ಲೋಕಸಭೆಯ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ

Date:

Advertisements

18ನೇ ಲೋಕಸಭೆಯ ವಿಪಕ್ಷ ನಾಯಕನಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಯ್ಕೆಯಾಗಿರುವುದಾಗಿ ವರದಿಯಾಗಿದೆ.

ದೆಹಲಿಯಲ್ಲಿ ಇತ್ತೀಚೆಗೆ ಕಾಂಗ್ರೆಸ್‌ನ ನೀತಿ ನಿರ್ಧಾರಗಳನ್ನು ಕೈಗೊಳ್ಳುವ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿತ್ತು. ಈ ಸಭೆಯ ಬಳಿಕ ಮಾತನಾಡಿದ್ದ ಎಐಸಿಸಿ ಸಂಘಟನಾ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, “ಲೋಕಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳುವಂತೆ ಸರ್ವಾನುಮತದಿಂದ ರಾಹುಲ್ ಗಾಂಧಿಯವರಿಗೆ ಮನವಿ ಮಾಡಲಾಗಿದೆ” ಎಂದು ತಿಳಿಸಿದ್ದರು.

ಇಂದು(ಜೂನ್ 25) ಕೂಡ ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ನಡೆಸಲಾಗಿತ್ತು. ಈ ಸಭೆಯ ಬಳಿಕ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, “ಉತ್ತರ ಪ್ರದೇಶದ ರಾಯ್‌ಬರೇಲಿಯ ಸಂಸದರಾಗಿರುವ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ವಿಪಕ್ಷ ನಾಯಕನಾಗಿ ನೇಮಿಸಲಾಗಿದೆ. ಈ ಬಗ್ಗೆ ಹಂಗಾಮಿ ಸ್ಪೀಕರ್ ಭತೃಹರಿ ಮಹತಾಬ್ ಅವರಿಗೆ ಮಾಹಿತಿ ನೀಡಲಾಗುವುದು” ಎಂದು ತಿಳಿಸಿದ್ದಾರೆ.

Advertisements

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ‘ಪಪ್ಪು’ ಎಂದು ಗೇಲಿ ಮಾಡಿದರು. ‘ಮೂರ್ಖರ’ ನಾಯಕ ಎಂದು ಕರೆದರು. ಲೋಕಸಭಾ ಸದಸ್ಯತ್ವವನ್ನು ರದ್ದು ಮಾಡಿದರು. ಮನೆಯನ್ನು ಖಾಲಿ ಮಾಡಿಸಿದರು. ಹೆದರಲಿಲ್ಲ – ಜಗ್ಗಲಿಲ್ಲ – ಅಂಜಲಿಲ್ಲ !

    ಭಾರತ್ ಜೋಡೋ ಯಾತ್ರೆ , ಭಾರತ್ ನ್ಯಾಯ ಯಾತ್ರೆ ಕೈಗೊಂಡರು. ದೇಶದ ಉದ್ದಗಲಕ್ಕೂ ಪ್ರೀತಿಯ ಸಂದೇಶವನ್ನು ಸಾರಿದರು. ಬಡವರನ್ನು ಅಪ್ಪಿದರು. ಕಷ್ಟದಲ್ಲಿರುವವರಿಗೆ ಧೈರ್ಯ ತುಂಬಿದರು. ಜನರನ್ನು ಒಂದುಗೂಡಿಸಿದರು. ಕೋಟ್ಯಂತರ ಜನರ ಹೃದಯವನ್ನು ಗೆದ್ದರು.

    ಚುನಾವಣೆಯನ್ನು ಎದುರಿಸಿದರು. ಎರಡೂ ಕ್ಷೇತ್ರಗಳಲ್ಲಿ ಅದ್ಭುತವಾದ ವಿಜಯವನ್ನು ಸಾಧಿಸಿದರು. ರಾಯ್ ಬರೇಲಿಯ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪಪ್ಪು ಎಂದು ಕರೆಯಲ್ಪಟ್ಟ , ಮೂರ್ಖರ ನಾಯಕ ಎಂದು ಝರಿಯಲ್ಪಟ್ಟ ಜನ ನಾಯಕ ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕನಾಗುವ ಮೂಲಕ ತಾನು ಯಾರೆಂಬುದನ್ನು ಮೋದಿ ಹಾಗೂ ಅವರ ಅಂಧಾಭಿಮಾನಿಗಳಿಗೆ ತೋರಿಸಿಕೊಟ್ಟಿದ್ದಾರೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X