ಅಯೋಗ್ಯ ರಾಜಕಾರಣಿಗಳಿಗೆ ರಾಮ ಬರೀ ರಾಜಕೀಯ ಲಾಭದ ಸರಕು ಅಷ್ಟೇ: ನಟ ಕಿಶೋರ್

Date:

Advertisements

ಶಂಕರಾಚಾರ್ಯರುಗಳನ್ನೂ ಹಿಂದೂ ವಿರೋಧಿಗಳು ದೇಶ ವಿರೋಧಿಗಳೆಂದು ಟ್ರೋಲ್ ಮಾಡುತ್ತಾರೆಯೇ ಎಂದು ಬಹುಭಾಷಾ ಚಿತ್ರನಟ ಕಿಶೋರ್ ಸವಾಲು ಹಾಕಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಕಿಶೋರ್‌, “ರಾಮ ಮಂದಿರದ ರಾಜಕೀಕರಣವನ್ನು ವಿರೋಧಿಸುತ್ತಿರುವ ಶಂಕರಾಚಾರ್ಯರುಗಳು ಹಿಂದೂ ವಿರೋಧಿಗಳಲ್ಲವೆಂದರೆ ನಿಜವಾದ ಹಿಂದೂ ವಿರೋಧಿಗಳು ಯಾರು” ಎಂದು ಪ್ರಶ್ನಿಸಿದ್ದಾರೆ.

”ಅಸಲಿ ಹಿಂದೂ ವಿರೋಧಿ ಯಾರು? ಧರ್ಮದ ರಾಜಕೀಕರಣವನ್ನು ವಿರೋಧಿಸುವವರನ್ನು ಹಿಂದೂ ವಿರೋಧಿಗಳು, ದೇಶ ವಿರೋಧಿಗಳೆಂದು ಟ್ರೋಲ್ ಮಾಡುವ ವಿಶ್ವಗುರು ಭಕ್ತರು ಮತ್ತು ತನ್ನ ವೃತ್ತಿಧರ್ಮಕ್ಕೆ ದ್ರೋಹ ಬಗೆದ ಗೋದಿ ಮಾಧ್ಯಮದವರು ಈಗೇನು ಮಾಡುತ್ತಾರೆ?” ಎಂದು ಕೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನ್ನಪೂರ್ಣಿ ‘ನಿಷೇಧ’- ಧರ್ಮಗಳ ನಡುವೆ ಬೆಂಕಿ ಇಟ್ಟು ಬೇಳೆ ಬೇಯಿಸುವ ಕೃತ್ಯ

“ಅರ್ಧಂಬರ್ಧ ದೇವಸ್ಥಾನದ ಉದ್ಘಾಟನೆ ಮಾಡಿ ಓಟು ಬಾಚಲು ನಿಂತಿರುವ ಧೂರ್ತರು ಅವರ ಅಂಧಭಕ್ತರು ಹಿಂದೂ ವಿರೋಧಿಗಳೇ ಅಲ್ಲವೇ? ಅವರ ಧರ್ಮಾಂಧತೆಯ ಮಂಕುಬೂದಿಯ ಭ್ರಮೆಯಲ್ಲಿ ಮಂತ್ರಾಕ್ಷತೆ ಹಂಚುತ್ತಿರುವವರೂ ಅದೇ ಆಗಿಬಿಡುವುದಿಲ್ಲವೇ? ಈ ಅಯೋಗ್ಯ ರಾಜಕಾರಣಿಗಳಿಗೆ ರಾಮ ಬರೀ ರಾಜಕೀಯ ಲಾಭಕ್ಕಾಗಿಯೇ ಇರುವ ವ್ಯಾಪಾರದ ಸರಕು ಅಷ್ಟೇ” ಎಂದು ಟೀಕಿಸಿದ್ದಾರೆ.

“ನಿಜವಾದ ದೈವವೆನ್ನುವ ನಂಬಿಕೆ ಇರುವುದು ಮಂದಿರ ಮಸೀದಿ ಚರ್ಚುಗಳಲ್ಲಲ್ಲ, ಗಾಂಧಿಯಂತೆ, ಜೀವನದ ಪ್ರತಿ ನಡೆಯಲ್ಲಿ ರಾಮ.. ಪ್ರತಿ ನುಡಿಯಲ್ಲಿ ರಾಮ.. ಸಾವಲ್ಲೂ ಹೇ ರಾಮ.. ಈ ಢೋಂಗಿಗಳಿಗೆ ಎಂದಾದರೂ ಅದು ಸಾಧ್ಯವೇ? ಎಷ್ಟೇ ಆಗಲಿ ಆ ಗಾಂಧಿಯನ್ನು ಕೊಂದವರಲ್ಲವೇ..” ಎಂದು ಕುಟುಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಅಂಧ ಭಕ್ತರಿಗೆ ನಟ ಕಿಶೋರ್ ಅವರು ನೀಡಿರುವ ‘ಗುಳಿಗೆ’ ಕಹಿಯಾಗಬಹುದು. ಕಹಿಯಾದರೂ ಪರವಾಗಿಲ್ಲ , ರೋಗ ಗುಣವಾಗಬೇಕು ಎಂದಿದ್ದರೆ ಅವರು ಈ ಗುಳಿಗೆಯನ್ನು ಸೇವಿಸಲೇಬೇಕು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X