ದೆಹಲಿ ಚುನಾವಣೆ | ಎಎಪಿಯ ‘ಅಪ್ರಾಮಾಣಿಕ’ 11 ನಾಯಕರ ಪೋಸ್ಟರ್‌ನಲ್ಲಿ ರಾಹುಲ್ ಗಾಂಧಿ ಚಿತ್ರ

Date:

Advertisements

ದೆಹಲಿ ಚುನಾವಣೆಗೆ ಬಿಜೆಪಿ, ಎಎಪಿ, ಕಾಂಗ್ರೆಸ್ ಭರ್ಜರಿ ಪ್ರಚಾರವನ್ನು ನಡೆಸುತ್ತಿದೆ. ಈ ನಡುವೆ ಆಡಾಳಿತರೂಢ ಎಎಪಿ 11 ‘ಅಪ್ರಾಮಾಣಿಕ’ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಪೋಸ್ಟರ್‌ನಲ್ಲಿ ಲೋಕಸಭೆ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ ಚಿತ್ರವೂ ಕೂಡಾ ಕಾಣಿಸಿಕೊಂಡಿದೆ.

ರಾಹುಲ್ ಗಾಂಧಿ ತನ್ನ ವಿರುದ್ಧವಾಗಿ ನೀಡಿರುವ ತಾನು ಯಾವುದೇ ಪ್ರತ್ಯುತ್ತರ ನೀಡುವುದಿಲ್ಲ ಎಂದು ಎಎಪಿ ಸಂಚಾಲಕ, ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ ಒಂದು ದಿನದ ಬಳಿಕ ರಾಹುಲ್ ಗಾಂಧಿ ಒಳಗೊಂಡ 11 ಅಪ್ರಾಮಾಣಿಕ ನಾಯಕರ ಈ ಪೋಸ್ಟರ್ ಅನ್ನು ಎಎಪಿ ಬಿಡುಗಡೆ ಮಾಡಿದೆ.

ಇದನ್ನು ಓದಿದ್ದೀರಾ? ದೆಹಲಿ ಚುನಾವಣೆ | ಚೀನೀ ಸಿಸಿಟಿವಿ ಕ್ಯಾಮೆರಾ ಬಳಕೆ, ಪಂಜಾಬ್ ಆಡಳಿತ ದುರುಪಯೋಗ: ಎಎಪಿ, ಬಿಜೆಪಿ ವಾಕ್ಸಮರ

Advertisements

ರಾಹುಲ್ ಗಾಂಧಿ ಮಾತ್ರವಲ್ಲದೆ ಪೋಸ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ನಾಯಕ ವಿರೇಂದ್ರ ಸಚ್‌ದೇವ, ಅನುರಾಗ್ ಠಾಕೂರ್, ಪರ್ವೇಶ್ ವರ್ಮಾ, ವಿಜೇಂದರ್ ಗುಪ್ತಾ, ರಮೇಶ್ ಬಿಧುರಿ, ಕಾಂಗ್ರೆಸ್ ನಾಯಕ ಅಜಯ್ ಮಖೇನ್, ಸಂದೀಪ್ ದೀಕ್ಷಿತ್ ಚಿತ್ರಗಳು ಕೂಡಾ ಇದೆ.

ಕೇಜ್ರಿವಾಲ್ ಮತ್ತು ಪತ್ನಿ ಸುನೀತಾ ಕೇಜ್ರಿವಾಲ್ ಇರುವ ಚಿತ್ರದೊಂದಿಗೆ “ಕೇಜ್ರಿವಾಲ್ ಅವರ ಪ್ರಾಮಾಣಿಕತೆಯು ಈ ಅಪ್ರಾಮಾಣಿಕರಿಗೆ ತೊಂದರೆ ನೀಡಲಿದೆ” ಎಂದು ಬರೆಯಲಾಗಿದೆ.

ಈ ಬೆನ್ನಲ್ಲೇ ಎಎಪಿ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕೇಜ್ರಿವಾಲ್‌ಗೆ ಧೈರ್ಯವಿದ್ದರೆ, ಇಂಡಿಯಾ ಒಕ್ಕೂಟವನ್ನು ತೊರೆಯವುದಾಗಿ ಘೋಷಿಸಲಿ. ಕಾಂಗ್ರೆಸ್ 100 ಸಂಸದರೊಂದಿಗೆ ದೃಢವಾಗಿದೆ, ಎಲ್ಲಾ 7 ಸೀಟುಗಳನ್ನು ಬಿಜೆಪಿಗೆ ಕೊಟ್ಟವರು ಅರವಿಂದ್ ಕೇಜ್ರಿವಾಲ್” ಎಂದು ಕಾಂಗ್ರೆಸ್ ಅಭ್ಯರ್ಥಿ ಕಲ್ಕಾಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ದೆಹಲಿ ಚುನಾವಣೆ ಪ್ರಚಾರದ ವೇಳೆ ಕೇಜ್ರಿವಾಲ್ ಕಾರಿನ ಮೇಲೆ ದಾಳಿ; ಬಿಜೆಪಿ ಗೂಂಡಾಗಳೆಂದ ಎಎಪಿ

“ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮೈತ್ರಿಗಾಗಿ ನಮ್ಮೆಲ್ಲರ ಮುಂದೆ ಬೇಡುತ್ತಿದ್ದಿರಿ. ದೆಹಲಿಯಲ್ಲಿ 7 ಕ್ಷೇತ್ರಕ್ಕಾಗಿ ನಿಮ್ಮೊಂದಿಗೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ದೊಡ್ಡ ತಪ್ಪು ಮಾಡಿದೆ. ಕಾಂಗ್ರೆಸ್ ಇದರಿಂದಾಗಿ ದೊಡ್ಡ ನಷ್ಟವನ್ನು ಅನುಭವಿಸಬೇಕಾಯಿತು” ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಎಎಪಿ, ಕಾಂಗ್ರೆಸ್ ಇಂಡಿಯಾ ಒಕ್ಕೂಟದ ಭಾಗವಾಗಿ ಜೊತೆಯಾಗಿ ಸ್ಪರ್ಧಿಸಿತ್ತು. ಆದರೆ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಉಭಯ ಪಕ್ಷಗಳು ಮೈತ್ರಿ ಮಾಡಿಕೊಂಡಿಲ್ಲ. ಪ್ರತ್ಯೇಕವಾಗಿ ಸ್ಪರ್ಧಿಸುತ್ತಿದೆ. ಇಂಡಿಯಾ ಒಕ್ಕೂಟದ ಕೆಲವು ಪಕ್ಷಗಳು ಎಎಪಿಗೆ ತನ್ನ ಬೆಂಬಲವನ್ನು ನೀಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X