ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಆರೋಪ ಪ್ರಕರಣ ಇನ್ನೂ ಚರ್ಚೆಯಲ್ಲಿರುವಾಗಲೇ ಬೆಂಗಳೂರಿನ ವೈಟ್ಫೀಲ್ಢ್ನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ 1ರ ಸುಮಾರಿಗೆ ಬಾಂಬ್ ಸ್ಫೋಟ ಸಂಭವಿಸಿತ್ತು.
ಈ ಘಟನೆ ನಡೆದಾಗ ಯಾರಿಗೂ ಸ್ಪಷ್ಟ ಮಾಹಿತಿ ಇರಲಿಲ್ಲ. ಇದೊಂದು ನಿಗೂಢ ಸ್ಫೋಟ ಎಂದೇ ಹೆಚ್ಚಿನ ಮಾಧ್ಯಮಗಳು ವರದಿ ಮಾಡಿತ್ತು.
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಕುರಿತು ಪೊಲೀಸ್ ಅಧಿಕಾರಿಗಳಾಗಲೀ, ಗೃಹ ಸಚಿವರಾಗಲೀ ಮತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿಕೆ ನೀಡುವ ಮುನ್ನವೇ ‘ನಡೆದಿರುವುದು ಬಾಂಬ್ ಬ್ಲಾಸ್ಟ್’ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವುದು ಈಗ, ಸೋಷಿಯಲ್ ಮೀಡಿಯಾಗಳಲ್ಲಿ ಚರ್ಚೆ ಕಾರಣವಾಗುವುದರ ಜೊತೆಗೆ, ಅನುಮಾನಕ್ಕೂ ಎಡೆ ಮಾಡಿಕೊಟ್ಟಿದೆ.
Just spoke to Rameshwaram Café founder Sri Nagaraj about the blast in his restaurant.
He informed me that the blast occurred because of a bag that was left by a customer and not any cylinder explosion. One of their employees is injured.
It’s seems to be a clear case of bomb…
— Tejasvi Surya (@Tejasvi_Surya) March 1, 2024
ದೇಶದ ಭದ್ರತೆಯಂತಹ ಇಂತಹ ಗಂಭೀರ, ಸೂಕ್ಷ್ಮ ಪ್ರಕರಣಗಳು ನಡೆದಾಗ ಸರಿಯಾದ ಮಾಹಿತಿಯನ್ನು ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳು ಅಥವಾ ಮುಖ್ಯಮಂತ್ರಿ, ಗೃಹಸಚಿವರು ಹೇಳಿಕೆ ನೀಡಿ, ಬಹಿರಂಗ ಪಡಿಸುತ್ತಾರೆ. ಆದರೆ ಇವರ ಹೇಳಿಕೆಗಳು ಬರುವ ಮುನ್ನವೇ ತೇಜಸ್ವಿ ಸೂರ್ಯ ನಡೆದಿರುವುದು ‘ಬಾಂಬ್ ಬ್ಲಾಸ್ಟ್’ ಎಂದು ಹೇಳಿರುವುದು ಆಶ್ಚರ್ಯ ಮೂಡಿಸಿದೆ.
ಶುಕ್ರವಾರ ಮಧ್ಯಾಹ್ನ 03:35ಕ್ಕೆ ಟ್ವೀಟ್ ಮಾಡಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, “ನಾನು ಈಗಷ್ಟೇ ಕೆಫೆ ಮಾಲೀಕ ನಾಗರಾಜ್ ಅವರೊಂದಿಗೆ ಮಾತಾಡಿದೆ. ಸಿಲಿಂಡರ್ ಸ್ಫೋಟಿಸಿಲ್ಲ, ಗ್ರಾಹಕನೊಬ್ಬ ಬಿಟ್ಟುಹೋದ ಬ್ಯಾಗ್ ಸ್ಫೋಟಿಸಿದೆ. ಇದು ಬಾಂಬ್ ಬ್ಲಾಸ್ಟ್ ಪ್ರಕರಣವಾಗಿದೆ. ಬೆಂಗಳೂರು ಜನತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಸ್ಪಷ್ಟ ಉತ್ತರ ನಿರೀಕ್ಷಿಸುತ್ತಿದೆ” ಎಂದು ಪೋಸ್ಟ್ ಮಾಡಿದ್ದರು.
ಈ ವೇಳೆಗೆ ಸರ್ಕಾರದ ಪ್ರತಿನಿಧಿಗಳು ಯಾರೂ ಅಧಿಕೃತ ಹೇಳಿಕೆ ನೀಡಿರಲಿಲ್ಲ. ಮತ್ತೊಂದು ಮಹತ್ವದ ವಿಷಯವೆಂದರೆ ಸಿಲಿಂಡರ್ ಸ್ಫೋಟಿಸಿ ಅವಘಡ ನಡೆದಿದೆ ಎಂದು ಯಾವ ಅಧಿಕಾರಿಯೂ ಹೇಳಿಕೆ ನೀಡಿರಲಿಲ್ಲ. ಹಾಗಿದ್ದಾಗ್ಯೂ ಸೂರ್ಯ ಸಿಲಿಂಡರ್ ಸ್ಫೋಟ ಎಂದು ಹೇಳಿದ್ಯಾಕೆ ಎಂಬ ಪ್ರಶ್ನೆ ಉದ್ಭವಿಸಿದೆ.
