ದೇಶದಲ್ಲಿ 22217 ಚುನಾವಣಾ ಬಾಂಡ್‌ಗಳನ್ನು ವಿವಿಧ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಲು ಬಳಸಲಾಗಿದೆ ಎಂದು ಬಹಿರಂಗಪಡಿಸಿದೆ. ಆದರೆ ಎಲ್ಲ ಮಾಹಿತಿ ನೀಡಲು ಅವಕಾಶವನ್ನು ಜೂನ್ 30ರವರೆಗೆ ವಿಸ್ತರಿಸಲು ಮನವಿ ಮಾಡಿದೆ.

ಎಸ್‌ಬಿಐನ ಈ ಮನವಿಯನ್ನು ವಿಪಕ್ಷಗಳು ಪ್ರಶ್ನಿಸಿದೆ. ಎಸ್‌ಬಿಐನ ಈ ನಡೆ ಅನುಮಾನ ಹುಟ್ಟಿಸಿದೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಟ್ವೀಟ್ ಮಾಡಿದ್ದಾರೆ. ಮೋದಿ ಮತ್ತು ಬಿಜೆಪಿಯನ್ನು ರಕ್ಷಿಸಲೆಂದೆ ಸಾರ್ವತ್ರಿಕ ಚುನಾವಣೆ ಆಗುವವರೆಗೂ ಅವಧಿ ವಿಸ್ತರಣೆಗೆ ಎಸ್‌ಬಿಐ ಮನವಿ ಮಾಡಿದೆ ಎಂದು ಆರೋಪಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X