ಮಹಾರಾಷ್ಟ್ರ ಶಾಲೆಗಳಲ್ಲಿ ಹಿಂದಿ ಹೇರಿಕೆಗೆ ವಿರೋಧ: ಮತ್ತೆ ಒಂದಾದ ರಾಜ್, ಉದ್ಧವ್ ಠಾಕ್ರೆ

Date:

Advertisements

ಮಹಾರಾಷ್ಟ್ರ ಶಾಲೆಗಳಲ್ಲಿ ಹಿಂದಿ ಹೇರಿಕೆಯನ್ನು ವಿರೋಧಿಸಿ ಠಾಕ್ರೆ ಸಹೋದರರಾದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಮತ್ತು ಒಂದಾಗಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯನ್ನು ನಡೆಸಿದ ಶಿವಸೇನೆ (ಯುಬಿಟಿ) ನಾಯಕ ಮತ್ತು ಸಂಸದ ಸಂಜಯ್ ರಾವತ್ ಈ ಘೋಷಣೆ ಮಾಡಿದ್ದಾರೆ.

‘ತ್ರಿಭಾಷಾ ನೀತಿ’ಯಡಿಯಲ್ಲಿ 4ನೇ ತರಗತಿಯವರೆಗೆ ಹಿಂದಿ ಭಾಷೆಯನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ವರದಿಯ ವಿರುದ್ಧ ಶಿವಸೇನೆ(ಯುಬಿಟಿ) ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್ಎಸ್) ಜಂಟಿಯಾಗಿ ಜುಲೈ 5ರಂದು ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಲಿವೆ.

ಇದನ್ನು ಓದಿದ್ದೀರಾ? ರಾಮಮಂದಿರ ಉದ್ಘಾಟನೆ ಬಳಿಕ ಗೋಧ್ರಾ ಮಾದರಿಯ ಘಟನೆ ಸಾಧ್ಯತೆ: ಉದ್ಧವ್ ಠಾಕ್ರೆ ಎಚ್ಚರಿಕೆ

Advertisements

“ನಾವು ಯಾವುದೇ ಭಾಷೆಯ ವಿರುದ್ಧವಾಗಿಲ್ಲ. ನಾವು ಯಾವಾಗಲೂ ಹಿಂದಿಯನ್ನು ಗೌರವಿಸುತ್ತೇವೆ. ನಮ್ಮ ಪಕ್ಷ ಹಲವು ಸಂದರ್ಭಗಳಲ್ಲಿ ಹಿಂದಿ ಬಳಸುತ್ತದೆ. ಆದರೆ ‘ತ್ರಿಭಾಷಾ ನೀತಿ’ಯಡಿಯಲ್ಲಿ 4ನೇ ತರಗತಿಯವರೆಗೆ ಮೂರನೇ ಭಾಷೆಯಾಗಿ ಹಿಂದಿಯನ್ನು ಕಡ್ಡಾಯಗೊಳಿಸುವ ಇತ್ತೀಚಿನ ನಿರ್ಧಾರವು ಮಕ್ಕಳ ಮೇಲೆ ಅನಗತ್ಯ ಹೊರೆಯನ್ನು ಹೇರಿದ್ದಂತಾಗುತ್ತದೆ. ಇದು ಶೈಕ್ಷಣಿಕ ಮತ್ತು ಭಾಷಾ ವಿಷಯವಾಗಿದೆ” ಎಂದು ಹೇಳಿದ್ದಾರೆ.

ಈ ಹಿಂದೆ ಶಿವಸೇನೆ(ಯುಬಿಟಿ) ಮತ್ತು ಎಂಎನ್ಎಸ್ ಜುಲೈ 6 ಮತ್ತು ಜುಲೈ 7ರಂದು ಕ್ರಮವಾಗಿ ಪ್ರತ್ಯೇಕ ಪ್ರತಿಭಟನೆಗಳನ್ನು ಮಾಡಲು ಮುಂದಾಗಿತ್ತು. ಆದರೆ ಇದೀಗ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಚರ್ಚೆ ನಡೆಸಿ ಈ ಗೊಂದಲವನ್ನು ಬಗೆಹರಿಸಿದ್ದಾರೆ. ಜುಲೈ ಐದರಂದು ಪ್ರತಿಭಟನೆ ನಡೆಯಲಿದೆ.

“ಎರಡು ಪ್ರತ್ಯೇಕ ಪ್ರತಿಭಟನೆಗಳನ್ನು ನಡೆಸುವುದು ಒಳ್ಳೆಯದಲ್ಲ. ನಾನು ಉದ್ಧವ್ ಮತ್ತು ರಾಜ್ ಠಾಕ್ರೆ ಅವರೊಂದಿಗೆ ಚರ್ಚಿಸಿದೆ. ಶಿವಸೇನೆ(ಯುಬಿಟಿ) ಮತ್ತು ಎಂಎನ್ಎಸ್ ಎರಡೂ ಜಂಟಿಯಾಗಿ ಜುಲೈ 5ರಂದು ಈ ಆಂದೋಲನವನ್ನು ಪ್ರಾರಂಭಿಸುತ್ತವೆ” ಎಂದು ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ರಾವತ್ ಮಹಾರಾಷ್ಟ್ರಕ್ಕೆ ರಾಜಕೀಯ ಹಾನಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X