At first, they tried the narrative of cylinder blast. Now, they are trying the narrative of business rivalry.
Why can’t the Congress Govt allow the investigation agencies to do their job? Why preempt? Why prompt? Vote Bank compulsions?
CM @siddaramaiah must give free hand to…
— Tejasvi Surya (@Tejasvi_Surya) March 1, 2024
ಮೈಸೂರಿನ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಷಯ ಗೊತ್ತಾಗುತ್ತಿದ್ದಂತೆ, “ಸುಧಾರಿತ ಸ್ಫೋಟಕಗಳನ್ನು ಬಳಸಿ ಬಾಂಬ್ ಬ್ಲಾಸ್ಟ್ ನಡೆಸಲಾಗಿದೆ” ಎಂದು ಸ್ಪಷ್ಟವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿದರು. ಅದರ ಜೊತೆಗೆ ರಾಜ್ಯದ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಸಹ ನಡೆದಿರುವುದು ಬಾಂಬ್ ಬ್ಲಾಸ್ಟ್ ಪ್ರಕರಣ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದರು. ಯಾರೂ ಸಹ ಬಾಂಬ್ ಬ್ಲಾಸ್ಟ್ ಆಗಿರುವುದನ್ನು ಮುಚ್ಚಿಡದೇ ಇದ್ದರೂ ತೇಜಸ್ವಿ ಸೂರ್ಯ ಊಹೆಯ ಮೇಲೆ ಹೇಳಿಕೆ ನೀಡಿದ್ದು ಯಾಕೆ ಎಂಬ ಪ್ರಶ್ನೆ ಮೂಡುತ್ತದೆ.
ಇಷ್ಟೇ ಅಲ್ಲದೆ, ಸಂಜೆ 7 ಗಂಟೆ ಸುಮಾರಿಗೆ ಎಕ್ಸ್ ನಲ್ಲಿ ಮತ್ತೊಂದು ಪೋಸ್ಟ್ ಮಾಡಿದ ತೇಜಸ್ವಿ ಸೂರ್ಯ, ಮೊದಲು ಸಿಲಿಂಡರ್ ಸ್ಫೋಟ ಎಂದರು, ಈಗ ವೃತ್ತಿ ವೈಷಮ್ಯಕ್ಕಾಗಿ ಘಟನೆ ನಡೆದಿದೆ ಎನ್ನುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ತನಿಖಾ ಸಂಸ್ಥೆಗಳಿಗೆ ಯಾಕೆ ಸರಿಯಾಗಿ ಕೆಲಸ ಮಾಡಲು ಬಿಡುತ್ತಿಲ್ಲ ಎಂದು ಹೇಳಿಕೆ ನೀಡಿದ್ದರು.
ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹ ಸಚಿವರಾದಿಯಾಗಿ ಸಚಿವ ಸಂಪುಟದ ಹಲವರು ಘಟನೆ ಕುರಿತು ಪ್ರತಿಕ್ರಿಯೆ ನೀಡಿದ್ದರೂ ಯಾರೂ ಸಹ ವೃತ್ತಿವೈಷಮ್ಯದ ಕಾರಣಕ್ಕೆ ಘಟನೆ ನಡೆದಿದೆ ಎಂದು ಹೇಳಿರಲಿಲ್ಲ. ವೃತ್ತಿ ವೈಷಮ್ಯ ಸೇರಿ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸುವುದಾಗಿ ಡಿ ಕೆ ಶಿವಕುಮಾರ್ ತಿಳಿಸಿದ್ದರು. ಇದನ್ನೇ ಬಳಸಿಕೊಂಡ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಬಾಂಬ್ ಬ್ಲಾಸ್ಟ್ ಘಟನೆಗೆ ವೃತ್ತಿ ವೈಷಮ್ಯದ ಆಯಾಮವನ್ನು ತಂದಿದ್ದು ಯಾಕೆ ಎಂಬ ಪ್ರಶ್ನೆಯೂ ಈಗ ಸಾರ್ವಜನಿಕರಲ್ಲಿ ಮೂಡಿದೆ.
