ರಾಹುಲ್ ಗಾಂಧಿ ಕೋಲಾರ ಭೇಟಿ ಮುಂದೂಡಿಕೆ

Date:

  • ಕೋಲಾರದಿಂದಲೇ ರಾಹುಲ್ ಗಾಂಧಿ ಪ್ರಚಾರ ಆರಂಭ
  • ಪ್ರಧಾನಿ ಮೋದಿ ವಿರುದ್ಧ ಸಲೀಂ ಅಹ್ಮದ್‌ ವಾಗ್ದಾಳಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೋಲಾರಕ್ಕೆ ಆಗಮಿಸುವ ದಿನಾಂಕವನ್ನು ಏಪ್ರಿಲ್‌ 9ಕ್ಕೆ ಮುಂದೂಡಲಾಗಿದೆ. ‘ಸತ್ಯಮೇವ ಜಯತೇ’ ಸಮಾವೇಶದಲ್ಲಿ ಭಾಗವಹಿಸಲು ಏಪ್ರಿಲ್ 5ರಂದು ರಾಜ್ಯಕ್ಕೆ ಬರಬೇಕಾಗಿತ್ತು.

- Advertisement -

ಕಾಂಗ್ರೆಸ್‌ನ ‘ಸತ್ಯಮೇವ ಜಯತೇ’ ಸಮಾವೇಶದಲ್ಲಿ ಪಾಲ್ಗೊಳ್ಳಲು ಏಪ್ರಿಲ್ 5ರಂದು ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ, ರಾಹುಲ್ ಗಾಂಧಿ ಅವರ ಬರುವಿಕೆ ಏಪ್ರಿಲ್‌ 9ಕ್ಕೆ ಮುಂದೂಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಕುರಿತು ಸುದ್ದಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌, “ರಾಹುಲ್‌ ಗಾಂಧಿ ಕಾರ್ಯಕ್ರಮವನ್ನು ಏ. 9ಕ್ಕೆ ನಿಗದಿಪಡಿಸಲಾಗಿದೆ. ಇನ್ನುಳಿದ ವಿಚಾರಗಳ ಬಗ್ಗೆ ಸದ್ಯದಲ್ಲೇ ಮಾಹಿತಿ ನೀಡಲಿದ್ದೇವೆ” ಎಂದು ತಿಳಿಸಿದ್ದಾರೆ.

2019ರ ಲೋಕಸಭಾ ಚುನಾವಣೆಯ ವೇಳೆ ರಾಹುಲ್ ಗಾಂಧಿ ಕೋಲಾರದಲ್ಲಿ ಮೋದಿ ಉಪನಾಮದ ಕುರಿತು ಹೇಳಿಕೆ ನೀಡಿ ಈಗ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಸಂಸತ್ ಸದಸ್ಯ ಸ್ಥಾನದಿಂದಲೂ ಅನರ್ಹಗೊಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ವಯನಾಡ್‌ನಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಹೆಸರಿನ ಮತ್ತೊಬ್ಬ ಅಭ್ಯರ್ಥಿ ಅನರ್ಹ

ಈ ನಡುವೆ ರಾಹುಲ್ ಗಾಂಧಿ ರಾಜ್ಯ ವಿಧಾನಸಭಾ ಚುನಾವಣೆಗೆ ಕೋಲಾರದಿಂದಲೇ ಪ್ರಚಾರ ಕಾರ್ಯ ಆರಂಭಿಸುತ್ತಿರುವುದು ಕಾಂಗ್ರೆಸ್‌ಗೆ ಮಹತ್ವದ್ದಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ರಾಮರಾಜ್ಯ ಹೇಳಿಕೆ ಉಲ್ಲೇಖಿಸಿದ ಸಲೀಂ ಅಹ್ಮದ್‌, “ದೇಶದಲ್ಲಿ ಪ್ರಜಾಪ್ರಭುತ್ವ ಇದೆಯೋ ಇಲ್ಲವೋ ಎಂಬ ಅನುಮಾನ ಮೂಡುತ್ತಿದೆ. ಈ ಹಿಂದೆ ಪ್ರಧಾನಿ ಮೋದಿ ಅವರು ರಾಮರಾಜ್ಯ ಮಾಡುವುದಾಗಿ ಹೇಳಿದ್ದರು. ಆದರೆ, ಈಗ ರಾವಣ ರಾಜ್ಯ ಮಾಡಿದ್ದಾರೆ. ಸ್ವರ್ಗ ತೋರಿಸುವುದಾಗಿ ಹೇಳಿ ನರಕ ತೋರಿಸುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ರಾಹುಲ್‌ ವಿರುದ್ಧ ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ. ಇದಕ್ಕೆಲ್ಲಾ ಕಾಂಗ್ರೆಸ್‌ ಹೆದರುವುದಿಲ್ಲ. ಎಲ್ಲಿ ಹೋರಾಟ ಆರಂಭವಾಯಿತೋ ಅಲ್ಲಿಂದ ಮತ್ತೆ ಹೋರಾಟ ಆರಂಭಿಸಲು ಸಮಾವೇಶ ಹಮ್ಮಿಕೊಳ್ಳುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...