27 ವರ್ಷಗಳ ಬಳಿಕ ಉಭಯ ಸದನಗಳಲ್ಲೂ ಅಂಗೀಕಾರಗೊಂಡ ಮಹಿಳಾ ಮೀಸಲಾತಿ ಮಸೂದೆ

Date:

Advertisements
  • ರಾಜ್ಯಸಭೆಯಲ್ಲಿ 215 ಮಂದಿಯಿಂದ ಮಹಿಳಾ ಮೀಸಲಾತಿ ಮಸೂದೆ ಪರ ಮತ; ಅಂಗೀಕಾರ
  • ನಿಗದಿತ ಐದು ದಿನಗಳಿಗಿಂತ ಒಂದು ದಿನ ಮೊದಲೇ ಮುಕ್ತಾಯಗೊಂಡ ವಿಶೇಷ ಅಧಿವೇಶನ

ಸಂಸತ್ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಒದಗಿಸುವ ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆಯಲ್ಲೂ ಗುರುವಾರ ತಡರಾತ್ರಿ ಅಂಗೀಕಾರಗೊಂಡಿದೆ.

ರಾಜ್ಯಸಭೆಯಲ್ಲಿ 215 ಮಂದಿ ಮಸೂದೆ ಪರ ಮತ ಚಲಾವಣೆ ಮಾಡಿದ್ದಾರೆ. ಆದರೆ, ಮಸೂದೆ ವಿರುದ್ಧ ಯಾವುದೇ ಮತಗಳು ಚಲಾವಣೆಯಾಗಿಲ್ಲ. ಇದರೊಂದಿಗೆ ಸಂಸತ್ತಿನ ಉಭಯ ಸದನಗಳಲ್ಲಿಯೂ ಮಸೂದೆ ಅಂಗೀಕಾರವಾಗಿದ್ದು, ಇನ್ನು ಮಸೂದೆ ಅಂಗೀಕಾರಕ್ಕೆ ರಾಷ್ಟ್ರಪತಿ ಅಂಕಿತ ಮಾತ್ರ ಬಾಕಿ ಉಳಿದಿದೆ. ಇದರೊಂದಿಗೆ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

27 ವರ್ಷಗಳ ಬಳಿಕ ಉಭಯ ಸದನಗಳಲ್ಲೂ ಬಹುಚರ್ಚಿತ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಗೊಂಡಿದ್ದು, ದೇಶದ ಇತಿಹಾಸದಲ್ಲಿ ಮಹತ್ವದ ಮೈಲುಗಲ್ಲಾಗಿ ಗುರುತಿಸಿದೆ.

Advertisements

ಸುಮಾರು 11 ಗಂಟೆಗಳ ಚರ್ಚೆಯ ನಂತರ ಮಹಿಳಾ ಮೀಸಲಾತಿ ಮಸೂದೆಯು ರಾಜ್ಯಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರಗೊಂಡಿದೆ. ಈ ಮಸೂದೆಯನ್ನು ಲೋಕಸಭೆ ಬುಧವಾರ ಅಂಗೀಕರಿಸಿತ್ತು.

ರಾಷ್ಟ್ರಪತಿ ಅಂಕಿತವಾದ ಬಳಿಕ ಇನ್ನು ಮುಂದೆ ಇದು ಕಾನೂನಾಗಿ ಜಾರಿಗೆ ಬರಲಿದೆ. ಲೋಕಸಭೆಯಲ್ಲಿ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಕಾನೂನಾಗಿ ಜಾರಿಯಾಗಲಿದೆ. ನೂತನ ಸಂಸತ್ ಭವನದಲ್ಲಿ ಅಂಗೀಕಾರಗೊಂಡ ಮೊದಲ ಮಸೂದೆ ಇದಾಗಿದೆ.

ಮಸೂದೆ ಅಂಗೀಕರಿಸಿದ ನಂತರ ಮಾತನಾಡಿದ ರಾಜ್ಯಸಭಾ ಅಧ್ಯಕ್ಷ, ಉಪರಾಷ್ಟ್ರಪತಿ ಜಗದೀಪ್ ಧನಕರ್, ಇದು ಐತಿಹಾಸಿಕ ಸಾಧನೆಯಾಗಿದೆ ಎಂದು ಹೇಳಿದರು. ನಂತರ ರಾಜ್ಯಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.

ನಿಗದಿಯಂತೆ ಸೆಪ್ಟೆಂಬರ್ 22ರ ಶುಕ್ರವಾರದ ತನಕ ಸಂಸತ್ ಉಭಯ ಸದನಗಳ ವಿಶೇಷ ಅಧಿವೇಶನ ನಡೆಯಬೇಕಿತ್ತು. ಆದರೆ ಗುರುವಾರವೇ ಅಧಿವೇಶನ ಮುಕ್ತಾಯಗೊಂಡಿದೆ.

ಮಸೂದೆ ಅಂಗೀಕಾರಗೊಂಡ ಬಳಿಕ ನೂತನ ಸಂಸತ್ ಭವನದ ಹೊರಗಡೆ ಒಟ್ಟುಗೂಡಿದ ಹೆಚ್ಚಿನ ಮಹಿಳಾ ಸಂಸದರು, ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಿದರು. ಆ ಬಳಿಕ ಟ್ವೀಟ್ ಮಾಡಿದ ಪ್ರಧಾನಿ, ಮಸೂದೆ ಅಂಗೀಕಾರಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X