ಮಳೆ ಅವಾಂತರ | ಬೆಂಗಳೂರಿನ ಜನತೆ ಕಟ್ಟುವ ತೆರಿಗೆಗಾದ್ರೂ ಸರ್ಕಾರ ಋಣ ತೀರಿಸಲಿ: ಆರ್‌ ಅಶೋಕ್

Date:

Advertisements

ಇನ್ನಾದರೂ ರಸ್ತೆ ಗುಂಡಿ ಮುಚ್ಚುವ ಈ ತೇಪೆ ಹಾಕುವ ಕೆಲಸ ಸಾಕು ಮಾಡಿ, ಹೊಸದಾಗಿ ಗುಣಮಟ್ಟದ ರಸ್ತೆ ನಿರ್ಮಿಸುವ ಮೂಲಕ ಬೆಂಗಳೂರಿನ ಜನತೆ ಕಟ್ಟುವ ತೆರಿಗೆಗಾದ್ರೂ ಸರ್ಕಾರ ಋಣ ತೀರಿಸಲಿ ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಸಲಹೆ ನೀಡಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಅವರು, “ಪಾರ್ಟ್ ಟೈಂ ಬೆಂಗಳೂರು ಅಭಿವೃದ್ಧಿ ಮಂತ್ರಿ ಡಿ ಕೆ ಶಿವಕುಮಾರ್‌ ಅವರ ರಸ್ತೆಗುಂಡಿ ಮುಚ್ಚಿಸುವ ಮಹತ್ಕಾರ್ಯದ ಕಾರ್ಯವೈಖರಿ ಒಂದೇ ಮಳೆಗೆ ಬಟಾ ಬಯಲಾಗಿದೆ” ಎಂದು ಲೇವಡಿ ಮಾಡಿದ್ದಾರೆ.

“ಮಹಾದೇವಪುರದಲ್ಲಿ ಮಳೆ ನೀರಿನಲ್ಲಿ ಮುಳುಗಿರುವ ಬೈಕ್ ಎತ್ತುತ್ತಿರುವ ಈ ದೃಶ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಬೆಂಗಳೂರಿನ ಪರಿಸ್ಥಿತಿ ಯಾವ ಅಧೋಗತಿಗೆ ತಲುಪಿದೆ ಎನ್ನುವುದಕ್ಕೆ ಕನ್ನಡಿ ಹಿಡಿದಂತಿದೆ” ಎಂದಿದ್ದಾರೆ.

Advertisements

“ಡಿಸಿಎಂ ಡಿ ಕೆ ಶಿವಕುಮಾರ್‌ ಅವರೇ ರಸ್ತೆಗುಂಡಿ ಮುಚ್ಚುಲು ಅಧಿಕಾರಿಗಳಿಗೆ ಆದೇಶ ನೀಡಿ, ಸಾಮಾಜಿಕ ಜಾಲತಾಣದಲ್ಲಿ ಒಂದೆರಡು ಫೋಟೋ, ವಿಡಿಯೋ ಹಾಕಿಬಿಟ್ಟರೆ ರಸ್ತೆ ಗುಂಡಿ ಸಮಸ್ಯೆ ಬಗೆಹರಿದು ಬಿಡುತ್ತಾ? ಒಬ್ಬ ಜವಾಬ್ದಾರಿಯುತ ಸಚಿವರು ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಸರಿಯಾಗಿ ನಡೆಯುತ್ತಿದೆಯೋ ಇಲ್ಲವೋ ಎಂದು ಸ್ಥಳಕ್ಕೆ ಭೇಟಿ ನೀಡಿ ಮೇಲ್ವಿಚಾರಣೆ ಮಾಡಬೇಕು. ಅದು ಬಿಟ್ಟು ನಾಮಕಾವಸ್ತೆ ಸುಮ್ಮನೆ ಆದೇಶ ನೀಡಿ ವಾರಗಟ್ಟಲೆ ವಿದೇಶ ಪ್ರವಾಸಕ್ಕೆ ಹೊರಟುಬಿಟ್ಟರೆ, ಇಲ್ಲಿ ರಸ್ತೆಗುಂಡಿ ಸಮಸ್ಯೆ ಹೇಗೆ ಬಗೆಹರಿಯುತ್ತಾ” ಎಂದು ಪ್ರಶ್ನಿಸಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಾರಾಷ್ಟ್ರ, ಝಾರ್ಖಂಡ್ ಚುನಾವಣೆ- ಬಿಜೆಪಿ ಪಾಲಿಗೆ ವರವೇ ಅಥವಾ ಶಾಪವೇ?

” ‘ನಮ್ಮ ತೆರಿಗೆ ನಮ್ಮ ಹಕ್ಕು’ ಎಂದು ಬೀದಿನಾಟಕ ಮಾಡುತ್ತೀರಲ್ಲ, ರಾಜ್ಯದ ಜಿಎಸ್ ಡಿಪಿಗೆ 35-40% ಕೊಡುಗೆ ನೀಡುವ ಬೆಂಗಳೂರಿನ ಜನತೆಗೆ ಕನಿಷ್ಠ ಪಕ್ಷ ಗುಂಡಿ ಮುಕ್ತ ರಸ್ತೆಯನ್ನಾದರೂ ಕೊಡಬೇಕಲ್ಲವೇ? ಇನ್ನು ಪ್ರತಿಪಕ್ಷಗಳು ಟೀಕೆ ಮಾಡಿದರೆ, ಜನರ ಸಮಸ್ಯೆಗಳ ಬಗ್ಗೆ ದನಿ ಎತ್ತಿದರೆ, ಬೆಂಗಳೂರಿನ ಮರ್ಯಾದೆ ಕಳೆಯಬೇಡಿ ಎಂದು ಜವಾಬ್ದಾರಿಯಿಂದ ಜಾರಿಕೊಳ್ಳುವ ಪ್ರಯತ್ನ ಮಾಡುತ್ತೀರಿ. ಬೆಂಗಳೂರಿನ ಜನರಿಗೆ ಇಷ್ಟೆಲ್ಲ ಸಮಸ್ಯೆ ಆಗುತ್ತಿದ್ದರೂ, ಜನಜೀವನ ಅಸ್ತವ್ಯಸ್ತಗೊಂಡಿದ್ದರು ವಿಪಕ್ಷಗಳು ಸುಮ್ಮನೆ ಕೂರಬೇಕಾ? ಅಥವಾ ನಿಮಗೆ ಬಹುಪರಾಕ್ ಹೇಳಬೇಕಾ” ಎಂದು ಕೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X