ಹರಿಯಾಣ | ಸೋನಿಪತ್‌ಗೆ ರಾಹುಲ್ ಗಾಂಧಿ ಭೇಟಿ, ರೈತರೊಂದಿಗೆ ಭತ್ತ ನಾಟಿ, ಟ್ರ್ಯಾಕ್ಟರ್ ಚಾಲನೆ

Date:

Advertisements
  • ಬರೊಡಾ, ಮದೀನಾಗಳಲ್ಲಿನ ಗ್ರಾಮಗಳ ರೈತರ ಜೊತೆ ರಾಹುಲ್ ಬಿತ್ತನೆ
  • ಮೇನಲ್ಲಿ ದೆಹಲಿ-ಚಂಡೀಗಢ ಹೆದ್ದಾರಿಯಲ್ಲಿ ಚಾಲಕರ ಜೊತೆ ಟ್ರಕ್‌ನಲ್ಲಿ ಪ್ರಯಾಣಿಸಿದ್ದ ರಾಹುಲ್

ಹರಿಯಾಣದ ಸೋನಿಪತ್ ಜಿಲ್ಲೆಗೆ ಶನಿವಾರ (ಜುಲೈ 8) ಬೆಳಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದಿಢೀರ್ ಭೇಟಿ ನೀಡಿದ್ದು ಗ್ರಾಮಸ್ಥರನ್ನು ಭೇಟಿಯಾಗಿ ರೈತರೊಂದಿಗೆ ಸಂವಾದ ನಡೆಸಿದ್ದಾರೆ.

ಇದೇ ವೇಳೆ ರೈತರ ಜೊತೆ ಗದ್ದೆಯಲ್ಲಿ ಬಿತ್ತನೆ ಮಾಡುವ ಪ್ರಕ್ರಿಯೆಗೆ ಕೈಜೋಡಿಸಿದ್ದಾರೆ. ಗದ್ದೆಯಲ್ಲಿ ಟ್ರ್ಯಾಕ್ಟರ್ ಚಾಲನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ರಾಹುಲ್ ಗಾಂಧಿ ಅವರು ದೆಹಲಿಯಿಂದ ಶಿಮ್ಲಾಗೆ ತೆರಳುತ್ತಿದ್ದ ಮಾರ್ಗದಲ್ಲಿ ಬರೋಡಾದ ನಾನಾ ಗ್ರಾಮಗಳ ರೈತರನ್ನು ಭೇಟಿಯಾಗಿದ್ದಾರೆ.

Advertisements

ಸೋನಿಪತ್‌ಗೆ ಭೇಟಿ ನೀಡಿರುವ ರಾಹುಲ್‌ ಅವರು ಬರೋಡಾ ಮತ್ತು ಮದೀನಾಗಳಲ್ಲಿನ ಗದ್ದೆಗಳಲ್ಲಿ ರೈತರೊಂದಿಗೆ ಕೃಷಿ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಜಗಬೀರ್ ಸಿಂಗ್ ಮಲಿಕ್ ತಿಳಿಸಿದ್ದಾರೆ.

ರಾಹುಲ್ ಅವರು ಟ್ರ್ಯಾಕ್ಟರ್ ಚಾಲನೆ ಮಾಡುತ್ತಿರುವುದು, ಬಿತ್ತನೆ ಮಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರೈತರ ಜತೆ ಸೇರಿ ರಾಹುಲ್ ಅವರು ಬಿತ್ತನೆ ಹಾಗೂ ಟ್ರ್ಯಾಕ್ಟರ್ ಚಾಲನೆ ಮಾಡುತ್ತಿರುವ ಫೋಟೋಗಳನ್ನು ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.

ಈ ಸುದ್ದಿ ಓದಿದ್ದೀರಾ? ಒಂದೇ ದಿನ 5 ಕೋಟಿ ದಾಟಿದ ಮೆಟಾದ ‘ಥ್ರೆಡ್ಸ್’ ಬಳಕೆದಾರರು | ಟ್ವಿಟರ್‌ನಿಂದ ಬೆದರಿಕೆ

ಕಳೆದ ಮೇನಲ್ಲಿ ಟ್ರಕ್ ಚಾಲಕರ ಸಮಸ್ಯೆಗಳನ್ನು ಅರಿತುಕೊಳ್ಳಲು ರಾಹುಲ್ ಗಾಂಧಿ ದೆಹಲಿಯಿಂದ ಚಂಡೀಗಢಕ್ಕೆ ಟ್ರಕ್‌ನಲ್ಲಿ ಪ್ರಯಾಣಿಸಿದ್ದರು.

ಭಾರತ್ ಜೋಡೋ ಯಾತ್ರೆ ವೇಳೆಯೂ ರಾಹುಲ್ ಅವರು ಮಾರ್ಗಮಧ್ಯದಲ್ಲಿ ಅನೇಕ ಜನರ ಜತೆ ಸಂವಾದ ನಡೆಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

Download Eedina App Android / iOS

X