ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡಲಾಗುವುದು: ರಾಹುಲ್ ಗಾಂಧಿ

Date:

Advertisements

ಇಂಡಿಯಾ ಒಕ್ಕೂಟವು ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡುತ್ತದೆ ಮತ್ತು ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ನೀಡುತ್ತದೆ, ಅಗ್ನಿಪಥ್ ಯೋಜನೆಯನ್ನು ರದ್ದುಗೊಳಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.

ಪಕ್ಷದ ಲೂಧಿಯಾನ ಅಭ್ಯರ್ಥಿ ಮತ್ತು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಪರವಾಗಿ ಲುಧಿಯಾನದ ಮುಲ್ಲನ್‌ಪುರ್ ದಖಾದಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, “ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ರದ್ದುಪಡಿಸಲಿದೆ” ಎಂದು ಎಂದು ಆರೋಪಿಸಿದ್ದು, “2024ರ ಲೋಕಸಭೆ ಚುನಾವಣೆಯು ಸಂವಿಧಾನವನ್ನು ಉಳಿಸಲು ನಡೆಯುತ್ತಿರುವ ಚುನಾವಣೆ” ಎಂದರು.

“ಮೊದಲ ಬಾರಿಗೆ, ಒಂದು ಪಕ್ಷ ಮತ್ತು ಅದರ ನಾಯಕರು ಚುನಾವಣೆಯಲ್ಲಿ ಗೆದ್ದರೆ ಸಂವಿಧಾನವನ್ನು ಬದಲಾಯಿಸುತ್ತೇವೆ ಮತ್ತು ರದ್ದುಗೊಳಿಸುತ್ತೇವೆ ಎಂದು ಹೇಳಿದ್ದಾರೆ” ಎಂದು ಬಿಜೆಪಿ ನಾಯಕರುಗಳ ಸಂವಿಧಾನ ಬದಲಾಯಿಸುವ ಹೇಳಿಕೆ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ ಸಂವಿಧಾನದ ಪ್ರತಿಯನ್ನು ಹಿಡಿದು, ಇದು ಪುಸ್ತಕವಲ್ಲ, ಜನರ ಧ್ವನಿ ಎಂದು ಹೇಳಿದರು.

Advertisements

ಇದನ್ನು ಓದಿದ್ದೀರಾ? ಜುಲೈ 5ರಂದು ಬಡ ಮಹಿಳೆಯರ ಖಾತೆಗೆ 8,500 ರೂ ಜಮೆ: ರಾಹುಲ್ ಗಾಂಧಿ

“ದೇಶವನ್ನು ವಿಭಜಿಸಲು ಪ್ರಧಾನಿ ನರೇಂದ್ರ ಮೋದಿ ಪ್ರಯತ್ನ ಮಾಡುತ್ತಿದ್ದಾರೆ. ಒಬ್ಬ ಸಹೋದರ ಇನ್ನೊಬ್ಬ ಸಹೋದರನ ವಿರುದ್ಧ ಹೋರಾಡುವುದು, ಒಂದು ಸಮುದಾಯವು ಇನ್ನೊಬ್ಬರನ್ನು ದ್ವೇಷಿಸುವುದು ಮತ್ತು ಒಂದು ಭಾಷೆಯನ್ನು ಇನ್ನೊಬ್ಬರು ವಿರೋಧ ಮಾಡುವಂತೆ ಮಾಡಿರುವುದು ಮಾತ್ರ 10 ವರ್ಷಗಳಲ್ಲಿ, ಮೋದಿ ಮತ್ತು ಬಿಜೆಪಿ ಮಾಡಿದ ಏಕೈಕ ಕೆಲಸ” ಎಂದು ಟೀಕಿಸಿದರು.

ಇದನ್ನು ಓದಿದ್ದೀರಾ?   ಅದಾನಿ, ಅಂಬಾನಿಗೆ ಸಹಾಯ ಮಾಡಲು ಮೋದಿಯವರನ್ನು ಆ ಪರಮಾತ್ಮನೇ ಕಳುಹಿಸಿದ್ದು: ರಾಹುಲ್ ಲೇವಡಿ

ರೈತ ಸ್ನೇಹಿ ಬೆಳೆ ವಿಮಾ ಯೋಜನೆ ಜಾರಿಗೆ ತರುವುದಾಗಿ ಭರವಸೆ ನೀಡಿದ ರಾಹುಲ್ ಗಾಂಧಿ ಪ್ರಸ್ತುತ ಯೋಜನೆಯಿಂದ ಕೇವಲ 16 ವಿಮಾ ಕಂಪನಿಗಳಿಗೆ ಲಾಭವಾಗಿದೆ ಎಂದು ಆರೋಪಿಸಿದರು. ಮಹಾಲಕ್ಷ್ಮಿ ಯೋಜನೆ ಸೇರಿದಂತೆ ತಮ್ಮ ಪಕ್ಷದ ಚುನಾವಣಾ ಭರವಸೆಗಳ ಬಗ್ಗೆಯೂ ರಾಹುಲ್ ಗಾಂಧಿ ಪ್ರಸ್ತಾಪ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X