ಬೆಳೆ ಪರಿಹಾರಕ್ಕೆ ಸರ್ಕಾರ ₹500 ಕೊಟ್ಟರೆ ದೊಡ್ಡದು, ಅದು ಏನಕ್ಕೂ ಸಾಲಲ್ಲ: ಸಚಿವರ ಮುಂದೆ ರೈತನ ಅಳಲು

Date:

Advertisements

ರಾಮನಗರ ಜಿಲ್ಲೆಯ ಹಾರೋಹಳ್ಳಿ ಪಟ್ಟಣದಲ್ಲಿ ಬುಧವಾರ ತಾಲೂಕಿನ ಬರಪೀಡಿತ ಪ್ರದೇಶಗಳ ವೀಕ್ಷಣೆ ಮತ್ತು ರೈತರ ಜೊತೆ ಸಮಾಲೋಚನೆ ಕಾರ್ಯಕ್ರಮವು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ನಡೆಯಿತು.

ಈ ವೇಳೆ ರಾಮೋಹಳ್ಳಿಯ ರೈತ ರಾಮಚಂದ್ರ ಎಂಬುವವರು, ”ನಾವು ಬಿತ್ತನೆ ಮಾಡಿದ್ದರೂ ಮಳೆ‌‌ ಇಲ್ಲದೆ ಬೆಳೆ ಬರುವ ಗ್ಯಾರಂಟಿ‌ ಇಲ್ಲ. ನೀವು ಕೊಡುವ ಬರ ಪರಿಹಾರದ ಚೆಕ್ ಕೇವಲ ₹100, ₹150. ಹೆಚ್ಚಿಗೆ ಎಂದರೆ ₹500 ಕೊಟ್ಟರೆ ದೊಡ್ಡದು. ಇದು ಯಾವುದಕ್ಕೂ ಸಾಲುವುದಿಲ್ಲ. ಬೆಳೆಹಾನಿ ಮತ್ತು ಬರ ಪರಿಹಾರವು ರೈತರ ನಷ್ಟ ತುಂಬಿ ಕೊಡುವಂತಿರಬೇಕು” ಎಂದು ತನ್ನ ಅಳಲನ್ನು ತೋಡಿಕೊಂಡ ಬೆಳವಣಿಗೆ ನಡೆಯಿತು.

ಇದೇ ವೇಳೆ ಸಮಾಲೋಚನೆ ಕಾರ್ಯಕ್ರಮದಲ್ಲಿ ಹಲವು ಮಂದಿ ರೈತರು, ‘ಹಾರೋಹಳ್ಳಿ ಹಲವು ವಿಷಯದಲ್ಲಿ ಹಿಂದುಳಿದಿದೆ. ತಾಲೂಕು ಕಚೇರಿಗಳು, ಆಸ್ಪತ್ರೆ, ಶಾಲಾ- ಕಾಲೇಜು ಸೇರಿದಂತೆ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಕೈಗಾರಿಕಾ ಪ್ರದೇಶವಿದ್ದರೂ ಜನ ಇಂದಿಗೂ ತಮ್ಮ ಕಸುಬನ್ನೇ ಅವಲಂಬಿಸಿದ್ದಾರೆ. ಬರದಿಂದ ತತ್ತರಿಸಿರುವ ಅವರ ನೆರವಿಗೆ ಸರ್ಕಾರ ಬರಬೇಕು’ ಎಂದು ಒತ್ತಾಯಿಸಿದರು.

Advertisements

Harohalli

ಇದಕ್ಕೆ ಸ್ಪಂದಿಸಿದ ಸಚಿವ ರಾಮಲಿಂಗಾರೆಡ್ಡಿ, ‘ಕೇಂದ್ರ ಸರ್ಕಾರ ಸ್ಪಂದಿಸದಿದ್ದರೂ, ರಾಜ್ಯ ಸರ್ಕಾರ ಸದಾ ರೈತರ ಪರವಾಗಿರಲಿದೆ. ಅನ್ನದಾತರ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ, ಹೊಸ ತಾಲೂಕು ಆಗಿರುವ ಹಾರೋಹಳ್ಳಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ’ ಎಂದು ಭರವಸೆ ನೀಡಿದರು.

ಇದೇ ವೇಳೆ ಕಾರ್ಯಕ್ರಮದಲ್ಲಿದ್ದ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಮಾತನಾಡಿ, ‘ನಾವೆಲ್ಲರೂ ರೈತಾಪಿ ವರ್ಗದವರು. ರೇಷ್ಮೆ ಮತ್ತು ಹಾಲು ಉತ್ಪಾದನೆಯೇ ನಮ್ಮ ಬದುಕಿಗೆ ಆಧಾರ. ಈ ಸಲ ಬರದಿಂದಾಗಿ ಇವುಗಳ ಮೇಲೆ ಕರಿಮೋಡ ಆವರಿಸಿದೆ. ಮಳೆ ಕೊರತೆಯಿಂದಾಗಿ ಬಿತ್ತನೆ ಕುಂಠಿತವಾಗಿದೆ. ಹಾಲು ಖರೀದಿ ದರ ಕಡಿತ ಮಾಡಿರುವುದು ಹೈನುಗಾರಿಕೆ ನೆಚ್ಚಿಕೊಂಡಿರುವವರಿಗೆ ಹೊಡೆತ ಕೊಟ್ಟಿದೆ. ರೇಷ್ಮೆಗೆ ಪ್ರೋತ್ಸಾಹ ಸಿಗುವ ನಿರೀಕ್ಷೆಯಲ್ಲಿ ರೈತರು ಇದ್ದಾರೆ’ ಎಂದು ಸಚಿವರಲ್ಲಿ ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X