ರಾಹುಲ್‌ ಗಾಂಧಿ ಅನರ್ಹತೆಗೊಳಿಸಿ ಸ್ವತಃ ಗೋಲು ಹೊಡೆದುಕೊಂಡ ಬಿಜೆಪಿ; ಶಶಿ ತರೂರ್

Date:

  • ರಾಹುಲ್‌ ಗಾಂಧಿ ಅನರ್ಹಗೊಳಿಸಿದ ಲೋಕಸಭೆ ಕಾರ್ಯಾಲಯ
  • 2019ರ ಪ್ರಕರಣದಲ್ಲಿ ರಾಹುಲ್‌ ತಪ್ಪಿತಸ್ಥ ಎಂದ ಸೂರತ್‌ ಕೋರ್ಟ್‌

ಲೋಕಸಭೆ ಸದಸ್ಯತ್ವದಿಂದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಅನರ್ಹತೆ ಬಗ್ಗೆ ಹಿರಿಯ ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಕಿಡಿಕಾರಿದ್ದಾರೆ.

ರಾಹುಲ್‌ ಗಾಂಧಿ ಅವರ ಅನರ್ಹತೆ ವಿಚಾರ ಬಿಜೆಪಿಯು ಸ್ವತಃ ತಾನೇ ಗೋಲು ಹೊಡೆದುಕೊಂಡಂತಿದೆ ಎಂದು ಶಶಿ ತರೂರ್‌ ಅಣಕವಾಡಿದ್ದಾರೆ.

ತಿರುವನಂತಪುರದಲ್ಲಿ ಸುದ್ದಿಸಂಸ್ಥೆ ಜೊತೆ ಮಾತನಾಡಿದ ತರೂರ್‌, “ಲೋಕಸಭೆ ಕಾರ್ಯಾಲಯದ ಕ್ರಮ ಸರಿಯಿಲ್ಲ. ಅಂತಿಮವಾಗಿ ರಾಹುಲ್‌ ಗಾಂಧಿ ಹಾಗೂ ಪ್ರತಿಪಕ್ಷಗಳಿಗೆ ಇದರಿಂದ ಪ್ರಯೋಜನವಾಗಲಿದೆ” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಇದು ಜಾಗತಿಕವಾಗಿ ಭಾರತದ ಪ್ರಜಾಪ್ರಭುತ್ವವನ್ನು ಕೆಟ್ಟ ರೀತಿಯಲ್ಲಿ ಬಿಂಬಿಸಲಿದೆ. ಇದರಿಂದ ಬಿಜೆಪಿ ಮೇಲೆ ಕೆಲವು ಅನಪೇಕ್ಷಿತ ಪರಿಣಾಮಗಳು ಉಂಟಾಗಲಿವೆ” ಎಂದು ಶಶಿ ತರೂರ್‌ ಹೇಳಿದರು.

“ಪ್ರತಿಯೊಂದು ರಾಜಧಾನಿಯಲ್ಲೂ ರಾಹುಲ್ ಗಾಂಧಿ ಅವರಿಗೆ ಏನಾಯಿತು ಎಂಬ ಚರ್ಚೆಯ ಸುದ್ದಿ ಹರಿದಾಡುತ್ತಿವೆ. ಅಲ್ಲದೆ ಇದರಿಂದ ಪ್ರತಿಪಕ್ಷಗಳ ನಡುವೆ ಈ ಹಿಂದೆಂದೂ ಕಾಣದಂತ ಒಗ್ಗಟ್ಟು ಸೃಷ್ಟಿಯಾಗಿದೆ” ಎಂದು ಅವರು ಹೇಳಿದರು.

“ತಮ್ಮ ರಾಜ್ಯಗಳಲ್ಲಿ ಕಾಂಗ್ರೆಸ್‌ಅನ್ನು ವಿರೋಧಿಸುವ ಪ್ರಾದೇಶಿಕ ಪಕ್ಷಗಳು ಈಗ ರಾಹುಲ್ ಪರವಾಗಿ ನಿಂತಿವೆ. ಪ್ರಜಾಪ್ರಭುತ್ವದ ಮೇಲಿನ ಈ ದಾಳಿಯನ್ನು ಖಂಡಿಸಿವೆ” ಎಂದು ಶಶಿ ತರೂರ್‌ ಉಲ್ಲೇಖಿಸಿದರು.   