ಕರ್ನಾಟಕದ ಕಾಂಗ್ರೆಸ್ ಪಕ್ಷವು ಅಸೆಂಬ್ಲಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆಗಳನ್ನು ಬಹಿರಂಗವಾಗಿ ಎತ್ತಿದಾಗ, ಬೆಂಗಳೂರಿನ ರೆಸ್ಟೋರೆಂಟ್ನಲ್ಲಿ ಭಯೋತ್ಪಾದಕ ಸ್ಫೋಟದ ದೊಡ್ಡ ವಿಷಯವೇನು?@BJP4Karnataka @BJPMM4Karnatak @BYVijayendra https://t.co/DQrPvbC0K2
— Dr.Radha mohan das agrawal (@AgrawalRMD) March 1, 2024
ಬಾಂಬ್ ಬ್ಲಾಸ್ಟ್ ಪ್ರಕರಣದಂತಹಾ ಘಟನೆಗಳು ನಡೆದ ಕೂಡಲೇ ದೇಶದ ಹಿತಾಸಕ್ತಿಯಿಂದ ಒಂದಾಗಿ ನಿಲ್ಲುವ ಬದಲು, ರಾಜಕೀಯ ಕೆಸರೆರಚಾಟ ಮಾಡುವುದು ಈಗಿನ ಪರಿಸ್ಥಿತಿಯಲ್ಲಿ ಮಾಮೂಲಿಯಾಗಿ ಹೋಗಿದೆ. ರಾಜ್ಯ ಬಿಜೆಪಿ ಘಟಕ ಅತಿ ಉತ್ಸಾಹದಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿರುವುದು, ಇಂದು ಬಿಜೆಪಿ ನಾಯಕರು ನೀಡುತ್ತಿರುವ ಹೇಳಿಕೆಯಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿದೆ.
ಇದನ್ನು ಓದಿದ್ದೀರಾ? ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಕೇಂದ್ರದ ವೈಫಲ್ಯ ಕಾರಣವಲ್ಲವೇ ?
ಬಿಜೆಪಿ ಕಚೇರಿಯಲ್ಲಿ ಸಂಜೆ ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಮೇಶ್ವರಂ ಕೆಫೆ ಸ್ಫೋಟ ಘಟನೆಗೆ ಕಾಂಗ್ರೆಸ್ನ ಓಲೈಕೆ ರಾಜಕಾರಣವೇ ಕಾರಣ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದಾಗಲೆಲ್ಲ ಪುಂಡು ಪೋಕರಿಗಳಿಗೆ ರೆಕ್ಕೆ ಬರುತ್ತದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟಿಸಿದವರನ್ನು ಬ್ರದರ್ ಎಂದಿದ್ದರು. ರಾಮೇಶ್ವರ ಕೆಫೆಯಲ್ಲಿ ಸ್ಫೋಟ ಮಾಡಿದವರನ್ನು ಅಂಕಲ್ ಎನ್ನಬಹುದು ಎನ್ನುವ ಮೂಲಕ ಈ ಘಟನೆಯ ಹಿಂದೆ ನಿರ್ದಿಷ್ಟ ಸಮುದಾಯದ ಅಂದರೆ ಪರೋಕ್ಷವಾಗಿ ಮುಸ್ಲಿಮರು ಇದ್ದಾರೆ ಎನ್ನುವಂತಹ ಮಾತುಗಳನ್ನು ಆಡುತ್ತಿದ್ದಾರೆ.
ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಆದಾಗ ಆರೋಪಿಯನ್ನು ಮೈ ಬ್ರದರ್ಸ್ ಎಂದು ಡಿಕೆಶಿ ಹೇಳಿದ್ದರು. ಸಮಾಜಘಾತುಕರ ವಿರುದ್ಧ ಕಾಂಗ್ರೆಸ್ ಸರ್ಕಾರ ಹೊಂದಿರುವ ಮೃದು ಧೋರಣೆಯು ಇಂದು ರಾಜ್ಯವನ್ನು ಆತಂಕದಲ್ಲಿರಿಸಿದೆ.
ಪಾಕಿಸ್ಥಾನ ಪರವಾದ ಘೋಷಣೆಯ ಎಫ್ಎಸ್ಎಲ್ ವರದಿಯನ್ನು ಯಾವುದೇ ಕಾರಣಕ್ಕೂ ತಿರುಚದೆ, ಯಥಾವತ್ತಾಗಿ ಸ್ವೀಕರಿಸಿ ಕಾನೂನು ಕ್ರಮ… pic.twitter.com/gI4VORPLlq
— BJP Karnataka (@BJP4Karnataka) March 1, 2024
ಪೊಲೀಸರು ತನಿಖೆ ನಡೆಸಿ, ವಿವರಗಳನ್ನು ಬಹಿರಂಗಗೊಳಿಸುವುದಕ್ಕೂ ಮುನ್ನವೇ, ಬಿಜೆಪಿಯವರು ಈ ಘಟನೆಯನ್ನು ತಮ್ಮ ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿರುವುದು ವಿಷಾದದ ಸಂಗತಿ.