ಆ.31ರಂದು ರಾಜಭವನ ಚಲೋ : ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ವಿರುದ್ಧ ಮತ್ತೆ ಹೋರಾಟಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ​ಕರೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು (ಮಂಗಳವಾರ) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಆ.31ರಂದು ರಾಜಭವನ ಚಲೋ ನಡೆಸುತ್ತೇವೆ. ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ಹೋಗಿ ಯಾವ ಯಾವ ಪೆಂಡಿಂಗ್ ಪ್ರಾಸಿಕ್ಯೂಷನ್‌ ಇದೆ ಅದನ್ನು ಜಾರಿಗೆ ತರಬೇಕು ಎಂದು ಮನವಿ ಸಲ್ಲಿಸುತ್ತೇವೆ. ಈ ಹಿನ್ನೆಲೆಯಲ್ಲಿ ಎಲ್ಲ ಶಾಸಕರು, ಸಚಿವರು, ಪರಿಷತ್ ಸದಸ್ಯರು ಭಾಗಿಯಾಗಬೇಕು” ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್‌ ಸೂಚಿಸಿದರು.

ಹೆಚ್​ಡಿಕೆ ವಿರುದ್ದ ಡಿಕೆಶಿ ಕಿಡಿ

Advertisements

ಇದೇ ವೇಳೆ, “ನಮ್ಮ ಬಿಗ್ ಬ್ರದರ್ ಕುಮಾರಸ್ವಾಮಿ ಸಾಚಾ ಕೆಲಸ ಮಾಡುವವರು. ಇವರ ವಿರುದ್ಧ 10 ವರ್ಷಗಳ ಹಿಂದೆಯೇ ಕೇಸು ದಾಖಲಾಗಿದೆ. 2023ರ ನವೆಂಬರ್ 21ರಂದು ಲೋಕಾಯುಕ್ತ ಎಸ್‌ಐಟಿ ಅಧಿಕಾರಿಗಳು ಕೂಡ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ನಾವೇನೂ ತಿರುಚಿ ಪರಚಿ ಮಾತಾಡುತ್ತಿಲ್ಲ. 218 ಪುಟಗಳ ತನಿಖಾ ವರದಿಯನ್ನು ರಾಜ್ಯಪಾಲರಿಗೆ ಎಸ್‌ಐಟಿ ನೀಡಿದೆ. ಬಹಳ ಸತ್ಯಕ್ಕೆ ಹೆಸರಾದವರು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ, ನಾನು ಸಹಿಯೇ ಮಾಡಲಿಲ್ಲ ಎಂದು ಹೇಳಿದರು. ಅವರ ಹೇಳಿಕೆ ನೋಡಿ ನನಗೆ ಆಶ್ಚರ್ಯ ಆಯ್ತು ಎಂದು ತಿಳಿಸಿದರು.

‘ಅವರ ಸಹಿ ಅಲ್ಲ ಅಂದಮೇಲೆ ಯಾರೋ ಫೋರ್ಜರಿ ಮಾಡಿದ್ದಾರೆ. ಸಹಿ ಫೋರ್ಜರಿ ಮಾಡಿದ್ದಾರೆ ಎಂದು ಯಾಕೆ ದೂರು ಕೊಟ್ಟಿಲ್ಲ?. ಸಹಿ ಫೋರ್ಜರಿ ಆಗಿದ್ದಿದ್ದರೆ ಒಬ್ಬ ಪಿಸಿಗಾದರೂ ದೂರು ಕೊಡಬೇಕಲ್ವಾ ಎಂದು ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದರು.

“ಯಾರೇ ಆಗಿರಲಿ, ಫೋರ್ಜರಿ ಮಾಡಿದವರ ಬಗ್ಗೆ ದೂರು ಕೊಡಬೇಕು. ನಾನು ಜಾಮೀನು ತೆಗೆದುಕೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ನಾನು ಕುಮಾರಸ್ವಾಮಿ ಬ್ರದರ್ ಆಸ್ತಿ ವಿವರವನ್ನೆಲ್ಲ ಕೇಳಿದ್ದೆ” ಎಂದು ಡಿಸಿಎಂ ವಾಗ್ದಾಳಿ ನಡೆಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X