ಮಾನಹಾನಿ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿರುವ ಸೂರತ್ ನ್ಯಾಯಾಲಯದ ತೀರ್ಪನ್ನು ಶಶಿ ತರೂರ್ ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಸಂಸತ್ತು ಅಧಿವೇಶನ | ಪ್ರತಿಪಕ್ಷಗಳ ಗದ್ದಲಕ್ಕೆ ಮತ್ತೆ ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ

“ರಾಹುಲ್‌ ಗಾಂಧಿ ಅವರ ಅನರ್ಹತೆ ಅವಾಸ್ತವಿಕವಾಗಿದೆ. ಸಂವಿಧಾನದ ಪ್ರಕಾರ ಜನಪ್ರತಿನಿಧಿಯೊಬ್ಬರ ಅನರ್ಹತೆಯ ಬಗ್ಗೆ ಭಾರತದ ರಾಷ್ಟ್ರಪತಿಗಳು ತೀರ್ಮಾನಿಸುತ್ತಾರೆ. ನಂತರದಲ್ಲಿ ಆ ಆದೇಶ ಪತ್ರಕ್ಕೆ ಲೋಕಸಭೆ ಕಾರ್ಯದರ್ಶಿ ಸಹಿ ಹಾಕುತ್ತಾರೆ. ಆದರೆ ಇಲ್ಲಿ ರಾಹುಲ್‌ ಅವರ ಅನರ್ಹತೆ ವಿಚಾರವಾಗಿ ರಾಷ್ಟ್ರಪತಿ ಭವನವನ್ನು ಸಂಪರ್ಕಿಸಿರುವ ಯಾವ ಸೂಚನೆಯೂ ಇಲ್ಲ” ತರೂರ್‌ ತಿಳಿಸಿದ್ದಾರೆ.  

“ರಾಹುಲ್‌ ಅವರ ಶಿಕ್ಷೆಯನ್ನು ನ್ಯಾಯಾಲಯ ಅಮಾನತುಗೊಳಿಸಿ, ಮೇಲ್ಮನವಿ ಸಲ್ಲಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುವಾಗ ರಾಹುಲ್‌ ಅವರನ್ನು ಅನರ್ಹಗೊಳಿಸಲು ಲೋಕಸಭೆ ಕಾರ್ಯದರ್ಶಿ ನಡೆಯಲ್ಲಿನ ಅಸಹಜ ವೇಗ ಕಂಡು ನಾನು ದಿಗ್ಭ್ರಮೆಗೊಂಡಿದ್ದೇನೆ” ಎಂದು ಶಶಿ ತರೂರ್‌ ಕುಟುಕಿದರು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಲೋಕಸಭಾ | ಮುಗಿದ ನಾಮಪತ್ರ ಭರಾಟೆ, ಶುರುವಾಗಿ ಮತಬೇಟೆ

ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಭರಾಟೆ ಮುಕ್ತಾಯವಾಗಿದೆ. ಬೀದರ್‌ ಲೋಕಸಭಾ ಕ್ಷೇತ್ರದ...

ಬಿಜೆಪಿಯಿಂದ ಪಿಕ್ ಪಾಕೆಟ್ ಕಾಂಗ್ರೆಸ್, ಕನ್ನಡಿಗರ ಕೈಗೆ ಚಿಪ್ಪು ಪೋಸ್ಟರ್ ಬಿಡುಗಡೆ

ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ಚುನಾವಣಾ ಆಯೋಗದ ಅನುಮತಿ ಕೇಳಿದ್ದು,...

ಮಹಾಪ್ರಭು ಬಟ್ಟೆಯೊಳಗಡೆಯೇ ಬೆವರುತ್ತಿದ್ದಾರೆ: ಪ್ರಕಾಶ್‌ ರಾಜ್

“ನಿಮ್ಮ ಪಕ್ಷದ ಮ್ಯಾನಿಫೆಸ್ಟೋ ಬಗ್ಗೆ ಮಾತನಾಡಪ್ಪ ಅಂದರೆ ಊಟದ ಮೆನು ತೋರಿಸುತ್ತಾರೆ....

ನೇಹಾ ಕೊಲೆ | ನಿರಂಜನ್ ಮನೆಗೆ ಸಚಿವ ಎಚ್‌ ಕೆ ಪಾಟೀಲ್ ಭೇಟಿ, ನಿರಂಜನ್‌ ಜೊತೆ ಸಿಎಂ ಮಾತು

ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ...