ರಾಜ್ಯಸಭಾ ಚುನಾವಣೆ | ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್‌ ಅಡ್ಡ ಮತದಾನ

Date:

Advertisements

ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಅಡ್ಡಮತದಾನ ಮಾಡಿದ್ದಾರೆ ಎಂದು ವರದಿಯಾಗಿದೆ.

ಎಸ್.ಟಿ.ಸೋಮಶೇಖರ್ ಅವರು ಅಡ್ಡ ಮತದಾನ ಮಾಡಿದ್ದಾರೆ ಎಂದು ಬಿಜೆಪಿಯ ಚುನಾವಣಾ ಏಜೆಂಟರೊಬ್ಬರು ಇದನ್ನು ಖಚಿತಪಡಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಮತ ಚಲಾಯಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್‌ಗೆ ತೋರಿಸಿದ್ದೇನೆ’ ಎಂದರು.

Advertisements

ಸೋಮಶೇಖ‌ರ್ ಅವರು ಅಡ್ಡ ಮತದಾನದ ಕುರಿತು ಸ್ಪಷ್ಟವಾಗಿ ಏನನ್ನೂ ಹೇಳಲಿಲ್ಲ. ಆದರೆ, ಅವರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿರುವ ಸಾಧ್ಯತೆ ಇದೆ ಎಂಬ ಚರ್ಚೆ ಶಾಸಕರ ಮಧ್ಯೆ ನಡೆದಿದೆ.

ಮತ ಚಲಾಯಿಸುವ ಮೊದಲು ಮಾತನಾಡಿದ್ದ ಸೋಮಶೇಖರ್, “ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಲು ಪ್ರಯತ್ನಿಸಿದ್ದೆ. ಆದರೆ ಅವರು ಕಾಲಾವಕಾಶ ನೀಡಿರಲಿಲ್ಲ” ಎಂದು ದೂರಿದರು.

“ಅಭಿವೃದ್ಧಿಗೆ ಯಾರು ಅನುದಾನ ಕೊಡುತ್ತಾರೋ ಅವರಿಗೆ ಮತ ಹಾಕುತ್ತೇನೆ’ ಎಂದು ಈ ಹಿಂದೆ ಸೋಮಶೇಖ‌ರ್ ಹೇಳಿದ್ದನ್ನು ಗಮನಿಸಬಹುದು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X