ಸಂಸತ್ ಭದ್ರತಾ ಲೋಪ | ಚರ್ಚೆಗೆ ಪಟ್ಟು ಹಿಡಿದ ಸಂಸದ ಡೆರೆಕ್‌ ಓಬ್ರಿಯಾನ್ ರಾಜ್ಯಸಭೆಯಿಂದ ಅಮಾನತು

Date:

Advertisements

ಲೋಕಸಭೆ ಭದ್ರತಾ ಲೋಪ ಪ್ರಕರಣದ ಕುರಿತು ರಾಜ್ಯಸಭೆಯಲ್ಲಿ ಚರ್ಚೆಗೆ ಪಟ್ಟು ಹಿಡಿದಿದ್ದ ಟಿಎಂಸಿ ಸಂಸದ ಡೆರೆಕ್‌ ಓಬ್ರಿಯಾನ್ ಅವರನ್ನು ರಾಜ್ಯಸಭೆಯಿಂದ ಅಮಾನತು ಮಾಡಲಾಗಿದೆ.

ಲೋಕಸಭೆಯಲ್ಲಿ ಇಬ್ಬರು ವ್ಯಕ್ತಿಗಳು ಸಂದರ್ಶಕರ ಗ್ಯಾಲರಿಯಿಂದ ಜಿಗಿದು, ಸ್ಮೋಕ್ ಡಬ್ಬಿಗಳನ್ನು ಸಿಡಿಸಿದ ಘಟನೆಯ ಕುರಿತು ವಿಪಕ್ಷಗಳು ಚರ್ಚೆಗೆ ಆಗ್ರಹಿಸಿವೆ. ಈ ನಡುವೆ ಟಿಎಂಸಿ ಸಂಸದ ಡೆರೆಕ್‌ ಓಬ್ರಿಯಾನ್ ಸದನದ ಬಾವಿಗಳಿದು ಪ್ರತಿಭಟನೆ ಮಾಡಿದ್ದರು. ಇದರಿಂದಾಗಿ ಒಬ್ರಿಯಾನ್ ಅವರನ್ನು ಅಮಾನತು ಮಾಡಿರುವುದಾಗಿ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್‌ಕರ್ ತಿಳಿಸಿದರು.

ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್‌ ಓಬ್ರಿಯಾನ್ ಅವರನ್ನು ‘ಅಶಿಸ್ತಿನ ವರ್ತನೆಗಾಗಿ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸುವ ನಿರ್ಣಯವನ್ನು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್‌ಕರ್ ನಿರ್ಣಯ ಮಂಡಿಸಿದರು. ಇದಕ್ಕೆ ವಿಪಕ್ಷಗಳು ಗದ್ದಲ ಸೃಷ್ಟಿಸಿದರೆ, ಆಡಳಿತ ಪಕ್ಷದ ಸದಸ್ಯರು ಬೆಂಬಲ ಸೂಚಿಸಿದರು.

Advertisements

“ಟಿಎಂಸಿ ಸದಸ್ಯ ಡೆರೆಕ್ ಒಬ್ರಿಯಾನ್ ಅವರು ನಿಯಮಗಳನ್ನು ಗೌರವಿಸುವುದಿಲ್ಲ. ಇದು ಗಂಭೀರ ದುರ್ನಡತೆಯಾಗಿದೆ. ಇದು ನಾಚಿಕೆಗೇಡಿನ ಸಂಗತಿಯಾಗಿದೆ. ಹಾಗಾಗಿ, ರಾಜ್ಯಸಭೆಯ ನಿಯಮ 256ರ ಅನ್ವಯ ಡೆರೆಕ್ ಒಬ್ರಿಯಾನ್ ಅವರನ್ನು ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ” ಎಂದು ತಿಳಿಸಿದರು.

ಈ ನಡುವೆ ಡೆರೆಕ್‌ ಓಬ್ರಿಯಾನ್ ಸಹಿತ ವಿಪಕ್ಷಗಳ ಸದಸ್ಯರು, ‘ಸರ್ವಾಧಿಕಾರಿ ನಡೆ ಸರಿಯಲ್ಲ’ ಎಂದು ಘೋಷಣೆ ಕೂಗ ತೊಡಗಿದರು. ಈ ಹಿನ್ನೆಲೆಯಲ್ಲಿ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್‌ಕರ್ ಕಲಾಪವನ್ನು ಮತ್ತೆ 2 ಗಂಟೆಗೆ ಮುಂದೂಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

Download Eedina App Android / iOS

X