ರಾಜಸ್ಥಾನ | ಅರೆಕಾಲಿಕ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ವಿಸ್ತರಣೆ ಮಸೂದೆ ಅಂಗೀಕಾರ

Date:

Advertisements
  • ಮಸೂದೆ ಬಗ್ಗೆ ಬಜೆಟ್‌ ಭಾಷಣದಲ್ಲಿ ಹೇಳಿದ್ದ ರಾಜಸ್ಥಾನ ಮುಖ್ಯಮಂತ್ರಿ ಗೆಹ್ಲೋಟ್
  • ಅರೆಕಾಲಿಕ ಕಾರ್ಮಿಕರಿಗೆ ಕಲ್ಯಾಣ ಮಂಡಳಿ ಸ್ಥಾಪನೆ ಪ್ರಸ್ತಾಪಿಸುವ ಮಸೂದೆ

ರಾಜಸ್ಥಾನ ವಿಧಾನಸಭೆಯಲ್ಲಿ ಸೋಮವಾರ (ಜುಲೈ 24) ಅರೆಕಾಲಿಕ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ವಿಸ್ತರಿಸುವ ಮಸೂದೆಯನ್ನು ಅಂಗೀಕರಿಸಲಾಗಿದೆ.

ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಾಯಕರೊಂದಿಗೆ ಯಾವುದೇ ಚರ್ಚೆಯಿಲ್ಲದೆ ಮಸೂದೆ ಅಂಗೀಕಾರಗೊಂಡಿದೆ.

ವಜಾಗೊಂಡ ಸಚಿವ ರಾಜೇಂದ್ರ ಗುಧಾ ಜತೆ ಸಂಸದೀಯ ವ್ಯವಹಾರಗಳ ಸಚಿವ ಶಾಂತಿ ಧರಿವಾಲ್‌ ಮತ್ತು ಇತರ ಕಾಂಗ್ರೆಸ್‌ ಶಾಸಕರೊಂದಿಗೆ ತೀವ್ರ ಗದ್ದಲ ಉಂಟಾಯಿತು. ಇದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. ಬಳಿಕ ಸದನ ಆರಂಭವಾದ ನಂತರವೂ ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಸಾಂಕೇತಿಕವಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರ ಸರ್ಕಾರದ ಅಕ್ರಮಗಳ ಬಗ್ಗೆ ಮಾಹಿತಿಯುಳ್ಳ ಕೆಂಪು ಡೈರಿ ವಿಚಾರವಾಗಿ ಪ್ರತಿಭಟನೆ ನಡೆಸಿದರು.

Advertisements

ಬಿಜೆಪಿ ಶಾಸಕರು ಸಭಾಧ್ಯಕ್ಷ ಸಿ.ಪಿ.ಜೋಶಿ ಅವರ ಮುಂದೆ ಸಾಂಕೇತಿಕ ಕೆಂಪು ಡೈರಿಯನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಪ್ರತಿಪಕ್ಷಗಳ ಗದ್ದಲದ ನಡುವೆಯೇ ಸದನದ ಕಲಾಪ ಮುಂದುವರಿಯಿತು. ಪ್ರತಿಪಕ್ಷಗಳ ಘೋಷಣೆ ಮಧ್ಯೆ ಸಭಾಧ್ಯಕ್ಷ ಜೋಶಿ ಮತ್ತು ಆಡಳಿತ ಪಕ್ಷ ಅರೆಕಾಲಿಕ ಕಾರ್ಮಿಕರ ಮಸೂದೆ ಸೇರಿದಂತೆ ನಾಲ್ಕು ಮಸೂದೆಗಳ ಅಂಗೀಕಾರಕ್ಕೆ ಮುಂದಾದರು.

ರಾಜಸ್ಥಾನ ಅರೆಕಾಲಿಕ ಕಾರ್ಮಿಕರಿಗೆ ಸಂಬಂಧಿಸಿದ ಮಸೂದೆಯು (ನೋಂದಣಿ ಮತ್ತು ಕಲ್ಯಾಣ) ಈ ಕಾರ್ಮಿಕರು ಹೊಂದಿರುವ ಹಕ್ಕುಗಳನ್ನು ವಿಸ್ತರಿಸುತ್ತದೆ. ರಾಜ್ಯ ಸರ್ಕಾರದಡಿ ನೋಂದಣಿಯಾಗುವ ಈ ಕಾರ್ಮಿಕರು ಸಾಮಾನ್ಯ ಮತ್ತು ನಿರ್ದಿಷ್ಟ ಸಾಮಾಜಿಕ ಭದ್ರತೆ ಯೋಜನೆಗಳ ಫಲಾನುಭವಿಗಳಾಗುತ್ತಾರೆ.

ಅರೆಕಾಲಿಕ ಕಾರ್ಮಿಕರಿಗೆ ಕಲ್ಯಾಣ ಮಂಡಳಿ ಸ್ಥಾಪಿಸುವುದನ್ನು ಮಸೂದೆ ಹೇಳುತ್ತದೆ. ಈ ಅರೆಕಾಲಿಕ ಕಾರ್ಮಿಕರ ಕಲ್ಯಾಣ ಮಂಡಳಿಗೆ ಪದಾಧಿಕಾರಿಗಳನ್ನು ಹೊರತುಪಡಿಸಿ ಅರೆಕಾಲಿಕ ಕಾರ್ಮಿಕರು ಮತ್ತು ಸಂಗ್ರಾಹಕರಿಂದ ತಲಾ ಒಬ್ಬರು ಪ್ರತಿನಿಧಿಗಳನ್ನು ರಾಜ್ಯ ಸರ್ಕಾರ ನೇಮಿಸುತ್ತದೆ.

ಈ ಸುದ್ದಿ ಓದಿದ್ದೀರಾ? ನ್ಯಾಯಾಲಯದ ಕೊಠಡಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಸಿ: ತಮಿಳುನಾಡು ಕಾಂಗ್ರೆಸ್ ಒತ್ತಾಯ

ರಾಜಸ್ಥಾನ ರಾಜ್ಯದಲ್ಲಿ ಎಲ್ಲ ಅರೆಕಾಲಿಕ ಕಾರ್ಮಿಕರು ಮತ್ತು ಸಂಗ್ರಾಹಕರ ನೋಂದಣಿಯ ಬಗ್ಗೆ ಮಸೂದೆ ಪ್ರಸ್ತಾಪಿಸುತ್ತದೆ. ಇದರಿಂದ ಸರ್ಕಾರ ರಾಜ್ಯದಲ್ಲಿನ ಎಲ್ಲ ಅರೆಕಾಲಿಕ ಕಾರ್ಮಿಕರ ಬಗ್ಗೆ ಮಾಹಿತಿಯನ್ನು ಹೊಂದಲು ಮತ್ತು ಪ್ರತಿ ಕಾರ್ಮಿಕರಿಗೆ ವಿಭಿನ್ನ ಗುರುತಿನ ಸಂಖ್ಯೆ ನೀಡಲು ಅನುಕೂಲವಾಗುತ್ತದೆ ಎಂದು ಹೇಳಲಾಗಿದೆ.

ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರು ಈ ವರ್ಷದ ಆರಂಭದಲ್ಲಿ ಮಾಡಿದ್ದ ಬಜೆಟ್‌ ಕುರಿತ ಭಾಷಣದಲ್ಲಿ ಅರೆಕಾಲಿಕ ಕಾರ್ಮಿಕರ ಬಗೆಗಿನ ಮಸೂದೆ ಬಗ್ಗೆ ಪ್ರಕಟಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X